ACB ದಾಳಿ; ತೆಲಂಗಾಣ ಕಂದಾಯ ಇಲಾಖೆ ಅಧಿಕಾರಿ ಮನೆಯಲ್ಲಿ ಸಿಕ್ತು…ಒಂದು ಕೋಟಿ ರೂ.ನಗದು!
ಈ ದಾಳಿಯಲ್ಲಿ ಗ್ರಾಮಾಧಿಕಾರಿ ಮತ್ತು ಇಬ್ಬರು ರಿಯಲ್ ಎಸ್ಟೇಟ್ ಏಜೆಂಟರುಗಳನ್ನು ಬಂಧಿಸಲಾಗಿದೆ.
Team Udayavani, Aug 15, 2020, 1:49 PM IST
ಹೈದರಾಬಾದ್:ರಾಜ್ಯದ ಮೆದ್ ಚಾಲ್ -ಮಲ್ಕಾಜ್ ಗಿರಿ ಜಿಲ್ಲೆಯ ಸ್ಥಳೀಯ ಕಂದಾಯ ಅಧಿಕಾರಿ ನಿವಾಸದ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿ ನಡೆಸಿ ಸುಮಾರು 1.1 ಕೋಟಿ ರೂಪಾಯಿ ನಗದನ್ನು ವಶಪಡಿಸಿಕೊಂಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.
ಪಟ್ಟಣದ ಎಎಸ್ ರಾವ್ ನಗರದ ಬಾಡಿಗೆ ಮನೆಯಲ್ಲಿ ಲಂಚ ಪಡೆಯುತ್ತಿದ್ದಾಗ ಕಂದಾಯ ಅಧಿಕಾರಿ ಎರ್ವಾ ಬಾಲರಾಜು ನಾಗರಾಜು ಭ್ರಷ್ಟಚಾರ ನಿಗ್ರಹ ದಳದ ಅಧಿಕಾರಿಗಳ ಬಲೆಗೆ ಬಿದ್ದಿರುವುದಾಗಿ ವರದಿ ತಿಳಿಸಿದೆ.
ಈ ದಾಳಿಯಲ್ಲಿ ಗ್ರಾಮಾಧಿಕಾರಿ ಮತ್ತು ಇಬ್ಬರು ರಿಯಲ್ ಎಸ್ಟೇಟ್ ಏಜೆಂಟರುಗಳನ್ನು ಬಂಧಿಸಲಾಗಿದೆ. ಬಂಧಿತರ ನಿವಾಸ ಮತ್ತು ಕಚೇರಿಗಳಲ್ಲಿ ಶೋಧ ಕಾರ್ಯ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಾಧ್ಯಮಗಳಲ್ಲಿ ಪ್ರಸಾರವಾಗಿರುವ ದೃಶ್ಯಗಳಲ್ಲಿ, ಭ್ರಷ್ಟಾಚಾರ (ಎಸಿಬಿ) ನಿಗ್ರಹ ದಳದ ಅಧಿಕಾರಿಗಳಲ್ಲಿ ಕೆಲವರು ಕೋವಿಡ್ 19 ಸೋಂಕಿನ ಹಿನ್ನೆಲೆಯಲ್ಲಿ ಫೇಸ್ ಮಾಸ್ಕ್ ಹಾಕಿಕೊಂಡು ಸೋಫಾದಲ್ಲಿ ಕುಳಿತು ನೋಟುಗಳ ಹಲವಾರು ಬಂಡಲ್ ಗಳಲ್ಲಿರುವ ಹಣವನ್ನು ಎಣಿಸುತ್ತಿರುವುದು ವರದಿಯಾಗಿದೆ.
100 ರೂಪಾಯಿ ಹಾಗೂ 500 ರೂಪಾಯಿ ನೋಟುಗಳ ಕಂತೆ ಇದಾಗಿದೆ ಎಂದು ವರದಿ ವಿವರಿಸಿದೆ. ಅಧಿಕಾರಿಗಳ ಮಾಹಿತಿ ಪ್ರಕಾರ, ತನ್ನ ಕಾರ್ಯವ್ಯಾಪ್ತಿಯಲ್ಲಿ ಬರುವ 28 ಎಕರೆ ಜಾಗದ ವಿವಾದವನ್ನು ಬಗೆಹರಿಸಿಕೊಡಲು ನಾಗರಾಜು ಎರಡು ಕೋಟಿ ರೂಪಾಯಿ ಲಂಚ ಕೇಳಿರುವುದಾಗಿ ಆರೋಪಿಸಿದ್ದಾರೆ.
ಮನೆಯ ಮೇಲೆ ದಾಳಿ ನಡೆಸಿದಾಗ 1.1 ಕೋಟಿ ರೂಪಾಯಿ ನಗದು ಹೊರತುಪಡಿಸಿ, ಚಿನ್ನ ಮತ್ತು 28 ಲಕ್ಷ ರೂಪಾಯಿ ಹೆಚ್ಚುವರಿ ನಗದು ಪತ್ತೆಯಾಗಿದ್ದು, ಹಲವಾರು ಜಾಗಗಳ ದಾಖಲೆಗಳು ಪತ್ತೆಯಾಗಿರುವುದಾಗಿ ವರದಿ ತಿಳಿಸಿದೆ.
ರಾಜ್ಯ ಕಂದಾಯ ಇಲಾಖೆಯಲ್ಲಿ ನೂರಾರು ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ ರಾವ್ ಇಲಾಖೆಯಲ್ಲಿ ಆಮೂಲಾಗ್ರ ಬದಲಾವಣೆ ತರುವುದಾಗಿ ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು