RSS ಯೂ ಟರ್ನ್; ಕೇರಳ ಸಿಎಂ ತಲೆ ತೆಗೆಯೋದು ಬೇಡ, ಹೇಳಿಕೆ ವಾಪಸ್!
Team Udayavani, Mar 3, 2017, 5:46 PM IST
ಮಧ್ಯಪ್ರದೇಶ; ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ತಲೆ ತೆಗೆದರೆ ಒಂದು ಕೋಟಿ ರೂಪಾಯಿ ಬಹುಮಾನ ಕೊಡುವುದಾಗಿ ಘೋಷಿಸಿ ತೀವ್ರ ವಿವಾದಕ್ಕೊಳಗಾಗಿದ್ದ ಆರ್ ಎಸ್ ಎಸ್ ಮುಖಂಡ ಚಂದ್ರಾವತ್ ಕೊನೆಗೂ ಆರ್ ಎಸ್ಎಸ್ ಒತ್ತಡಕ್ಕೆ ಮಣಿದು, ಬಹಿರಂಗ ಸಭೆಯಲ್ಲಿ ಘೋಷಿಸಿದ್ದ “ಫತ್ವಾ’ ವನ್ನು ವಾಪಸ್ ಪಡೆದಿರುವುದಾಗಿ ಹೇಳಿಕೆ ನೀಡಿದ್ದಾರೆ.
ತಾನು ಸಭೆಯಲ್ಲಿ ಮಾತನಾಡುವಾಗ ಭಾವೋದ್ವೇಗಕ್ಕೆ ಒಳಗಾಗಿ ಕೇರಳ ಸಿಎಂ ತಲೆ ತೆಗೆದರೆ ಒಂದು ಕೋಟಿ ನೀಡುವುದಾಗಿ ಹೇಳಿಕೆ ನೀಡಿದ್ದೆ. ಹಾಗಾಗಿ ನಾನು ಕೇರಳ ಸಿಎಂ ವಿರುದ್ಧ ಘೋಷಿಸಿದ್ದ ಬಹುಮಾನದ ಹೇಳಿಕೆಯನ್ನು ವಾಪಸ್ ಪಡೆಯುವುದಾಗಿ ಚಂದ್ರಾವತ್ ತಿಳಿಸಿದ್ದಾರೆ ಎಂದು ಸಿಎನ್ ಎನ್ ನ್ಯೂಸ್ ವರದಿ ಮಾಡಿದೆ.
ತನ್ನ ಹೇಳಿಕೆಗೆ ವಿಷಾದ ವ್ಯಕ್ತಪಡಿಸುವುದಾಗಿ ಕುಂದನ್ ಚಂದ್ರಾವತ್ ಹೇಳಿದ್ದಾರೆ. ಮಧ್ಯಪ್ರದೇಶದ ಉಜ್ಜೈನಿಯಲ್ಲಿ ನಡೆದ ಸಮಾರಂಭದಲ್ಲಿ ಚಂದ್ರಾವತ್ ಕೇರಳ ಸಿಎಂ ವಿರುದ್ಧ ಫತ್ವಾ ಹೇಳಿಕೆ ನೀಡಿದ್ದರು.
ಚಂದ್ರಾವತ್ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗಿತ್ತು. ಆರ್ ಎಸ್ಎಸ್ ಕೂಡಾ ಇದು ನಮ್ಮ ಸಂಸ್ಕೃತಿ ಅಲ್ಲ. ಹಾಗಾಗಿ ಆ ಹೇಳಿಕೆಗೆ ಬೆಂಬಲ ಇಲ್ಲ ಎಂದು ಸ್ಪಷ್ಟಪಡಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
MUST WATCH
ಹೊಸ ಸೇರ್ಪಡೆ
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ