ಪೊಲೀಸ್ ಠಾಣೆಯ ಮೇಲೆ ರಾಕೆಟ್ ದಾಳಿ: ಖಲೀಸ್ಥಾನಿ ಉಗ್ರರ ಕೃತ್ಯ ಶಂಕೆ
Team Udayavani, Dec 10, 2022, 10:29 AM IST
ಚಂಡೀಗಢ: ಪಂಜಾಬ್ ನ ತರನ್ ತರನ್ ನಲ್ಲಿ ಶುಕ್ರವಾರ ತಡರಾತ್ರಿ ಪೊಲೀಸ್ ಠಾಣೆಯ ಮೇಲೆ ರಾಕೆಟ್ ದಾಳಿ ನಡೆದಿದೆ. ಠಾಣೆಯೊಳಗೆ ಗ್ರೆನೇಡ್ ಸ್ಫೋಟವಾಗಿದೆ ಎಂದು ವರದಿ ತಿಳಿಸಿದೆ.
ಘಟನೆಯು ರಾತ್ರಿ ಸುಮಾರು ಒಂದು ಗಂಟೆ ವೇಳೆಗೆ ನಡೆದಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ. ಪೊಲೀಸ್ ಠಾಣೆಯ ಹೊರ ಪಿಲ್ಲರ್ ಗೆ ರಾಕೆಟ್ ಅಪ್ಪಳಿಸಿದ ಕಾರಣ ಕಟ್ಟಡಕ್ಕೂ ಹೆಚ್ಚಿನ ಹಾನಿಯಾಗಿಲ್ಲ ಎಂದು ಮೂಲಗಳು ತಿಳಿಸಿವೆ.
ಇದು ಪರಿಣಾಮಕಾರಿ ರಾಕೆಟ್ ಆಗಿದ್ದು, ಆದರೆ ಠಾಣೆಯಲ್ಲಿ ಪಿಲ್ಲರ್ ನ ಮೇಲೆ ಬಿದ್ದು ರಿಬೌಂಡ್ ಆದ ಕಾರಣ ಹೆಚ್ಚಿನ ಹಾನಿ ಉಂಟು ಮಾಡಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಪಂಜಾಬ್ ಡಿಜಿಪಿ ಗೌರವ್ ಯಾದವ್ ಮತ್ತು ಪೊರೆನ್ಸಿಕ್ ತಂಡ ಸ್ಥಳಕ್ಕೆ ಭೇಟಿ ನೀಡಿದೆ.
ಇದನ್ನೂ ಓದಿ:ಸ್ಯಾಂಡಲ್ ವುಡ್ ನಿಂದ ರಶ್ಮಿಕಾ ಬ್ಯಾನ್ ಆಗಿದ್ದು ಹೌದಾ? ನಟಿ ಹೇಳುವುದೇನು?
ಪಾಕಿಸ್ಥಾನಿ ಗುಪ್ತಚರ ಪಡೆ ಐಎಸ್ಐ ನ ಬೆಂಬಲ ಪಡೆಯುತ್ತಿರುವ ಖಲಿಸ್ಥಾನಿ ಉಗ್ರ ಸಂಘಟನೆಗಳು ಈ ಕೃತ್ಯ ನಡೆಸಿವೆ ಎನ್ನಲಾಗಿದೆ. ಹರ್ವಿಂದರ್ ಸಿಂಗ್ ರಿಂಡಾ ಅವರ ಸಾವಿಗೆ ಐಎಸ್ಐ ನೀಡಿದ ಪ್ರತಿಕ್ರಿಯೆ ಇದಾಗಿದೆ ಎಂದು ಅಂದಾಜಿಸಲಾಗಿದೆ.
ಗ್ಯಾಂಗ್ ಸ್ಟರ್ ಆಗಿದ್ದುಕೊಂಡು ಇತ್ತೀಚೆಗೆ ಭಯೋತ್ಪಾದಕ ಕೃತ್ಯ ಮಾಡುತ್ತಿದ್ದ ಹರ್ವಿಂದರ್ ಸಿಂಗ್ ರಿಂಡಾ ಇತ್ತೀಚೆಗೆ ಹತ್ಯೆಯಾಗಿದ್ದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ