ಮೆರವಣಿಗೆಗೆ ಅನುಮತಿ ಕೋರಿ ಮದ್ರಾಸ್ ಹೈಕೋರ್ಟ್ಗೆ ಆರ್ಎಸ್ಎಸ್ ಅರ್ಜಿ
Team Udayavani, Sep 12, 2022, 9:15 PM IST
ಚೆನ್ನೈ: ತಮಿಳುನಾಡಿನಾದ್ಯಂತ ಅ.2ರಂದು ಸಮಸವಸ್ತ್ರ ಧರಿಸಿ, ಬ್ಯಾಂಡ್ನೊಂದಿಗೆ ಮೆರವಣಿಗೆ ನಡೆಸಲು ಹಾಗೂ ಸಾರ್ವಜನಿಕ ಸಭೆಗಳನ್ನು ಹಮ್ಮಿಕೊಳ್ಳಲು ಅನುಮತಿ ನೀಡಬೇಕು ಎಂದು ಕೋರಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್ಎಸ್ಎಸ್) ಮದ್ರಾಸ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದೆ.
ಸೋಮವಾರ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಈ ಸಂಬಂಧ ಆಕ್ಷೇಪಣೆ ಸಲ್ಲಿಸಲು ತಮಿಳುನಾಡು ಗೃಹ ಕಾರ್ಯದರ್ಶಿ ಮತ್ತು ಡಿಜಿಪಿಗೆ ಸೂಚಿಸಿ, ವಿಚಾರಣೆಯನ್ನು ಸೆ.22ಕ್ಕೆ ಮುಂದೂಡಿದೆ. “ಮೆರವಣಿಗೆ ಹಮ್ಮಿಕೊಳ್ಳಲು ಅನುಮತಿ ನೀಡುವಂತೆ ಪೊಲೀಸ್ ಇಲಾಖೆಗೆ ಮನವಿ ಸಲ್ಲಿಸಲಾಗಿತ್ತು. ಆದರೆ ಇದುವರೆಗೂ ಇದಕ್ಕೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ,’ ಎಂದು ಆರ್ಎಸ್ಎಸ್ನ ಶಿವಕಾಶಿ ಘಟಕದ ಅಧ್ಯಕ್ಷ ಶಿವಲಿಂಗಂ ಹೇಳಿದರು.
“ಆರ್ಎಸ್ಎಸ್ನಿಂದ ಮೆರವಣಿಗೆ ಕೈಗೊಳ್ಳಲು ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಭಾರತದಾದ್ಯಂತ ಅನುಮತಿ ನೀಡಲಾಗುತ್ತದೆ. ಆದರೆ ತಮಿಳುನಾಡಿನ ಅಧಿಕಾರಿಗಳು ಮಾತ್ರ ಇದಕ್ಕೆ ಅನುಮತಿ ನೀಡದಿರುವುದು ದುರದೃಷ್ಟಕರ,’ ಎಂದು ಬೇಸರ ವ್ಯಕ್ತಪಡಿಸಿದರು.