ಸತತ 2ನೇ ದಿನವೂ ವಾದ್ರಾ ವಿಚಾರಣೆ
Team Udayavani, Feb 8, 2019, 12:30 AM IST
ಹೊಸದಿಲ್ಲಿ: ರಾಷ್ಟ್ರ ರಾಜಧಾನಿಯ ಹೃದಯ ಭಾಗದ ಜಾಮ್ ನಗರ್ ಕಟ್ಟಡದಲ್ಲಿರುವ ಜಾರಿ ನಿರ್ದೇಶನಾಲಯದ ಕಚೇರಿಯಲ್ಲಿ ಗುರುವಾರ ಇಬ್ಬರು ಗಣ್ಯ ವ್ಯಕ್ತಿಗಳ ವಿಚಾರಣೆ ನಡೆಯಿತು. ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಅವರ ಪತಿ ರಾಬರ್ಟ್ ವಾದ್ರಾ ಹಾಗೂ ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರ ವಿಚಾರಣೆಯೂ ನಡೆಯಿತು.
ಬುಧವಾರ ವಾದ್ರಾರನ್ನು ಐದೂವರೆ ಗಂಟೆ ವಿಚಾರಣೆ ನಡೆಸಿದ್ದ ಅಧಿಕಾರಿಗಳು, ಗುರುವಾರ ಪುನಃ ವಿಚಾರಣೆಗೊಳಪಡಿಸಿದರು. ವಾದ್ರಾ ಲಂಡನ್ನಲ್ಲಿ 2005ರಿಂದ 2010ರ ನಡುವೆ ಖರೀದಿಸಿರುವ ಅಂದಾಜು 110 ಕೋಟಿ ರೂ. ಮೌಲ್ಯದ ವಿವಿಧ ಸ್ಥಿರಾಸ್ತಿಗಳ ಬಗ್ಗೆ ಪ್ರಶ್ನಿಸಲಾಯಿತು. ಅದರಲ್ಲೂ, ಲಂಡನ್ನ ಬ್ರ್ಯಾನ್ಸ್ಟನ್ ಸ್ಕ್ವೇರ್ನಲ್ಲಿ 2009ರಲ್ಲಿ 17.77 ಕೋಟಿ ರೂ. ಮೊತ್ತಕ್ಕೆ ಕೊಂಡಿದ್ದ ಬಂಗಲೆಯನ್ನು 60.85 ಕೋಟಿ ರೂ. ವೆಚ್ಚದಲ್ಲಿ ನವೀಕರಣಗೊಳಿಸಿ, ಯಾವುದೇ ಲಾಭವಿಲ್ಲದೆ ಕೊಂಡಿದ್ದ ಬೆಲೆಗೇ 2010ರಲ್ಲಿ ಮಾರಾಟ ಮಾಡಿರುವುದರ ಬಗ್ಗೆ ಕೆಲವು ಪ್ರಶ್ನೆಗಳನ್ನು ಕೇಳಲಾಯಿತು. ಜತೆಗೆ, ಬಂದೂಕು ಬಿಡಿಭಾಗಗಳ ಮಾರಾಟಗಾರ ಸಂಜಯ್ ಭಂಡಾರಿ ಹಾಗೂ ಇತರ ಇಬ್ಬರ ನಡುವೆ ವಾದ್ರಾ ಹೊಂದಿರುವ ವ್ಯವಹಾರಗಳ ಬಗ್ಗೆಯೂ ಪ್ರಶ್ನಿಸಲಾಯಿತು.
ಮತ್ತೂಂದೆಡೆ, ಐಎನ್ಎಸ್ ಮೀಡಿಯಾ ಹಗರಣಕ್ಕೆ ಸಂಬಂಧಿಸಿ, ಕಾರ್ತಿ ಚಿದಂಬರಂ ಗುರುವಾರ ಇ.ಡಿ. ಮುಂದೆ ವಿಚಾರಣೆಗೆ ಹಾಜರಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ