4,276 ಕೋಟಿ ರೂ.ಶಸ್ತ್ರಾಸ್ತ್ರ ಖರೀದಿ: ರಕ್ಷಣ ಸಚಿವ ರಾಜನಾಥ್ ಸಿಂಗ್ ನೇತೃತ್ವದ ಡಿಎಸಿ ಸಮ್ಮತಿ
ಟ್ಯಾಂಕ್ ಧ್ವಂಸ ಕ್ಷಿಪಣಿ, ವಿಸಾರ್ಡ್ ಕ್ಷಿಪಣಿ ವ್ಯವಸ್ಥೆ
Team Udayavani, Jan 11, 2023, 7:50 AM IST
ಹೊಸದಿಲ್ಲಿ: ದೇಶದಲ್ಲಿಯೇ ರಕ್ಷಣ ಉತ್ಪಾದನೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಮತ್ತೂಂದು ಮಹತ್ವದ ನಿರ್ಧಾರ ಕೈಗೊಂಡಿದೆ. 4,276 ಕೋಟಿ ರೂ. ಮೌಲ್ಯದ ವಿವಿಧ ಶಸ್ತ್ರಾಸ್ತ್ರಗಳನ್ನು ಖರೀದಿ ಮಾಡುವ ಪ್ರಸ್ತಾವಕ್ಕೆ ಮಂಗಳವಾರ ರಕ್ಷಣ ಖರೀದಿ ಮಂಡಳಿ (ಡಿಎಸಿ) ಸಮ್ಮತಿ ಸೂಚಿಸಿದೆ. ಇದರಿಂದಾಗಿ ವಿಶೇಷವಾಗಿ ಚೀನಕ್ಕೆ ಹೊಂದಿಕೊಂಡು ಇರುವ ವಾಸ್ತವಿಕ ಗಡಿ ನಿಯಂತ್ರಣ ರೇಖೆ (ಎಲ್ಎಸಿ) ವ್ಯಾಪ್ತಿಯಲ್ಲಿ ಭದ್ರತೆಯನ್ನು ಬಿಗಿಗೊಳಿಸುವ ನಿಟ್ಟಿನಲ್ಲಿ ಈ ನಿರ್ಧಾರ ನೆರವಾಗಲಿದೆ.
ರಕ್ಷಣ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಭೂಸೇನೆಗೆ ಸಂಬಂಧಿಸಿದ ಎರಡು, ಭಾರತೀಯ ನೌಕಾಪಡೆಯ ಒಂದು ಪ್ರಸ್ತಾವಗಳಿಗೆ ಅನುಮೋದನೆ ಸಿಕ್ಕಿದೆ.
ಯಾವುದೆಲ್ಲ ಖರೀದಿ?: ಕೇಂದ್ರ ರಕ್ಷಣ ಸಚಿವಾಲಯ ನೀಡಿದ ಮಾಹಿತಿ ಪ್ರಕಾರ ಹೆಲಿನಾ ಎಂಬ ಟ್ಯಾಂಕ್ ಅನ್ನು ಧ್ವಂಸ ಮಾಡುವ ಕ್ಷಿಪಣಿಗಳು, ಲಾಂಚರ್ಗಳು, ಸುಧಾರಿತ ಹಗುರ ಹೆಲಿಕಾಪ್ಟರ್ಗಳಿಗೆ ಬೇಕಾಗುವ ವಸ್ತುಗಳು ಸೇರ್ಪಡೆಯಾಗಿವೆ. ಇದರ ಜತೆಗೆ ಯುದ್ಧ ಭೂಮಿಯಲ್ಲಿ ಯೋಧರು ಸುಲಭವಾಗಿ ಒಂದು ಸ್ಥಳದಿಂದ ಮತ್ತೂಂದೆಡೆಗೆ ಸುಲಭವಾಗಿ ಕೊಂಡೊಯ್ಯಲು ಸಾಧ್ಯವಾಗುವ ವಿಸೋರ್ಡ್ ((VSHORAD) ಕ್ಷಿಪಣಿ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲು ಅನುಮೋದನೆ ನೀಡಲಾಗಿದೆ.
ಭಾರತೀಯ ನೌಕಾಪಡೆಗೆ ಅನುಕೂಲ ವಾಗುವಂತೆ ಶಿವಾಲಿಕ್ ಸರಣಿಯ ನೌಕೆಗಳಿಗೆ ಬ್ರಹ್ಮೋಸ್ ಲಾಂಚರ್ ಮತ್ತು ಫೈರ್ ಕಂಟ್ರೋಲ್ ವ್ಯವಸ್ಥೆ, ಮತ್ತೂಂದು ಸುಧಾರಿತ ಆವೃತ್ತಿಯ ಯುದ್ಧ ನೌಕೆಗಳ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ