ಲಾಲು ಸೇವೆಗೆ ಬಂಟರು ಜೈಲಿಗೆ
Team Udayavani, Jan 10, 2018, 6:30 AM IST
ಪಾಟ್ನಾ: ಮೇವು ಹಗರಣದಲ್ಲಿ ಬಿಹಾರ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಜೈಲು ಸೇರುವ ವಿಚಾರ ಗೊತ್ತಾಗುತ್ತಲೇ, ಅವರಿಗೂ ಮೊದಲೇ ಅವರ ಮನೆಯ ಕೆಲಸದಾಳುಗಳು ಜೈಲಲ್ಲಿ ಕಾಯುತ್ತಿದ್ದರು!
ಅದು ಹೇಗೆ ಎಂದು ಯೋಚಿಸುತ್ತಿದ್ದೀರಾ? ತಮ್ಮ ಒಡೆಯ ಇರುವಲ್ಲೇ ನಾವೂ ಇರಬೇಕು ಎಂದು ತೀರ್ಮಾನಿಸಿದ್ದ ನಂಬಿಕಸ್ಥ ಆಳುಗಳು ಇದಕ್ಕಾಗಿ “ಮಾಸ್ಟರ್ ಪ್ಲಾನ್’ ಅನ್ನೇ ರೂಪಿಸಿದ್ದು ಈಗ ಬೆಳಕಿಗೆ ಬಂದಿದೆ. ಲಾಲುಗೆ ಅಡುಗೆ ಮಾಡುವ ಲಕ್ಷ್ಮಣ್ ಮತ್ತು ಸೇವಕ ಮದನ್ ಯಾದವ್ ತಮ್ಮ ವಿರುದ್ಧ ನೆರೆಮನೆ ಯಾತನಿಂದ ಪೊಲೀಸರಿಗೆ ದೂರು ಕೊಡಿಸಿ, ಜೈಲು ಸೇರುವಲ್ಲಿ ಯಶಸ್ವಿಯಾಗಿದ್ದಾರೆ.
ಲಾಲು ಜೈಲು ಸೇರುವುದು ಖಚಿತವಾಗುತ್ತಲೇ ಲಕ್ಷ್ಮಣ್ ಮತ್ತು ಮದನ್ ತಮ್ಮ ನೆರೆಮನೆಯಾತನ ಮೇಲೆ ಹಲ್ಲೆ ಮಾಡಿ, ಆತನಲ್ಲಿದ್ದ 10 ಸಾವಿರ ರೂ.ಗಳನ್ನು ದೋಚಿದ್ದಾರೆ. ಹೀಗಾಗಿ, ಸಹಜವಾಗಿಯೇ ನೆರೆಮನೆಯಾತ ಪೊಲೀಸರಿಗೆ ದೂರು ನೀಡಿದ್ದಾನೆ. ಇದಾದ ಬಳಿಕ ಆರೋಪಿಗಳು ರಾಂಚಿಯಲ್ಲಿನ ಸ್ಥಳೀಯ ಕೋರ್ಟ್ ಮುಂದೆ ಶರಣಾಗಿದ್ದಾರೆ. ನಂತರ ಅವರನ್ನು ಆರ್ಜೆಡಿ ನಾಯಕ ಲಾಲು ಯಾದವ್ ಇರುವ ಬಿರ್ಸಾ ಮುಂಡಾ ಕೇಂದ್ರ ಕಾರಾಗೃಹಕ್ಕೆ ರವಾನಿಸಲಾಯಿತು ಎಂದು “ನ್ಯೂಸ್ 18′ ವರದಿ ಮಾಡಿದೆ. ಪ್ರಕರಣ ದಾಖಲಿಸಿಕೊಂಡ ಠಾಣೆಯ ಎಸ್ಐ ಕೂಡ ಕರ್ತವ್ಯಕ್ಕೆ ಹಾಜರಾಗಿಲ್ಲ.
ಆದರೆ, ಈ ಬೆಳವಣಿಗೆ ಬಗ್ಗೆ ಪ್ರತಿಕ್ರಿಯಿಸಿರುವ ಜೆಡಿಯು, ಲಾಲು ಅವರ ಸೇವೆ ಮಾಡಲೆಂದೇ ಕೆಲಸದಾಳುಗಳನ್ನು ಜೈಲಿಗೆ ಕಳುಹಿಸಲಾಗಿದೆ ಎಂದು ಆರೋಪಿಸಿದೆ. ಆದರೆ, ಇದು ಕೇವಲ ಕಾಕತಾಳೀಯ ಘಟನೆ ಎಂದು ಆರ್ಜೆಡಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ