ಶಬರಿಮಲೆ: 2ನೇ ದಿನ ಶಾಂತಿಯುತ ಯಾತ್ರೆ


Team Udayavani, Nov 19, 2018, 9:40 AM IST

shabarimale.jpg

ಶಬರಿಮಲೆ/ತಿರುವನಂತಪುರ: ಶಬರಿಮಲೆ ಯಾತ್ರೆಯ ಎರಡನೇ ದಿನವಾದ ಭಾನುವಾರ ಹೆಚ್ಚಾ ಕಡಿಮೆ ಶಾಂತಿಯುತ ವಾತಾವರಣ ಇತ್ತು. ಆದರೆ ಅಯ್ಯಪ್ಪ ದೇಗುಲದತ್ತ ತೆರಳಿದ್ದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೆ.ಸುರೇಂದ್ರನ್‌ ಅವರ ಬಂಧನ ಖಂಡಿಸಿ ಕೇರಳದ ಇತರ ಭಾಗಗಳಲ್ಲಿ ಭಾರೀ ಪ್ರತಿಭಟನೆ ನಡೆದಿದೆ.

ಇತರ ರಾಜ್ಯಗಳಿಂದಲೂ ಲಕ್ಷಾಂತರ ಭಕ್ತರು ಶಬರಿಮಲೆಗೆ ಭೇಟಿ ನೀಡಿದ್ದಾರೆ. ಮಲಯಾಳ ತಿಂಗಳ ವೃಶ್ಚಿಕ ದಿನದ 2ನೇ ದಿನ ಹೆಚ್ಚು ಸಮಯ ಭಕ್ತರಿಗೆ ಅಯ್ಯಪ್ಪನ ದರ್ಶಕ್ಕೆ ಅವಕಾಶ ಸಿಕ್ಕಿತು. ದೇಗುಲದ ಆವರಣದಲ್ಲಿ ರವಿವಾರ ಹೆಚ್ಚಿನ ಸಂಖ್ಯೆಯ ಭಕ್ತರು ಇಲ್ಲದ್ದರಿಂದ ಇದು ಸಾಧ್ಯವಾಯಿತು. ಪಂಪಾ ತೀರದ ನಿಳಕ್ಕಲ್‌ನಿಂದ ಸನ್ನಿಧಾನಂವರೆಗೆ 18 ಕಿಮೀ ದೂರ ಕ್ರಮಿಸಲು 2 ಗಂಟೆ ತಗುಲಿದ್ದಕ್ಕೆ ಕೆಲ ಭಕ್ತರು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. “ನಿಳಕ್ಕಲ್‌ಗೆ ಬೆಳಗ್ಗೆ 4 ಗಂಟೆಗೆ ತಲುಪಿದ್ದೆವು. ಪಂಪಾಕ್ಕೆ ತೆರಳಲು ಬಸ್‌ 6 ಗಂಟೆಗೆ ಎಂದ ಕಾರಣ ನಾವು ಕಾಯಬೇಕಾಯಿತು. ಉಳಿದಂತೆ ಎಲ್ಲವೂ ಸುಸೂತ್ರವಾಗಿತ್ತು ‘ ಎಂದು ಕೊಯಮತ್ತೂರು ನಿವಾಸಿ ಪಳನಿಸ್ವಾಮಿ ಎಂಬವರು ಹೇಳಿದ್ದಾರೆ. 

ಬಸ್‌ ಸೇವೆಯಲ್ಲಿ ವಿಳಂಬವಾಗಿತ್ತೇ ಎಂದು ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಪಂಪಾ ಕಚೇರಿಯಲ್ಲಿ ಪ್ರಶ್ನಿಸಿದಾಗ, ಅಧಿಕಾರಿಗಳು ಅದನ್ನು ಸಾರಾಸಗಟಾಗಿ ತಿರಸ್ಕರಿಸಿದ್ದಾರೆ. ಹೆಚ್ಚಿನ ಬಸ್‌ಗಳು ಬೆಳಗ್ಗಿನ ಅವಧಿಯಲ್ಲಿ ಖಾಲಿ ಸೀಟ್‌ಗಳಲ್ಲಿ ಓಡಾಡುತ್ತಿದ್ದವು ಎಂದು ಹೇಳಿದ್ದಾರೆ.  

14 ದಿನ ನ್ಯಾಯಾಂಗ ಬಂಧನ: ದೇಗುಲ ಪ್ರವೇಶಕ್ಕೆ ಮುಂದಾಗಿದ್ದ ಕೇರಳ ಬಿಜೆಪಿ ಘಟಕದ ಪ್ರಧಾನ ಕಾರ್ಯದರ್ಶಿ ಕೆ.ಸುರೇಂದ್ರನ್‌ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ವಶಕ್ಕೆ ಒಪ್ಪಿಸಿ ಪಟ್ಟಂತಿಟ್ಟ ಜಿಲ್ಲಾ ಮೊದಲ ದರ್ಜೆ ಮ್ಯಾಜಿಸ್ಟ್ರೇಟ್‌ ಕೋರ್ಟ್‌ ನ್ಯಾಯಾಧೀಶರು ಆದೇಶ ನೀಡಿದ್ದಾರೆ. ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದ ಸುರೇಂದ್ರನ್‌, ಪೊಲೀಸರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ. ಕುಡಿಯಲು ನೀರು, ಆಹಾರ ಮತ್ತು ತಮ್ಮ ಔಷ« ‌ಗಳ ಸೇವೆಗೆ ಕೂಡ ಅವಕಾಶ ನೀಡಲಿಲ್ಲ’ ಎಂದಿದ್ದಾರೆ. ತಮ್ಮ ಬಂಧನ ರಾಜಕೀಯವಾಗಿ ಪ್ರೇರಿತ ಎಂದೂ ಆರೋಪಿಸಿದ್ದಾರೆ. ಬಳಿಕ ಅವರನ್ನು ಕೊಟ್ಟಾರಕರ ಉಪ ಜೈಲಿಗೆ ಕರೆದೊಯ್ಯಲಾಗಿದೆ.

ಕೇರಳಾದ್ಯಂತ ಪ್ರತಿಭಟನೆ: ಕೆ.ಸುರೇಂದ್ರನ್‌ ಬಂಧನದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಹಲವು ಭಾಗಗಳಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಬೆಳಗ್ಗೆ 10 ಗಂಟೆಯಿಂದ ಪ್ರಮುಖ ರಸ್ತೆಗಳು, ಹೆದ್ದಾರಿಯಲ್ಲಿ ವಾಹನಗಳನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ, ಅಯ್ಯಪ್ಪ ಭಕ್ತರ ಮಾನವ ಹಕ್ಕುಗಳ ಉಲ್ಲಂಘನೆ ಆಗುತ್ತಿದೆ ಎಂದು ಕೇರಳ ಮಾನವ ಹಕ್ಕುಗಳ ಆಯೋಗ ಆರೋಪಿಸಿದ್ದು, ಭಕ್ತರಿಗೆ ಸೂಕ್ತ ಮೂಲಸೌಕರ್ಯ ಕಲ್ಪಿಸುವಂತೆ ಟಿಡಿಬಿ, ಡಿಜಿಪಿ ಹಾಗೂ ಸ್ಥಳೀಯಾಡಳಿತಕ್ಕೆ ಸೂಚನೆ ನೀಡಿದೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.