ದೇಶದ ಪ್ರಗತಿಗೆ ಇನ್ಫೋಸಿಸ್ ಕೊಡುಗೆ ಗಣನೀಯ: ಆರೆಸ್ಸೆಸ್
Team Udayavani, Sep 6, 2021, 6:30 AM IST
ಹೊಸದಿಲ್ಲಿ: ದೇಶದ ಐಟಿ ದಿಗ್ಗಜ ಇನ್ಫೋಸಿಸ್ ಕಂಪೆನಿ ಕುರಿತು “ಪಾಂಚಜನ್ಯ’ ನಿಯತಕಾಲಿಕೆಯಲ್ಲಿ ಪ್ರಕಟವಾದ ಲೇಖನಕ್ಕೆ ಸಂಬಂಧಿಸಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರೆಸ್ಸೆಸ್) ರವಿವಾರ ಸ್ಪಷ್ಟನೆ ನೀಡಿದೆ.
ಭಾರತದ ಅಭಿವೃದ್ಧಿಯಲ್ಲಿ ಇನ್ಫೋಸಿಸ್ ಮಹತ್ತರ ಪಾತ್ರವನ್ನು ವಹಿಸಿದೆ. ಪಾಂಚಜನ್ಯ ನಿಯತಕಾಲಿಕೆಯಲ್ಲಿ ಪ್ರಕಟವಾಗಿರುವ ವಿಚಾರವು ಅದನ್ನು ಬರೆದವರ ವೈಯಕ್ತಿಕ ಅಭಿಪ್ರಾಯವೇ ಹೊರತು ಅದು ಆರೆಸ್ಸೆಸ್ನ ಅಭಿಪ್ರಾಯವಲ್ಲ. ಅಲ್ಲದೇ ಪಾಂಚಜನ್ಯವು ಸಂಘದ ಅಧಿಕೃತ ಮುಖವಾಣಿಯೂ ಅಲ್ಲ ಎಂದು ಆರೆಸ್ಸೆ
ಸ್ನ ಅಖೀಲ ಭಾರತ ಪ್ರಚಾರ ಉಸ್ತುವಾರಿ ಹೊತ್ತಿರುವ ಸುನೀಲ್ ಅಂಬೇಕರ್ ಹೇಳಿದ್ದಾರೆ. “”ದೇಶದ ಪ್ರಗತಿಗೆ ಇನ್ಫೋಸಿಸ್ ಗಣನೀಯ ಕೊಡುಗೆ ನೀಡಿದೆ. ಕಂಪೆನಿ ನಿರ್ವಹಿಸುತ್ತಿರುವ ಪೋರ್ಟಲ್ಗೆ ಸಂಬಂಧಿಸಿ ಸಮಸ್ಯೆಯಿರಬಹುದು. ಆದರೆ ಪಾಂಚಜನ್ಯದ ಲೇಖನವು ಲೇಖಕನ ವೈಯಕ್ತಿಕ ಅಭಿಪ್ರಾಯ” ಎಂದಿದ್ದಾರೆ
ಏನಿದು ವಿವಾದ? :
ಆರೆಸ್ಸೆಸ್ ಮುಖವಾಣಿ ಎಂದು ಹೇಳಲಾದ ಪಾಂಚಜನ್ಯ ಮ್ಯಾಗಜಿನ್ ಇನ್ಫೋಸಿಸ್ ಕಂಪೆನಿ ವಿರುದ್ಧ ಕವರ್ ಸ್ಟೋರ್ ಪ್ರಕಟಿಸಿತ್ತು. ಅದರಲ್ಲಿ ಇನ್ಫಿ ಕಂಪೆನಿಯ ಹೊಸ ಆದಾಯ ತೆರಿಗೆ ಇ-ಫೈಲಿಂಗ್ ಪೋರ್ಟಲ್ ಹಾಗೂ ಸರಕು ಮತ್ತು ಸೇವಾ ತೆರಿಗೆ ಪೋರ್ಟಲ್ನಲ್ಲಿ ಆಗಿರುವ ತಾಂತ್ರಿಕ ದೋಷ ಕುರಿತು ಪ್ರಸ್ತಾವಿಸಿ, “ಸರಕಾರದ ಯೋಜನೆಯನ್ನು ಇನ್ಫೋಸಿಸ್ ಹಾಳು ಮಾಡುತ್ತಿರುವುದು ಇದು ಮೊದಲೇನಲ್ಲ. ಈ ರೀತಿ ಸಮಸ್ಯೆ ಸೃಷ್ಟಿಸಿದ್ದರಿಂದ ಸರಕಾರದ ಬಗ್ಗೆ ಜನರು ನಂಬಿಕೆ ಕಳೆದುಕೊಳ್ಳುವಂಥ ಸ್ಥಿತಿ ಬಂದಿದೆ. ಇನ್ಫೋಸಿಸ್ ಭಾರತದ ಆರ್ಥಿಕತೆಯನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿದೆ. ನಕ್ಸಲರು, ಎಡಪಂಥೀಯವಾದಿಗಳು, ದೇಶವಿರೋಧಿಗಳು ಹಾಗೂ ತುಕ್ಡೆ ತುಕ್ಡೆ ಗ್ಯಾಂಗ್ಗೆ ಈ ಕಂಪೆನಿ ನೆರವಾಗುತ್ತಿದೆ’ ಎಂದು ಆರೋಪಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ