ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿ ಶಿವಸೇನೆಯಿಂದ: ಸಾಮ್ನಾದಲ್ಲಿ ಘೋಷಣೆ
Team Udayavani, Jun 19, 2019, 11:17 AM IST
ಮುಂಬಯಿ : ಶಿವಸೇನೆಯ ವ್ಯಕ್ತಿಯೋರ್ವ ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿಯಾಗುತ್ತಾರೆ ಎಂದು ಪಕ್ಷವು ತನ್ನ ಮುಖವಾಣಿ ಸಾಮ್ನಾ ದ ಸಂಪಾದಕೀಯದಲ್ಲಿ ಬರೆದಿದೆ.
2019ರ ಲೋಕಸಭಾ ಚುನಾವಣೆಗೆ ಮುನ್ನ ಬಿಜೆಪಿ ಮತ್ತು ಕೇಂದ್ರ ಸರಕಾರದ ಕಟು ಟೀಕಾಕಾರನಾಗಿದ್ದು ಚುನಾವಣೆ ಸನ್ನಿಹಿತವಾಗುತ್ತಿದ್ದಂತೆಯೇ ಬಿಜೆಪಿ ಜತೆಗಿನ ಮಿತೃತ್ವವನ್ನು ಮತ್ತೆ ಆರಂಭಿಸಿದ್ದ ಶಿವಸೇನೆ ಇದೀಗ, ಶಿವಸೇನೆಯ ಓರ್ವ ಸದಸ್ಯ ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿಯಾಗುತ್ತಾರೆ ಎಂದು ಬಹಿರಂಗವಾಗಿ ಹೇಳಿರುವುದು ಉಭಯ ಪಕ್ಷಗಳ ನಡುವಿನ ಜಿದ್ದಾಜಿದ್ದಿಯ ವಿಷಯವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
‘ಶಿವಸೇನೆಯು ತನ್ನ ಪಣದೊಂದಿಗೆ ಮುಂದಡಿ ಇಟ್ಟಿದೆ. ರಾಜ್ಯ ವಿಧಾನಸಭೆಯನ್ನು ಸಂಪೂರ್ಣವಾಗಿ ಕೇಸರಿಮಯ ಗೊಳಿಸುವ ಪಣವನ್ನು ನಾವು ತೊಟ್ಟಿದ್ದೇವೆ. ಅಂತೆಯೇ ಪಕ್ಷದ 54ನೇ ಸಂಸ್ಥಾಪನಾ ದಿನದಂದು, ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿ ಶಿವಸೇನೆಯ ಓರ್ವ ವ್ಯಕ್ತಿ ಆಗುತ್ತಾರೆ’ ಎಂದು ಸಾಮ್ನಾ ಸಂಪಾದಕೀಯದಲ್ಲಿ ಶಿವಸೇನೆ ಘೋಷಿಸಿದೆ.
ಪಕ್ಷವು ಸಾಗಿ ಬಂದಿರುವ ಹಾದಿಯನ್ನು ಅವಲೋಕಿಸಿರುವ ಸಾಮ್ನಾ ಸಂಪಾದಕೀಯ, ‘ಪಕ್ಷದ ಬೇರುಗಳು ಮಹಾರಾಷ್ಟ್ರದಲ್ಲಿ ಬಲಗೊಂಡಿವೆ; ದಿಲ್ಲಿಯಲ್ಲಿ ಅದರ ಕೊಂಬೆಗಳು ಚಾಚಿಕೊಳ್ಳುತ್ತಿವೆ’ ಎಂದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
ಕೋರ್ಟ್ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ
Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ
ನಟ, ಕಾಂಗ್ರೆಸ್ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ
MUST WATCH
ಹೊಸ ಸೇರ್ಪಡೆ
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ