‘ದೇಶಕ್ಕಾಗಿ ನಿಮ್ಮ ಮನೆ ನಾಯಿಯೂ ಸತ್ತಿಲ್ಲ’ ಎಂದ ಖರ್ಗೆ ಕ್ಷಮೆಗೆ ಬಿಜೆಪಿ ಆಗ್ರಹ


Team Udayavani, Dec 20, 2022, 3:49 PM IST

‘ದೇಶಕ್ಕಾಗಿ ನಿಮ್ಮ ಮನೆ ನಾಯಿಯೂ ಸತ್ತಿಲ್ಲ’ ಎಂದ ಖರ್ಗೆ ಕ್ಷಮೆಗೆ ಬಿಜೆಪಿ ಆಗ್ರಹ

ಹೊಸದಿಲ್ಲಿ: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರ ಹೇಳಿಕೆ ಕುರಿತಂತೆ ಇಂದು ಸಂಸತ್ತಿನಲ್ಲಿ ಭಾರೀ ಗದ್ದಲ ನಡೆಯಿತು. ಖರ್ಗೆ ಅವರು ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಸದಸ್ಯರು ಆಗ್ರಹಿಸಿದರು.

ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯನ್ನು “ಭಾರತ್ ತೋಡೋ (ಭಾರತವನ್ನು ವಿಭಜಿಸಿ)” ಎಂದು ಲೇವಡಿ ಮಾಡಿದ್ದಕ್ಕಾಗಿ ಬಿಜೆಪಿಗೆ ತಿರುಗೇಟು ನೀಡುವ ಸಂದರ್ಭದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿಕೆ ನೀಡಿದ್ದರು.

“ನಿಮ್ಮ ಮನೆಯ ನಾಯಿಯಾದರೂ ದೇಶಕ್ಕಾಗಿ ಸತ್ತಿದೆಯೇ? ಆದರೂ, ಅವರು (ಬಿಜೆಪಿ) ದೇಶಭಕ್ತರೆಂದು ಹೇಳಿಕೊಳ್ಳುತ್ತಾರೆ. ನಾವು ಏನನ್ನಾದರೂ ಹೇಳಿದರೆ ನಮ್ಮನ್ನು ದೇಶದ್ರೋಹಿ ಎಂದು ಕರೆಯಲಾಗುತ್ತದೆ” ಎಂದು ಖರ್ಗೆ ರಾಜಸ್ಥಾನದ ಅಲ್ವಾರ್ ನಲ್ಲಿ ಹೇಳಿದ್ದರು.

ಕಾಂಗ್ರೆಸ್ ಪಕ್ಷವು ದೇಶಕ್ಕೆ ಸ್ವಾತಂತ್ರ್ಯವನ್ನು ತಂದು ಕೊಟ್ಟಿದೆ ಎಂದು ಹೇಳಿದ ಅವರು, ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ಅವರಂತಹ ನಾಯಕರು ತಮ್ಮ ಪ್ರಾಣವನ್ನು ತ್ಯಾಗ ಮಾಡಿದ್ದಾರೆ ಎಂದಿದ್ದರು.

ಇದನ್ನೂ ಓದಿ:ಎರಡನೇ ಹಾಡು ರಿಲೀಸ್‌ ಗೆ ʼಪಠಾಣ್‌ʼ ರೆಡಿ: ಮತ್ತೆ ಬೋಲ್ಡ್‌ ಲುಕ್‌ ನಲ್ಲಿ ಕಾಣಿಸಿಕೊಂಡ ದೀಪಿಕಾ

ಚೀನಾದೊಂದಿಗಿನ ಗಡಿ ಘರ್ಷಣೆಯ ಬಗ್ಗೆ ಸಂಸತ್ತಿನಲ್ಲಿ ಚರ್ಚೆಗೆ ಅವಕಾಶ ನೀಡದಿದ್ದಕ್ಕಾಗಿ ಕಾಂಗ್ರೆಸ್ ಅಧ್ಯಕ್ಷ ಖರ್ಗೆ ಅವರು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. “ಬಿಜೆಪಿ ಸರ್ಕಾರವು ಹೊರನೋಟಕ್ಕೆ ಸಿಂಹದಂತೆ ಮಾತನಾಡುತ್ತಾರೆ, ಆದರೆ ನಿಜವಾಗಿಯೂ ಅವರು ಇಲಿಯಂತೆ ವರ್ತಿಸುತ್ತಾರೆ” ಎಂದು ವ್ಯಂಗ್ಯವಾಡಿದ್ದರು.

ಇಂದು ಸಂಸತ್ತಿನಲ್ಲಿ ಸದನ ಪ್ರಾರಂಭವಾದ ತಕ್ಷಣ ಬಿಜೆಪಿಯು ಖರ್ಗೆ ಕ್ಷಮೆಯಾಚನೆಗೆ ಆಗ್ರಹಿಸಿತು. ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯನ್ನು ನಾವು ಖಂಡಿಸುತ್ತೇವೆ, ಅವರು ಆಕ್ಷೇಪಾರ್ಹ ಭಾಷೆ ಬಳಸಿದ ಮತ್ತು ಸುಳ್ಳು ಹರಡಲು ಪ್ರಯತ್ನಿಸಿದರು. ಅಲ್ವಾರ್ ನಲ್ಲಿ ಆಕ್ಷೇಪಾರ್ಹ ಭಾಷೆ ಬಳಸಿದ್ದಕ್ಕಾಗಿ ಅವರು ಕ್ಷಮೆಯಾಚಿಸಬೇಕು ಎಂದು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ರಾಜ್ಯಸಭೆಯಲ್ಲಿ ಹೇಳಿದ್ದಾರೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.