ಐಇಡಿ ಬಳಸಿ ಎಟಿಎಂ ಸ್ಫೋಟ, 30 ಲಕ್ಷ ನಗದು ದೋಚಿ ದರೋಡೆಕೋರರು ಪರಾರಿ!
ಇದೇ ತಂಡ ಇಲ್ಲಿಯೂ ಈ ಕೃತ್ಯ ಎಸಗಿರಬಹುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
Team Udayavani, Jul 21, 2021, 6:12 PM IST
ಪುಣೆ: ಪುಣೆಯ ಪಿಂಪ್ರಿ ಚಿಂಚ್ ವಾಡ್ ನಲ್ಲಿ ದರೋಡೆಕೋರರು ಎಟಿಎಂ ಕಿಯೋಸ್ಕ್ ಅನ್ನು ಸ್ಫೋಟಗೊಳಿಸಿ 30 ಲಕ್ಷ ರೂಪಾಯಿ ನಗದನ್ನು ಕದ್ದೊಯ್ದಿದ್ದಾರೆ. ಆದರೆ ದರೋಡೆಕೋರರು ಆತುರದಲ್ಲಿ ಹತ್ತು ಲಕ್ಷ ರೂ. ನಗದನ್ನು ಅಲ್ಲೇ ಬಿಟ್ಟು ಹೋಗಿರುವುದಾಗಿ ವರದಿ ವಿವರಿಸಿದೆ.
ಇದನ್ನೂ ಓದಿ:ಡಿಜಿಲಾಕರ್ ನಲ್ಲಿ ಪಾನ್ ಸ್ಟೋರ್ ಮಾಡುವುದು ಹೇಗೆಂದು ನಿಮಗೆ ತಿಳಿದಿದೆಯೇ.?ಇಲ್ಲಿದೆ ಮಾಹಿತಿ
ಸುಧಾರಿತ ಸ್ಫೋಟಕ ಸಾಧನ (ಐಇಡಿ) ಬಳಸಿ ಎಟಿಎಂ ಅನ್ನು ಸ್ಫೋಟಗೊಳಿಸಿರುವ ಸಾಧ್ಯತೆ ಇದ್ದಿರುವುದಾಗಿ ತನಿಖಾ ಅಧಿಕಾರಿಗಳು ಶಂಕಿಸಿದ್ದಾರೆ. ಈ ಘಟನೆ ಜುಲೈ 18ರಂದು ನಡೆದಿದ್ದು, ಇದು ರಾಜ್ಯದಲ್ಲಿ ನಡೆಯುತ್ತಿರುವ ಕಳ್ಳತನದ ಎಚ್ಚರಿಕೆಯ ಕರೆ ಗಂಟೆಯಾಗಿದೆ. ಈ ಪ್ರಕರಣದ ತನಿಖೆಗೆ ಇದೀಗ ಮಹಾರಾಷ್ಟ್ರದ ಭಯೋತ್ಪಾದಕ ನಿಗ್ರಹ ದಳ ಕೈಜೋಡಿಸಿದೆ ಎಂದು ವರದಿ ವಿವರಿಸಿದೆ.
ಚಾಕನ್ ಪ್ರದೇಶದಲ್ಲಿನ ಸಿಸಿಟಿವಿಯಲ್ಲಿ ಸೆರೆಯಾಗಿರುವ ದೃಶ್ಯದಲ್ಲಿ ಎಟಿಎಂ ಯಂತ್ರ ಸ್ಫೋಟದ ತೀವ್ರತೆಗೆ ಎರಡು ಭಾಗವಾಗಿರುವುದು ಪತ್ತೆಯಾಗಿದೆ. ಹೆಚ್ಚಿನ ಸಾಕ್ಷ್ಯಾಧಾರ ಸಂಗ್ರಹಕ್ಕಾಗಿ ಪೊಲೀಸರು ಶ್ವಾನದಳದೊಂದಿಗೆ ಸ್ಥಳವನ್ನು ಪರಿಶೀಲನೆ ನಡೆಸಿರುವುದಾಗಿ ವರದಿ ತಿಳಿಸಿದೆ.
ಕೆಲವು ದಿನಗಳ ಹಿಂದಷ್ಟೇ ಪುಣೆಯ ಗ್ರಾಮೀಣ ಪ್ರದೇಶವಾದ ರಾಜನ್ ಗ್ರಾಮದಲ್ಲಿಯೂ ಇದೇ ರೀತಿ ದರೋಡೆಕೋರರು ಎಟಿಎಂ ಯಂತ್ರವನ್ನು ಸ್ಫೋಟಿಸಲು ಪ್ರಯತ್ನಿಸಿದ್ದರು. ಆದರೆ ಎಟಿಎಂ ಯಂತ್ರಕ್ಕೆ ಹೆಚ್ಚು ಹಾನಿಯಾಗದ ಪರಿಣಾಮ ನಗದು ಹಣ ಸಿಕ್ಕಿರಲಿಲ್ಲವಾಗಿತ್ತು. ಇದೇ ತಂಡ ಇಲ್ಲಿಯೂ ಈ ಕೃತ್ಯ ಎಸಗಿರಬಹುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ