ಕೈದಿಗಳ ದಾಂಧಲೆ: ಅಧಿಕಾರಿಗಳಿಗೆ ಗಾಯ
Team Udayavani, Mar 27, 2017, 3:45 AM IST
ಫರೂಕಾಬಾದ್: ಉತ್ತರ ಪ್ರದೇಶದ ಫರೂಕಾಬಾದ್ ಜಿಲ್ಲಾ ಕಾರಾಗೃಹದಲ್ಲಿ ಭಾರಿ ಮಾರಾಮಾರಿ ಉಂಟಾಗಿದೆ. ಈ ಘಟನೆಯಲ್ಲಿ ಪ್ರಭಾರ ಜಿಲ್ಲಾ ದಂಡಾಧಿಕಾರಿ, ಜೈಲು ಸೂಪರಿಟೆಂ ಡೆಂಟ್ ಗಾಯಗೊಂಡಿದ್ದಾರೆ. ಭಾನುವಾರ ಬೆಳಗ್ಗೆ ಜೈಲಲ್ಲಿ ನೀಡಲಾಗಿರುವ ಆಹಾರದ ಗುಣಮಟ್ಟ ಚೆನ್ನಾಗಿ ಇಲ್ಲದೇ ಇದ್ದುದರಿಂದ ಕ್ರುದ್ಧರಾದರು. ಕಾರಾಗೃಹದಲ್ಲಿ ಸೂಕ್ತ ವೈದ್ಯಕೀಯ ವ್ಯವಸ್ಥೆ ಇಲ್ಲದ ಕಾರಣ ಕೈದಿಗಳ ಆರೋಗ್ಯ ಪದೆ ಪದೆ ಹದಗೆಡುತ್ತಿದೆ. ಈ ಸಮಸ್ಯೆ ಬಗೆಹರಿಸಬೇಕೆಂದು ಬ್ಯಾರೆಕ್ಗಳಿಂದ ಹೊರಬಂದು ಪ್ರತಿಭಟಿಸಲಾರಂಭಿಸಿದರು.
ಒಂದು ಹಂತದಲ್ಲಿ ಪ್ರತಿಭಟನೆ ಕೈಮೀರಿ ಹೋಗಿ, ಕೈದಿಗಳು ಪೊಲೀಸರತ್ತ ಇಟ್ಟಿಗೆ ಎಸೆಯಲಾರಂಭಿಸಿದರು. ಸುದ್ದಿ ತಿಳಿದು ಪ್ರಭಾರ ಜಿಲ್ಲಾ ದಂಡಾಧಿಕಾರಿ ಎನ್.ಪಿ.ಪಾಂಡೆ ಮತ್ತು ಜೈಲ್ ಸೂಪರಿಂಟೆಂಡೆಂಟ್ ರಾಕೇಶ್ ಕುಮಾರ್ ಸ್ಥಳಕ್ಕೆ ಧಾವಿಸಿದರು. ಅವರೂ ಕೂಡ ಅಧಿಕಾರಿಗಳ ಜತೆ ಸೇರಿ ಕೈದಿಗಳನ್ನು ಸಮಾಧಾನಪಡಿಸಲು ಯತ್ನಿಸಿದರಾದರೂ ಅದು ಕೈಗೂಡಲಿಲ್ಲ. ಈ ಹಂತದಲ್ಲಿ ಗುಂಪಿನಿಂದ ಎಸೆದ ಇಟ್ಟಿಗೆ ಇಬ್ಬರಿಗೂ ತಗುಲಿ ಗಾಯಗಳಾದವು. ಸೆರೆಮನೆ ವಾಸಿಗಳೂ ಜೈಲಿನ ಟೆರೇಸ್ ಮೇಲೇರಿ ಕೈಗೆ ಸಿಕ್ಕ ವಸ್ತುಗಳನ್ನೆತ್ತಿಕೊಂಡು ಅಧಿಕಾರಿಗಳು, ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ಎಸೆದರು. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಧಾವಿಸಿ ಪರಿಸ್ಥಿತಿ ನಿಯಂತ್ರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!