ಗುಮಾಸ್ತನ ಮನೆಯಲ್ಲಿ ಕಂತೆ ಕಂತೆ ಹಣ: ಅಧಿಕಾರಿಗಳ ದಾಳಿ ವೇಳೆ ಫಿನಾಯಿಲ್ ಕುಡಿದ ಸರ್ಕಾರಿ ನೌಕರ
Team Udayavani, Aug 4, 2022, 11:31 AM IST
ಭೋಪಾಲ್ : ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಅಧಿಕಾರಿಗಳು ಮಧ್ಯಪ್ರದೇಶದ ಸರ್ಕಾರಿ ಗುಮಾಸ್ತ ಮನೆಗೆ ದಾಳಿ ನಡೆಸಿದ ವೇಳೆ ಮನೆಯಲ್ಲಿ ಕಂತೆ ಕಂತೆ ಹಣ ಪತ್ತೆಗಿದೆ ಅಲ್ಲದೆ ಹಣ ಪತ್ತೆಯಾಗುತ್ತಿದ್ದಂತೆ ಗುಮಾಸ್ತ ವಿಷ ಕುಡಿಯುವ ನಾಟಕವಾಡಿದ್ದಾನೆ.
ಭೋಪಾಲ್ ನ ಭೈರಾಗಾರ್ ಪ್ರದೇಶದಲ್ಲಿರುವ ಕ್ಲರ್ಕ್ ಹೀರೊ ಕೆಸ್ವಾನಿ ಎಂಬ ವ್ಯಕ್ತಿ ಭೋಪಾಲ್ ನ ಸರ್ಕಾರಿ ಕಚೇರಿಯಲ್ಲಿ ಗುಮಾಸ್ತನಾಗಿ ಕೆಲಸಮಾಡುತಿದ್ದಾನೆ, ಆತ ತಿಂಗಳಿಗೆ 50,000ರೂ. ವೇತನ ಪಡೆಯುತ್ತಿದ್ದಾನೆ. ಬುಧವಾರ ಹೀರೊ ಕೆಸ್ವಾನಿ ಮನೆಯಲ್ಲಿ ಆದಾಯಕ್ಕಿಂತ ಹೆಚ್ಚಿನ ಹಣವನ್ನು ಹೊಂದಿದ್ದಾರೆ ಎಂದು ಪ್ರಕರಣ ದಾಖಲಾಗಿತ್ತು ಆ ಹಿನ್ನೆಲೆಯಲ್ಲಿ ಅಧಿಕಾರಿಗಳು ಗುಮಾಸ್ತನ ಮನೆಗೆ ದಾಳಿ ನಡೆಸಿದ್ದಾರೆ, ಅಧಿಕಾರಿಗಳು ಮನೆಯಲ್ಲಿ ಶೋಧ ನಡೆಸುವ ವೇಳೆ ಕಂತೆ ಕಂತೆ ಹಣ ಪತ್ತೆಯಾಗಿದ್ದು ಸುಮಾರು 85 ಲಕ್ಷ ರೂ ಪತ್ತೆಯಾಗಿದೆ.
ಅಲ್ಲದೆ ಮನೆಯಲ್ಲಿ ಶೋಧ ನಡೆಸುವಾಗ, ಕೋಟಿ ಮೌಲ್ಯದ ಆಸ್ತಿಯ ದಾಖಲೆ ಪತ್ರಗಳು ಕೂಡ ಲಭ್ಯವಾಗಿದೆ. ಇದರಿಂದ ಭೀತಿಗೊಳಗಾದ ಗುಮಾಸ್ತ ಕಾರ್ಯಾಚರಣೆಗೆ ಅಡ್ಡಿ ಪಡಿಸಿದ್ದಾನೆ ಅಲ್ಲದೆ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸುವುದಾಗಿ ಬೆದರಿಕೆ ಒಡ್ಡಿದ್ದಾನೆ, ಆದರೆ ಅಧಿಕಾರಿಗಳು ಕಾರ್ಯಾಚರಣೆ ಮುಂದುವರಿಸಿದ್ದಾರೆ ಇದರಿಂದ ಹೆದರಿದ ನೌಕರ ಫಿನಾಯಿಲ್ ಕುಡಿದು ಅಸ್ವಸ್ಥಗೊಂಡಿದ್ದಾನೆ.
ಸದ್ಯ ಗುಮಾಸ್ತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದು ಚೇತರಿಸಿಕೊಂಡಿದ್ದಾನೆ, ಪೊಲೀಸ್ ಅಧಿಕಾರಿಗಳು ಹೀರೊ ಕೆಸ್ವಾನಿಗೆ ಸಂಬಂಧಿಸಿದ ಕಾಗದ ಪತ್ರಗಳನ್ನು ವಶಕ್ಕೆ ಪಡೆದುಕೊಂಡಿದ್ದು ತನಿಖೆ ಮುಂದುವರೆಸಿದ್ದಾರೆ.
ಇದನ್ನೂ ಓದಿ : ಅಮಿತ್ ಶಾ ಭೇಟಿಯಾದ ಬಿಎಸ್ ವೈ: ಪುತ್ರನ ರಾಜಕೀಯದ ಬಗ್ಗೆ ಚರ್ಚೆ
ಕಾರ್ಯಾಚರಣೆ ವೇಳೆ ಮನೆಯಲ್ಲಿ ಬೆಲೆಬಾಳುವ ವಸ್ತುಗಳು ಪತ್ತೆಯಾಗಿವೆ ಜೊತೆಗೆ ಗುಮಾಸ್ತನ ಮನೆಯ ಮೌಲ್ಯವೇ ಒಂದು ಕೋಟಿಗೂ ಅಧಿಕ ಬಾಳುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಬೇರೆ ಯಾವುದೇ ಆದಾಯದ ಮೂಲಗಳು ಅಲ್ಲದೆ ಗುಮಾಸ್ತನ ಮಡದಿಯ ಹೆಸರಿನಲ್ಲೂ ಬ್ಯಾಂಕ್ ನಲ್ಲಿ ಲಕ್ಷ ಲಕ್ಷ ಹಣ ಇಡಲಾಗಿದೆ ಇದೆಲ್ಲದರ ತನಿಖೆ ನಡೆಸಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ