
ಆರ್ ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯ: ಗೋವಾದಲ್ಲಿ ಕುಗ್ಗಿದ ಪ್ರವಾಸಿಗರ ಸಂಖ್ಯೆ
Team Udayavani, Jan 25, 2022, 7:14 PM IST

ಆರ್ ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯ: ಗೋವಾದಲ್ಲಿ ಕುಗ್ಗಿದ ಪ್ರವಾಸಿಗರ ಸಂಖ್ಯೆ
ಪಣಜಿ: ಕೋವಿಡ್ ಭೀತಿಯ ಹಿನ್ನೆಲೆಯಲ್ಲಿ ಗೋವಾಕ್ಕೆ ಆಗಮಿಸುವ ದೇಶಿಯ ಪ್ರವಾಸಿಗರ ಸಂಖ್ಯೆಯಲ್ಲಿ ಭಾರಿ ಇಳಿಕೆಯಾಗಿರುವುದು ಕಂಡುಬರುತ್ತಿದೆ.
ನೆರೆಯ ರಾಜ್ಯಗಳಿಗೆ ತೆರಳಲು ಗಡಿಯಲ್ಲಿ ಆರ್ ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯಗೊಳಿಸಿರುವುದರಿಂದ ಗೋವಾಕ್ಕೆ ಆಗಮಿಸುವ ಪ್ರವಾಸಿಗರ ಸಂಖ್ಯೆಯಲ್ಲಿ ಭಾರಿ ಇಳಿಕೆಯಾಗುವಂತಾಗಿದೆ.
ಕಳೆದ ಸುಮಾರು ಎರಡು ವರ್ಷಗಳಿಂದ ಕೋವಿಡ್ ಕಠಿಣ ನಿಯಮಾವಳಿಗಳ ಹಿನ್ನೆಲೆಯಲ್ಲಿ ಗೋವಾದ ಪ್ರವಾಸೋದ್ಯಮ ಸಂಪೂರ್ಣ ನೆಲ ಕಚ್ಚಿದೆ. ಆದರೆ ಕಳೆದ ಕೆಲ ತಿಂಗಳಿಂದ ಗೋವಾಕ್ಕೆ ದೇಶ-ವಿದೇಶಿಯ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವುದರಿಂದ ಗೋವಾದ ಎಲ್ಲ ಪ್ರವಾಸಿ ತಾಣಗಳು ಭರ್ತಿಯಾಗಿದ್ದವು. ಆದರೆ ಇದೀಗ ಮತ್ತೆ ಗಡಿಯಲ್ಲಿ ಕೋವಿಡ್ ನಿಯಮಾವಳಿಗಳಿಂದಾಗಿ ಪ್ರವಾಸೋದ್ಯಮ ಅವಲಂಭಿತ ಎಲ್ಲ ಉದ್ಯೋಗಗಳ ಮೇಲೆ ಹೊಡೆತ ಬೀಳುವಂತಾಗಿದೆ.
ಯಾವುದೇ ರಾಜ್ಯಗಳಿಂದ ಗೋವಾಕ್ಕೆ ಬರಲು ಕೋವಿಡ್ ಎರಡೂ ಡೋಸ್ ಲಸಿಕೆ ಅಥವಾ ಕೋವಿಡ್ ತಪಾಸಣೆಯ ವರದಿ ಹೊಂದಿದ್ದರೆ ಸಾಕು. ಆದರೆ ಗೋವಾದಿಂದ ಕರ್ನಾಟಕ ಅಥವಾ ಮಹಾರಾಷ್ಟ್ರ ರಾಜ್ಯಗಳಿಗೆ ತೆರಳ ಬೇಕಾದರೆ ಎರಡೂ ಡೋಸ್ ಲಸಿಕೆ ಪೊಡೆದಿದ್ದರೂ ಕೂಡ ಆರ್ ಟಿಪಿಸಿಆರ್ ನೆಗೆಟಿವ್ ವರದಿ ಖಡ್ಡಾಯಗೊಳಿಸಿರುವುದು ಗೋವಾ ಪ್ರವಾಸೋದ್ಯಮದ ಮೇಲೆ ಮತ್ತೆ ಹೊಡೆತ ಬೀಳುವಂತಾಗಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

India’s first ever ಬುಲೆಟ್ ಟ್ರೈನ್ ಟರ್ಮಿನಲ್ ಅನಾವರಣ ; Video

Chennai ದೊರೆಯಲಿದೆ ನಗರ ಪ್ರವಾಹ ನಿಯಂತ್ರಣ ವ್ಯವಸ್ಥೆ :ದೇಶದಲ್ಲಿಯೇ ಮೊದಲ ಬಾರಿಗೆ

Politics: ಶೋಭಾ ಕರಂದ್ಲಾಜೆ, ರಾಜೀವ್ ಚಂದ್ರಶೇಖರ್,ಅರ್ಜುನ್ ಮುಂಡಾಗೆ ಹೆಚ್ಚುವರಿ ಖಾತೆ

China: ದೇಶಕ್ಕೆ ಚೀನ ಸೋಂಕು?- ದಿಲ್ಲಿ ಏಮ್ಸ್ನಲ್ಲಿ ಏಳು ಮಾದರಿ ಪಾಸಿಟಿವ್

Deepfake ರತನ್ ಟಾಟಾ ಫೋಟೋ ಬಳಕೆ
MUST WATCH
ಹೊಸ ಸೇರ್ಪಡೆ

India’s first ever ಬುಲೆಟ್ ಟ್ರೈನ್ ಟರ್ಮಿನಲ್ ಅನಾವರಣ ; Video

Chennai ದೊರೆಯಲಿದೆ ನಗರ ಪ್ರವಾಹ ನಿಯಂತ್ರಣ ವ್ಯವಸ್ಥೆ :ದೇಶದಲ್ಲಿಯೇ ಮೊದಲ ಬಾರಿಗೆ

South Africa Tour; ಭಾರತೀಯ ತಂಡ ಡರ್ಬಾನ್ಗೆ ಆಗಮನ

Politics: ಶೋಭಾ ಕರಂದ್ಲಾಜೆ, ರಾಜೀವ್ ಚಂದ್ರಶೇಖರ್,ಅರ್ಜುನ್ ಮುಂಡಾಗೆ ಹೆಚ್ಚುವರಿ ಖಾತೆ

ಬೆಳಗಾವಿ ಕಲಾಪದಲ್ಲಿ BJP ಗಲಿಬಿಲಿ!- ಅಶೋಕ್, ವಿಜಯೇಂದ್ರ ನಡುವೆ ಧರಣಿ, ಸಭಾತ್ಯಾಗ ಗೊಂದಲ