ರೈಲು ಸೇವೆ ಅಭಿವೃದ್ಧಿಗೆ 18 ಸಾವಿರ ಕೋಟಿ ರೂ
Team Udayavani, Oct 22, 2019, 8:50 PM IST
ಹೊಸದಿಲ್ಲಿ: ರೈಲ್ವೇ ಸಚಿವಾಲಯ ಈಗಿರುವ ರೈಲು ಸೇವೆಗೆ ವೇಗ ನೀಡಲು ಸುಮಾರು 18 ಸಾವಿರ ಕೋಟಿ ರೂ.ಗಳ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಈ ಯೋಜನೆ ದಿಲ್ಲಿ-ಮುಂಬಯಿ ಮತ್ತು ದಿಲ್ಲಿ-ಕಲ್ಕತಾ ನಡುವಿನ ರೈಲು ಸೇವೆಯ ವೇಗವನ್ನು ಹೆಚ್ಚಿಸಲಿದೆ. ಈ ಉಭಯ ರೈಲು ಮಾರ್ಗಗಳಲ್ಲಿ ಗಂಟೆಗೆ 160 ಕಿ.ಮೀ. ವೇಗ ಕಲ್ಪಿಸಲು ಇದು ಅನುವು ಮಾಡಿಕೊಡಲಿದೆ.
ಈ ಯೋಜನೆ ಪೂರ್ಣಗೊಳ್ಳಲು 4 ವರ್ಷಗಳು ಬೇಕಾಗುವ ಸಾಧ್ಯತೆ ಇದೆ. ಈ ಯೋಜನೆಯಲ್ಲಿ ದಿಲ್ಲಿ-ಮುಂಬಯಿ ಮತ್ತು ದಿಲ್ಲಿ-ಕಲ್ಕತಾ ಮಾರ್ಗಗಳಲ್ಲಿ ಗಂಟೆಗೆ 160 ಕಿ.ಮೀ. ವೇಗದ ಜತೆಗೆ ಮುಂಬಯಿ ಅಹಮದಬಾದ್ ನಡುವೆ ಸಂಚರಿಸಲಿರುವ ಬುಲೆಟ್ ರೈಲು ಯೋಜನೆಯೂ ಇದರಲ್ಲಿ ಸೇರಿದೆ. ಬುಲೆಟ್ ರೈಲು ಗಂಟೆಗೆ 320 ಕಿ.ಮೀ. ವೇಗದಲ್ಲಿ ಸಂಚರಿಸಲಿದೆ. ಮುಂದಿನ 3 ವರ್ಷಗಳಲ್ಲಿ 68 ಸಾವಿರ ಬ್ರಾಡ್ಗೆàಜ್ ರೈಲು ಪಥ ವಿದ್ಯುತೀಕರಣಗೊಳ್ಳಲಿದೆ. ರೈಲುಗಳಲ್ಲಿ ಬಯೋ ಟಾಯ್ಲೆಟ್ ಸೇವೆ ವಿಸ್ತರಿಸಲಿದೆ.
ಈಗ ರೈಲುಗಳ ಗರಿಷ್ಠ ವೇಗ 99 ಕಿ.ಮೀ. ಇದ್ದು, ದಿಲ್ಲಿ-ವಾರಣಸಿ ನಡುವೆ ಸಂಚರಿಸುವ ವಂದೇ ಭಾರತ್ ರೈಲು ಮಾತ್ರ ಗಂಟೆಗೆ 104 ಕಿ.ಮೀ. ವೇಗದೊಂದಿಗೆ ಚಲಿಸುತ್ತಿದೆ. 160 ಕಿ.ಮೀ. ವೇಗದಲ್ಲಿ ರೈಲು ಸಂಚರಿಸಬೇಕಾದರೆ ಈಗಿರುವ ಪಥಗಳನ್ನು ಅಭಿವೃದ್ಧಿ ಪಡಿಸಬೇಕಾಗಿದೆ. ಇದರಲ್ಲಿ ಲೆವೆಲ್ ಕ್ರಾಸಿಂಗ್ಗಳು, ಸಿಗ್ನಲ್ಗಳು ಎಲ್ಲವೂ ಬದಲಾಗಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ
Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!
Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ
Glanders infection: ಗ್ಲ್ಯಾಂಡರ್ಸ್ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ