ಆರ್ಎಸ್ಎಸ್ ಕಾರ್ಯಕರ್ತ ಸಾವನ್ನಪ್ಪಿದ್ದು ಹೃದಯಾಘಾತದಿಂದ : ಕೇರಳ ಪೊಲೀಸ್
ಸಿಪಿಐ(ಎಂ) ಕಾರ್ಯಕರ್ತರ ನಡುವೆ ಘರ್ಷಣೆ ನಡೆದ ವೇಳೆ ಸಾವು
Team Udayavani, Jul 25, 2022, 10:30 PM IST
ಕಣ್ಣೂರು : ಕೇರಳದ ಕಣ್ಣೂರು ಜಿಲ್ಲೆಯ ಪನುಂಡ ಪ್ರದೇಶದಲ್ಲಿ ಸಿಪಿಐ(ಎಂ) ಕಾರ್ಯಕರ್ತರ ನಡುವೆ ಘರ್ಷಣೆಯ ನಂತರ ಸೋಮವಾರ ಆರ್ಎಸ್ಎಸ್ ಕಾರ್ಯಕರ್ತರೊಬ್ಬರು ಮೃತಪಟ್ಟಿದ್ದು, ಹೃದಯಾಘಾತದಿಂದ ಸಾವು ಸಂಭವಿಸಿದೆ, ಹೊಡೆದಿದ್ದರಿಂದ ಅಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಸಿಪಿಐ(ಎಂ) ಕಾರ್ಯಕರ್ತರು ಮೃತ ಜಿಮ್ನೇಶ್ಗೆ ಥಳಿಸಿದ್ದಾರೆ ಎಂದು ಆರ್ಎಸ್ಎಸ್ ಆರೋಪಿಸಿದ್ದರೆ, ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರ ಪ್ರಕಾರ, ಹೃದಯಾಘಾತದಿಂದ ವ್ಯಕ್ತಿಯ ಸಾವು ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವೈದ್ಯರ ಪ್ರಕಾರ, ಅವರ ದೇಹದ ಮೇಲಿನ ಗುರುತುಗಳು ಸಿಪಿಆರ್ ಮಾಡಿದಾಗ ಕಂಡುಬಂದ ಗುರುತುಗಳೊಂದಿಗೆ ಸ್ಥಿರವಾಗಿವೆ ಮತ್ತು ದೇಹದ ಮೇಲೆ ಯಾವುದೇ ಗಾಯಗಳಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಹೀಗಾಗಿ ಅವರ ಸಾವು ಅನುಮಾನಾಸ್ಪದವಾಗಿಲ್ಲ ಎಂದು ಅವರು ತಿಳಿಸಿದ್ದಾರೆ.
ಈ ಪ್ರದೇಶದಲ್ಲಿ ಸಿಪಿಐ(ಎಂ) ಮತ್ತು ಆರ್ಎಸ್ಎಸ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದ್ದು, ಪೊಲೀಸರ ಪ್ರಕಾರ, ಜಿಮ್ನೇಶ್ ಕೇವಲ ಒಬ್ಬ ಪ್ರೇಕ್ಷಕ ಮತ್ತು ಸಂಘರ್ಷದಲ್ಲಿ ಭಾಗವಹಿಸಿರಲಿಲ್ಲ. ಘರ್ಷಣೆಯಲ್ಲಿ ಗಾಯಗೊಂಡ ಆರ್ಎಸ್ಎಸ್ ಕಾರ್ಯಕರ್ತರೊಂದಿಗೆ ಜಿಮ್ನೇಶ್ ಆಸ್ಪತ್ರೆಗೆ ಹೋಗಿದ್ದರು ಮತ್ತು ಅಲ್ಲಿ ಕಾಯುತ್ತಿದ್ದಾಗ ಹೃದಯಾಘಾತದಿಂದ ಕುಸಿದುಬಿದ್ದರು ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್