ಇನ್ನು ರಾತ್ರಿಯೂ ಪೋಸ್ಟ್ಮಾರ್ಟಂ; ಬ್ರಿಟಿಷರು ಜಾರಿಗೊಳಿಸಿದ್ದ ನಿರ್ಧಾರ ರದ್ದು
Team Udayavani, Nov 16, 2021, 7:10 AM IST
ಹೊಸದಿಲ್ಲಿ: ಇನ್ನು ಮುಂದೆ ಸೂಕ್ತ ರೀತಿಯ ವ್ಯವಸ್ಥೆ ಇರುವ ಆಸ್ಪತ್ರೆಗಳಲ್ಲಿ ಸೂರ್ಯಾಸ್ತದ ಬಳಿಕವೂ ಮೃತದೇಹಗಳ ಮರಣೋತ್ತರ ಪರೀಕ್ಷೆಗೆ ಅವಕಾಶ ಸಿಗಲಿದೆ. ಈ ಬಗ್ಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನಸುಖ ಮಾಂಡವಿಯಾ ಟ್ವೀಟ್ ಮಾಡಿದ್ದಾರೆ. ಹತ್ಯೆ, ಆತ್ಮಹತ್ಯೆ, ಅತ್ಯಾಚಾರ, ಸಂಶಯಾತ್ಮಕ ಸಾವು, ಕೊಳೆತ ಶವಗಳು ಪತ್ತೆಯಾದ ಪ್ರಕರಣಗಳಿಗೆ ಈ ನಿಯಮ ಅನ್ವಯವಾಗುವುದಿಲ್ಲ.
ಸಾಮಾನ್ಯ ಸಾವಿನ ಪ್ರಕರಣಗಳಲ್ಲಿ ಸೂರ್ಯಾಸ್ತದ ಬಳಿಕವೂ ಪೋಸ್ಟ್ ಮಾರ್ಟಂಗೆ ಅವಕಾಶ ನೀಡಿದರೆ ಅಂಗಾಂಗ ದಾನಗಳಿಗೆ ಸಹಾಯ ವಾಗಲಿದೆ. ರಾತ್ರಿ ವೇಳೆ ಮರಣೋತ್ತರ ಪರೀಕ್ಷೆ ನಡೆಸುವಂತೆ ಕೇಂದ್ರ ಸರಕಾರಕ್ಕೆ ಮನವಿಗಳು ಬಂದಿರುವ ಹಿನ್ನೆಲೆಯಲ್ಲಿ ಬ್ರಿಟಿಷರು ಜಾರಿ ಗೊಳಿಸಿದ್ದ ಪದ್ಧತಿಗೆ ಮುಕ್ತಾಯ ಹಾಡಲು ತೀರ್ಮಾನಿಸಲಾಗಿದೆ ಎಂದು ಮನಸುಖ ಮಾಂಡವಿಯಾ ಟ್ವೀಟ್ನಲ್ಲಿ ತಿಳಿಸಿದ್ದಾರೆ. ಜನರಿಗೆ ಮರಣೋತ್ತರ ಪರೀಕ್ಷೆಯ ಪದ್ಧತಿ ಯಲ್ಲಿ ಸದ್ಯ ಇರುವ ನಿಯಮಗಳಿಂದ ಅನನುಕೂಲ ವಾಗುತ್ತಿತ್ತು. ಹೀಗಾಗಿ ಅವುಗಳನ್ನು ರದ್ದುಪಡಿಸುವ ನಿಟ್ಟಿನಲ್ಲಿ ಮೋದಿ ಸರಕಾರ ಈ ನಿರ್ಧಾರ ಕೈಗೊಂಡಿದೆ ಎಂದು ಬರೆದುಕೊಂಡಿದ್ದಾರೆ.
ಇದನ್ನೂ ಓದಿ:ಆಸ್ಟ್ರೇಲಿಯಾದ ಮೆಲ್ಬರ್ನ್ ನಲ್ಲಿ ಗಾಂಧಿ ಪ್ರತಿಮೆ ಧ್ವಂಸ
ಸಭೆಯಲ್ಲಿ ನಿರ್ಧಾರ
ಕೇಂದ್ರ ಆರೋಗ್ಯ ಸೇವೆಗಳ ನಿರ್ದೇಶನಾ ಲಯ ಸೂರ್ಯಾಸ್ತದ ಬಳಿಕ ಮರಣೋತ್ತರ ಪರೀಕ್ಷೆ ನಡೆಸಲು ಅವಕಾಶ ನೀಡುವ ಬಗ್ಗೆ ಪರಿ ಶೀಲನೆ ನಡೆಸಿತ್ತು. ಈಗಾಗಲೇ ಕೆಲವು ವೈದ್ಯಕೀಯ ಸಂಸ್ಥೆಗಳು ರಾತ್ರಿ ಮರಣೋ ತ್ತರ ಪರೀಕ್ಷೆ ನಡೆಸುತ್ತಿವೆ ಎಂಬ ಅಭಿಪ್ರಾಯವೂ ವ್ಯಕ್ತವಾಗಿತ್ತು. ವೈದ್ಯಕೀಯ ಕ್ಷೇತ್ರದಲ್ಲಿ ತಾಂತ್ರಿಕವಾಗಿ ಸಾಕಷ್ಟು ಅಭಿವೃದ್ಧಿ ಸಾಧಿಸಲಾಗಿರುವ ಹಿನ್ನೆಲೆಯಲ್ಲಿ ಮತ್ತು ರಾತ್ರಿಯ ವೇಳೆ ಕೂಡ ಸಾಕಷ್ಟು ಒಳ್ಳೆಯ ಬೆಳಕು ಲಭ್ಯವಿರುವ ಕಾರಣ ಮರಣೋತ್ತರ ಪರೀಕ್ಷೆ ನಡೆಸಲು ಅವಕಾಶ ನೀಡಬಹುದು ಎಂದು ತೀರ್ಮಾನಿಸಲಾಗಿತ್ತು.
ವೀಡಿಯೋ ಚಿತ್ರೀಕರಣ
ರಾತ್ರಿ ವೇಳೆ ನಡೆಯುವ ಎಲ್ಲ ರೀತಿಯ ಮರಣೋತ್ತರ ಪರೀಕ್ಷೆಗಳ ವೀಡಿಯೋ ಚಿತ್ರೀಕರಣ ನಡೆಸಲು ಕೇಂದ್ರ ಆರೋಗ್ಯ ಸೇವೆಗಳ ನಿರ್ದೇಶನಾಲಯ ನಿರ್ಧರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?