RSS ಪ್ರಭಾವ ನಾಲ್ಕು ದಿಕ್ಕುಗಳಲ್ಲಿ ಹೆಚ್ಚಾಗುತ್ತಿದೆ
Team Udayavani, Nov 15, 2017, 10:53 AM IST
ಪುಣೆ: ಸಂಘದ ಸಿದ್ಧಾಂತಗಳ ಪ್ರಭಾವವು ನಾಲ್ಕು ದಿಕ್ಕುಗಳಲ್ಲಿ ಹೆಚ್ಚಾಗುತ್ತಿದ್ದು, ಈ ಪ್ರಭಾವದಿಂದ ದೇಶದಲ್ಲಿ ಸಾಮಾಜಿಕ ಬದಲಾವಣೆ ಕಾಣುತ್ತಿದೆ. ಆ ಸಾಮಾಜಿಕ ಬದಲಾವಣೆಯ ವೇಗವನ್ನು ಇನ್ನಷ್ಟು ಹೆಚ್ಚಿಸಬೇಕಾದ ಆವಶ್ಯಕತೆಯಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರು ಇಲ್ಲಿ ಮನವಿ ಮಾಡಿದ್ದಾರೆ.
ಆರ್ಎಸ್ಎಸ್ ಸಿದ್ಧಾಂತದಿಂದ ಪ್ರೇರಿತವಾಗಿ ಕೆಲಸವನ್ನು ಮಾಡುತ್ತಿರುವ ಮಹಾರಾಷ್ಟ್ರದ ವಿವಿಧ ಸಂಸ್ಥೆಗಳು ಮತ್ತು ಸಂಘಟನೆಗಳ ಕೆಲಸದ ಮೌಲ್ಯಮಾಪನ, ಸಂಘಟನಾತ್ಮಕ ಬೆಳವಣಿಗೆ, ಸೇವಾ ಕಾರ್ಯಗಳ ಸ್ಥಿತಿಗತಿ , ಭವಿಷ್ಯದ ಯೋಜನೆಗಳು ಹಾಗೂ ಇತ್ಯಾದಿ ವಿಷಯಗಳ ಕುರಿತು ಚರ್ಚಿಸಲು ಆಯೋಜಿತ ಸಮನ್ವಯ ಸಭೆಯ ಸಮಾರೋಪ ಸಮಾರಂಭದಲ್ಲಿ ಭಾಗವತ್ ಮಾತನಾಡುತ್ತಿದ್ದರು.
ಸಂಘದ ಪರ ಸಮಾಜದ ನಿರೀಕ್ಷೆಗಳು ಹೆಚ್ಚಾಗುತ್ತಿವೆ. ಬೆಳೆಯುತ್ತಿರುವ ಈ ನಿರೀಕ್ಷೆಗಳ ಕಾರಣ ಇಡೀ ಸಂಘಟನೆಯ ಜವಾಬ್ದಾರಿಯೂ ಹೆಚ್ಚಾಗಿದೆ ಎಂದವರು ನುಡಿದಿದ್ದಾರೆ. ನಮ್ಮ ಧರ್ಮ, ಸಂಸ್ಕೃತಿ ಹಾಗೂ ರಾಷ್ಟ್ರೀಯತೆಯ ಬಗ್ಗೆ ಮಕ್ಕಳಲ್ಲಿ ಅರಿವು ಹಾಗೂ ವಿಸ್ವಾಸವನ್ನು ಮೂಡಿಸುವುದು ಪ್ರತಿಯೊಂದು ಹಿಂದೂ ಕುಟುಂಬದ ಮೂಲಭೂತ ಕರ್ತವ್ಯವಾಗಿದೆ ಎಂದು ಸಂಘದ ಸರಸಂಚಾಲಕ ಡಾ| ಭಾಗವತ್ ಅಭಿಪ್ರಾಯಪಟ್ಟಿದ್ದಾರೆ.
ಈ ಸಭೆಯಲ್ಲಿ ರಾಜ್ಯದ ವಿವಿಧ ಸಂಸ್ಥೆಗಳು ಮತ್ತು ಸಂಘಟನೆಗಳ ಪ್ರತಿನಿಧಿಗಳು ಹಾಗೂ ಆರ್ಎಸ್ಎಸ್ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
MUST WATCH
ಹೊಸ ಸೇರ್ಪಡೆ
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್