ಶಬರಿಮಲೆ: ಸಿಂಘ್ವಿ ಶುಲ್ಕ 62 ಲಕ್ಷ ರೂ.
Team Udayavani, Aug 1, 2019, 5:46 AM IST
ತಿರುವನಂತಪುರಂ: ಶಬರಿಮಲೆಗೆ ಮಹಿಳೆಯ ಪ್ರವೇಶ ಕುರಿತ ಪ್ರಕರಣದಲ್ಲಿ ಸುಪ್ರೀಂಕೋರ್ಟ್ನಲ್ಲಿ ವಾದಿಸಿದ್ದಕ್ಕೆ ಕಾಂಗ್ರೆಸ್ ಮುಖಂಡ ಮತ್ತು ವಕೀಲ ಅಭಿಷೇಕ್ ಮನು ಸಿಂಘ್ವಿ 62 ಲಕ್ಷ ರೂ. ಶುಲ್ಕವನ್ನು ತಿರುವಾಂಕೂರು ದೇವಸ್ವಂ ಮಂಡಳಿಗೆ (ಟಿಡಿಬಿ) ವಿಧಿಸಿದ್ದಾರೆ ಎಂಬುದು ತಿಳಿದುಬಂದಿದೆ. ಆದರೆ ಶುಲ್ಕವನ್ನು ಕಡಿಮೆ ಮಾಡಿಕೊಳ್ಳುವಂತೆ ಟಿಡಿಬಿ ಆಗ್ರಹಿಸಿದೆ. ಪ್ರಕರಣದಿಂದಾಗಿ ದೇಗುಲದ ಆದಾಯದ ಮೇಲೆ ಪರಿಣಾಮ ಬೀರಿದೆ. ಹೀಗಾಗಿ ಇಷ್ಟು ಮೊತ್ತವನ್ನು ಪಾವತಿ ಮಾಡಲು ಸಾಧ್ಯವಾಗದು ಎಂದು ಟಿಡಿಬಿ ಹೇಳಿದೆ ಎನ್ನಲಾಗಿದೆ.
ಟಿಡಿಬಿ ಅಧ್ಯಕ್ಷ ಎ ಪದಮ್ಕುಮಾರ್ ಹೇಳುವಂತೆ ಇಷ್ಟು ದೊಡ್ಡ ಮೊತ್ತವನ್ನು ಮಂಡಳಿ ಪಾವತಿಸಲು ಸಾಧ್ಯವಿಲ್ಲ. ಸಿಂಘ್ವಿಯವರನ್ನು ನಾವು ನೇಮಿಸಿರಲಿಲ್ಲ. ನಮ್ಮ ಶಿಫಾರಸಿನ ಮೇರೆಗೆ ಸರ್ಕಾರ ನೇಮಕ ಮಾಡಿತ್ತು. ಆದರೆ ಬಿಲ್ ನಮಗೆ ಕಳುಹಿಸಲಾಗಿದೆ. ಈ ವಿಚಾರವನ್ನು ಸರ್ಕಾರದ ಗಮನಕ್ಕೆ ತಂದಿದ್ದೇವೆ ಎಂದಿದ್ದಾರೆ. ಮೂಲಗಳ ಪ್ರಕಾರ ಪ್ರಕರಣದಲ್ಲಿ ಟಿಟಿಡಿ ಪರ ವಾದಿಸಲು ಗೋಪಾಲ್ ಸುಬ್ರಮಣ್ಯನ್ ಮತ್ತು ಮೋಹನ್ ಪರಾಶರನ್ರನ್ನು ಶಿಫಾರಸು ಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
MUST WATCH
ಹೊಸ ಸೇರ್ಪಡೆ
Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು
Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ
Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ
ʼಭಜರಂಗಿ ಭಾಯಿಜಾನ್ʼ, ʼರೌಡಿ ರಾಥೋರ್ʼ ಸೀಕ್ವೆಲ್ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ನಿರ್ಮಾಪಕ
Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ