ಚೆನ್ನೈ: ಪ್ರಾಣ ಪಣಕ್ಕಿಟ್ಟು ರೇಪ್‌ ತಪ್ಪಿಸಿದ ಆರ್‌ಪಿಎಫ್ ಸಿಬಂದಿ 


Team Udayavani, May 25, 2018, 4:48 PM IST

rape.jpg

ಚೆನ್ನೈ : ಕಾಮಾಂಧ ಯುವಕನೊಬ್ಬ ಮಹಿಳಾ ಬೋಗಿಗೆ ನುಗ್ಗಿ ಮಹಿಳೆಯೊಬ್ಬಳ ಮೇಲೆ ಹಲ್ಲೆ  ನಡೆಸಿ ಅತ್ಯಾಚಾರ ಯತ್ನಿಸಿದ್ದು, ಆರ್‌ಪಿಎಫ್ ಪೊಲೀಸ್‌ ಓರ್ವರ ಸಮಯ ಪ್ರಜ್ಞೆ ಮತ್ತು ಸಾಹಸದಿಂದ ಯುವತಿಯ ಪ್ರಾಣ ಮತ್ತು ಮಾನ ಉಳಿದಿದೆ. ಸೋಮವಾರ ರಾತ್ರಿ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. 

ಚಿಂತಾದ್ರಿ ಪೇಟ್‌ ಮತ್ತು ಪಾರ್ಕ್‌ ನಡುವೆ ಚಲಿಸುತ್ತಿದ್ದ ರೈಲಿನ ಮಹಿಳಾ ಬೋಗಿಯಲ್ಲಿ ರಾತ್ರಿ 11
.45 ರ ವೇಳೆ ಸತ್ಯರಾಜ್‌ ಎಂಬ 26 ರ ಹರೆಯದ ಕಾಮಾಂಧ ಯುವಕ ಯುವತಿಯ ಮೇಲೆ ಎರಗಿ ಹೇಯ ಕೃತ್ಯಕ್ಕೆ ಮುಂದಾಗಿದ್ದ, ಈ ವೇಳೆ ಯುವತಿ ಕಿರುಚಿಕೊಂಡಿದ್ದಾರೆ.

ಪಕ್ಕದ ಬೋಗಿಯಲ್ಲಿ ಆರ್‌ಪಿಎಫ್ ಪೊಲೀಸ್‌ ಕೆ.ಶಿವಾಜಿ ಅವರು ಕೂಗು ಕೇಳಿಸಿಕೊಂಡಿದ್ದಾರೆ. ಅದಾಗಲೇ ರೈಲು ಚಲಿಸುತ್ತಿತ್ತು. ಕಂಪಾರ್ಟ್‌ ಮೆಂಟ್‌ ದಾಟುವುದು ಅಸಾಧ್ಯವಾಗಿತ್ತು. ಆದರೂ ಪ್ರಾಣ ಪಣಕ್ಕಿಟ್ಟು ಕೆಳಗೆ ಜಿಗಿದ ಶಿವಾಜಿ ಅವರು ಪಕ್ಕದ ಬೋಗಿಗೆ ನುಗ್ಗಿ  ಹೇಯ ಕೃತ್ಯ ತಡೆದಿದ್ದಾರೆ.

ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಶಿವಾಜಿ ಅವರು ಸಮಯಪ್ರಜ್ಞೆ ಮೆರೆಯದಿದ್ದರೆ ಯುವತಿಯ ಮೇಲೆ ಹೇಯ ಕೃತ್ಯ ನಡೆದೇ ಹೋಗುತ್ತಿತ್ತು.

ಯುವತಿಯ ತುಟಿಗಳಲ್ಲಿ ರಕ್ತ ಸೋರುತ್ತಿತ್ತು ಮತ್ತು ಬಟ್ಟೆಗಳು ಹರಿದ ಸ್ಥಿತಿಯಲ್ಲಿದ್ದವು . ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಯುವತಿ ಆರೋಪಿಯ ವಿರುದ್ಧ ದೂರು ದಾಖಲಿಸಿದ್ದು, ಪೊಲೀಸರು ಬಂಧಿತ ಸತ್ಯರಾಜ್‌ನ ವಿಚಾರಣೆ ನಡೆಸುತ್ತಿದ್ದಾರೆ. 

ಸತ್ಯರಾಜ್‌ ಕೃತ್ಯ ಎಸಗುವ ವೇಳೆ ಮದ್ಯ ಸೇವನೆ ಮಾಡಿದ್ದ ಎಂದು ಪೊಲೀಸರು ತಿಳಸಿದ್ದು, ಆತ ವಾಚ್‌ ಮ್ಯಾನ್‌ ಆಗಿ ಕೆಲಸ ನಿರ್ವಹಿಸುತ್ತಿದ್ದ. 

25 ರ ಹರೆಯದ ಯುವತಿ ರಾತ್ರಿ ಕೆಲಸ ಮುಗಿಸಿ ಮನೆಗೆ ರೈಲಿನಲ್ಲಿ  ತೆರಳುತ್ತಿದ್ದರು ಎಂದು ತಿಳಿದು ಬಂದಿದೆ.

ಸಾಹಸ ತೋರಿದ ಆರ್‌ಪಿಎಫ್ ಸಿಬಂದಿ ಶಿವಾಜಿ ಅವರಿಗೆ ಇಲಾಖೆ 5 ಸಾವಿರ ರೂಪಾಯಿ ಬಹುಮಾನ ನೀಡಿದೆ. 

ಟಾಪ್ ನ್ಯೂಸ್

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.