ಕನ್ನಡದಲ್ಲಿ ಗ್ರಾಮೀಣ ಬ್ಯಾಂಕಿಂಗ್ ಪರೀಕ್ಷೆ
Team Udayavani, Jul 5, 2019, 5:01 AM IST
ಹೊಸದಿಲ್ಲಿ: ಬ್ಯಾಂಕಿಂಗ್ ಪರೀಕ್ಷೆ ತೆಗೆದುಕೊಳ್ಳುವವರಿಗೊಂದು ಸಿಹಿ ಸುದ್ದಿ. ಶೀಘ್ರದಲ್ಲೇ ಕನ್ನಡಿಗರು, ಕನ್ನಡದಲ್ಲೇ ಬ್ಯಾಂಕ್ಗಳ ಸಿಬಂದಿ ನೇಮಕಾತಿ ಪರೀಕ್ಷೆ ಬರೆಯಬಹುದು. ಕರ್ನಾಟಕ ಸರಕಾರದ ಬಹುದಿನಗಳ ಬೇಡಿಕೆಗೆ ಕೇಂದ್ರ ಸರಕಾರ ಕಡೆಗೂ ಒಪ್ಪಿಗೆ ನೀಡಿದೆ.
ಈವರೆಗೆ ಕೇವಲ ಇಂಗ್ಲಿಷ್ ಮತ್ತು ಹಿಂದಿ ಭಾಷೆಗಳಲ್ಲಿ ಮಾತ್ರ ನಡೆಸಲಾಗುತ್ತಿದ್ದ ಬ್ಯಾಂಕ್ಗಳ ಸಿಬಂದಿ ನೇಮಕಾತಿ ಪರೀಕ್ಷೆಗಳನ್ನು ಇನ್ನು ಮುಂದೆ ಕನ್ನಡ ಸಹಿತ 13 ಪ್ರಾಂತೀಯ ಭಾಷೆಗಳಲ್ಲಿ ನಡೆಸುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ಗುರುವಾರ ಘೋಷಿಸಿದರು.
ವಿವಿಧ ರಾಜ್ಯಗಳಲ್ಲಿನ ಪ್ರಾಂತೀಯ ಹಾಗೂ ಗ್ರಾಮೀಣ ಬ್ಯಾಂಕ್ (ಆರ್ಆರ್ಬಿ)ಗಳಲ್ಲಿನ ಅಧಿಕಾರಿಗಳು (ಶ್ರೇಣಿ-1) ಹಾಗೂ ಕಚೇರಿಯ ಸಹಾಯಕ ಸಿಬಂದಿಯ ನೇರ ನೇಮಕಾತಿ ಪರೀಕ್ಷೆಗಳನ್ನು ಆಯಾ ಪ್ರಾದೇಶಿಕ ಭಾಷೆಗಳಲ್ಲಿ ನಡೆಸಬೇಕು ಎಂಬುದು ಕರ್ನಾಟಕ ಸಹಿತ ಹಲವಾರು ರಾಜ್ಯ ಸರಕಾರಗಳ ಬೇಡಿಕೆಯಾಗಿತ್ತು.
ಇತ್ತೀಚೆಗಷ್ಟೇ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಸಂಸದರಾದ ತೇಜಸ್ವಿ ಸೂರ್ಯ ಮತ್ತು ಚಂದ್ರಶೇಖರ್, ಬ್ಯಾಂಕಿಂಗ್ ಪರೀಕ್ಷೆಗಳಲ್ಲಿ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಪ್ರಸ್ತಾವಿಸಿದ್ದರು. ಆಗ ಉತ್ತರಿಸಿದ್ದ ನಿರ್ಮಲಾ ಸೀತಾರಾಮನ್, ಈ ಬಗ್ಗೆ ಹಲವಾರು ಸಂಸದರಿಂದ ಮನವಿಗಳು ಬಂದಿವೆ ಎಂದು ಹೇಳಿದ್ದರು.
ಇದೇ ವಿಚಾರವಾಗಿ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಸ್ವಯಂ ಪ್ರೇರಿತವಾಗಿ ಉತ್ತರಿಸಿದ ಸಚಿವರು, ಪ್ರಾಂತೀಯ ಭಾಷೆಗಳನ್ನು ನಿರರ್ಗಳವಾಗಿ ಮಾತನಾಡುವ ಗ್ರಾಮೀಣ ಅಭ್ಯರ್ಥಿಗಳಿಗೆ ಪ್ರಾದೇಶಿಕ ಬ್ಯಾಂಕ್ಗಳಲ್ಲಿ ಉದ್ಯೋಗ ಸಂಪಾದಿಸುವ ಅವಕಾಶಗಳನ್ನು ಹೆಚ್ಚಿಸಲಾಗಿದೆ ಎಂದು ಹೇಳಿದರು.
ಸೌಲಭ್ಯ ವಿಸ್ತರಣೆಗೆ ಆಗ್ರಹ
ವಿತ್ತ ಸಚಿವರ ಘೋಷಣೆಯನ್ನು ಸ್ವಾಗತಿಸಿದ ರಾಜ್ಯಸಭೆ ಸಂಸದ ಎಲ್. ಹನುಮಂತಯ್ಯ, ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ಬರೆಯುವ ಅವಕಾಶ, ರಾಷ್ಟ್ರೀಯ ಬ್ಯಾಂಕ್ಗಳ ಸಿಬಂದಿ ನೇಮಕಾತಿಗೂ ಅನ್ವಯವಾಗುವಂತಾಗಲಿ ಎಂದು ಆಶಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
West Bengal; ಶಿಕ್ಷಕರ ನೇಮಕ ಹಗರಣ: ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತರಾಟೆ
Bijnor; ಸಿಗರೇಟಿಂದ ಸುಟ್ಟು ಪತಿಗೆ ಚಿತ್ರಹಿಂಸೆ: ಸಿಸಿಟಿವಿ ವಿಡಿಯೋ ಆಧರಿಸಿ ಪತ್ನಿ ಸೆರೆ
ಕಾಶ್ಮೀರದಲ್ಲಿ ಎನ್ಕೌಂಟರ್: ಇಬ್ಬರು ಉಗ್ರರ ಹತ್ಯೆ
Manipur; ಹಸುವಿಗೆ ಗುಂಡಿಟ್ಟು ಕೊಂದ ಕ್ರೂರಿ!: ವ್ಯಾಪಕ ಆಕ್ರೋಶ
Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ
MUST WATCH
ಹೊಸ ಸೇರ್ಪಡೆ
West Bengal; ಶಿಕ್ಷಕರ ನೇಮಕ ಹಗರಣ: ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತರಾಟೆ
Bijnor; ಸಿಗರೇಟಿಂದ ಸುಟ್ಟು ಪತಿಗೆ ಚಿತ್ರಹಿಂಸೆ: ಸಿಸಿಟಿವಿ ವಿಡಿಯೋ ಆಧರಿಸಿ ಪತ್ನಿ ಸೆರೆ
KKR ತಂಡಕ್ಕೆ ಮರಳಲಿರುವ ಅಫ್ಘಾನ್ ಬ್ಯಾಟರ್ ರಹ್ಮಾನುಲ್ಲ ಗುರ್ಬಾಝ್
G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?
Prajwal Revanna Case ಸದ್ಯದಲ್ಲೇ ರಾಜ್ಯಪಾಲರ ಭೇಟಿ: ಕುಮಾರಸ್ವಾಮಿ