ಸಂಸತ್ ಮುಂಗಾರು ಅಧಿವೇಶನ: ಕೋಲಾಹಲ-ಲೋಕಸಭೆ ಕಲಾಪ ಮಧ್ಯಾಹ್ನ 2ಗಂಟೆಗೆ ಮುಂದೂಡಿಕೆ
ಗದ್ದಲಕ್ಕೆ ಅವಕಾಶ ನೀಡಬಾರದು ಎಂದು ಪ್ರಧಾನಿ ಮೋದಿ ಕಲಾಪ ಆರಂಭಕ್ಕೂ ಮುನ್ನ ಮನವಿ ಮಾಡಿಕೊಂಡಿದ್ದರು.
Team Udayavani, Jul 19, 2021, 12:31 PM IST
ನವದೆಹಲಿ:ಲೋಕಸಭೆಯಲ್ಲಿ ಮುಂಗಾರು ಅಧಿವೇಶನ ಸೋಮವಾರ(ಜುಲೈ19)ದಿಂದ ಆರಂಭಗೊಂಡಿದ್ದು, ಕಲಾಪದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮಾತನಾಡಿದ ಸಂದರ್ಭದಲ್ಲಿ ವಿಪಕ್ಷಗಳು ತೀವ್ರ ಕೋಲಾಹಲ ಎಬ್ಬಿಸಿದ ಪರಿಣಾಮ ಲೋಕಸಭೆ ಕಲಾಪವನ್ನು ಮಧ್ಯಾಹ್ನ 2ಗಂಟೆವರೆಗೆ ಮುಂದೂಡಲಾಗಿದೆ.
ಇದನ್ನೂ ಓದಿ:ಮುಂಗಾರು ಅಧಿವೇಶನ : ಕೋವಿಡ್ ಬಗ್ಗೆ ಹೆಚ್ಚಿನ ಚರ್ಚೆಗೆ ಆದ್ಯತೆ : ಪ್ರಧಾನಿ ಮೋದಿ
ನೂತನ ಸದಸ್ಯರಾಗಿ ಆಯ್ಕೆಯಾದ ಹೊಸ ಸಂಸದರು ಪ್ರಮಾಣವಚನ ಸ್ವೀಕರಿಸಿದರು. ಸದನ ಆರಂಭವಾದಾಗ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಯಿತು. ಕಲಾಪದಲ್ಲಿ ನೂತನ ಸಚಿವರ ಆಯ್ಕೆ ಕುರಿತು ಪ್ರಧಾನಿ ಮೋದಿ ಅವರು ಮಾತನಾಡಿದ ವೇಳೆ, ವಿರೋಧ ಪಕ್ಷಗಳು ಗದ್ದಲವೆಬ್ಬಿಸಿದವು.
ದೇಶದ ಮಹಿಳೆಯರು, ಹಿಂದುಳಿದ ವರ್ಗದ ಹಾಗೂ ರೈತರ ಮಕ್ಕಳು ಸಚಿವರಾಗಿರುವುದು ಒಂದು ವೇಳೆ ಕೆಲವು ಜನರಿಗೆ ಅಸಮಾಧಾನವಾಗಿರಬಹುದು. ಆ ಕಾರಣದಿಂದಾಗಿಯೇ ಅವರ ಪರಿಚಯವನ್ನು ಮಾಡಲು ಕೂಡಾ ವಿಪಕ್ಷಗಳು ಅವಕಾಶ ನೀಡುತ್ತಿಲ್ಲ ಎಂದು ತಿರುಗೇಟು ನೀಡಿದರು.
ವಿಪಕ್ಷಗಳು ಸರ್ಕಾರಕ್ಕೆ ಕಠಿಣ ಪ್ರಶ್ನೆಗಳನ್ನು ಕಲಾಪದಲ್ಲಿ ಕೇಳಬಹುದಾಗಿದೆ. ಆದರೆ ಸದನದಲ್ಲಿ ಸರ್ಕಾರ ಉತ್ತರ ನೀಡಲು ವಿಪಕ್ಷಗಳು ಯಾವುದೇ ಗದ್ದಲಕ್ಕೆ ಅವಕಾಶ ನೀಡಬಾರದು ಎಂದು ಪ್ರಧಾನಿ ಮೋದಿ ಕಲಾಪ ಆರಂಭಕ್ಕೂ ಮುನ್ನ ಮನವಿ ಮಾಡಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್