ಶಬರಿಮಲೆ ‘ಮದ್ಯ ಮತ್ತು ಮಾದಕ ದ್ರವ್ಯ ಮುಕ್ತ ವಲಯ’: ಕೇರಳ ಸರಕಾರ
ನಿಷೇಧಾಜ್ಞೆಯ ಕಟ್ಟುನಿಟ್ಟಿನ ಅನುಷ್ಠಾನ
Team Udayavani, Nov 10, 2022, 9:14 PM IST
ಶಬರಿಮಲೆ : ಅಯ್ಯಪ್ಪ ದೇವಾಲಯದಲ್ಲಿ ಎರಡು ತಿಂಗಳ ಕಾಲ ನಡೆಯುವ ವಾರ್ಷಿಕ ಮಂಡಲಂ-ಮಕರ ಸಂಕ್ರಮಣ ಉತ್ಸವಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇರುವ ಕಾರಣ ಪ್ರದೇಶಗಳಲ್ಲಿರುವ ಆವರಣವನ್ನು ಮದ್ಯ ಮತ್ತು ಮಾದಕ ದ್ರವ್ಯ ಮುಕ್ತ ವಲಯ ಎಂದು ಕೇರಳ ಸರಕಾರ ಗುರುವಾರ ಘೋಷಿಸಿದೆ.
ದೇಗುಲಕ್ಕೆ ದೇಶ ಮತ್ತು ಹೊರಗಿನ ಲಕ್ಷಾಂತರ ಭಕ್ತರನ್ನು ಆಕರ್ಷಿಸುವ ವಾರ್ಷಿಕ ಉತ್ಸವ ನವೆಂಬರ್ 17 ರಿಂದ ಪ್ರಾರಂಭವಾಗಿ ಜನವರಿ 15, 2023 ರಂದು ಮುಕ್ತಾಯಗೊಳ್ಳುತ್ತದೆ.
ದೇವಸ್ಥಾನ ಸಂಕೀರ್ಣ, ಪಂಪಾ , ತ್ರಿವೇಣಿ, ಮರಕೂಟಂ, ಶಬರಿ ಪೀಠ ಹೀಗೆ ಇಲ್ಲಿಯ ರನ್ನಿ ತಾಲೂಕಿನ ಪೆರಿನಾಡು ಮತ್ತು ಕೊಲ್ಲಮುಳ ಗ್ರಾಮಗಳ ಹಲವಾರು ಪ್ರದೇಶಗಳನ್ನು ಮದ್ಯ ಮತ್ತು ಮಾದಕ ದ್ರವ್ಯ ಮುಕ್ತ ವಲಯ ಎಂದು ಘೋಷಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಈ ಪ್ರದೇಶಗಳಲ್ಲಿ ನವೆಂಬರ್ 14 ರಿಂದ ಜನವರಿ 22, 2023 ರವರೆಗೆ ಮದ್ಯ, ಮಾದಕ ದ್ರವ್ಯಗಳು ಮತ್ತು ತಂಬಾಕು ಉತ್ಪನ್ನಗಳ ಸೇವನೆ ಮತ್ತು ಮಾರಾಟವನ್ನು ನಿಷೇಧಿಸಿ ಆದೇಶವನ್ನು ಹೊರಡಿಸಲಾಗಿದೆ. ಶಬರಿಮಲೆ, ಪಂಪಾ , ನಿಲಕ್ಕಲ್ ಮತ್ತು ಪಕ್ಕದ ಪ್ರದೇಶಗಳಿಗೆ ಪ್ರವೇಶಿಸುವ ಯಾತ್ರಾರ್ಥಿಗಳು, ಮಾರಾಟಗಾರರು ಮತ್ತು ಇತರ ಎಲ್ಲ ಜನರು ಈ ನಿಟ್ಟಿನಲ್ಲಿ ಜಾಗರೂಕರಾಗಿರಬೇಕು. ಮದ್ಯ ಮತ್ತು ಇತರೆ ಮಾದಕ ವಸ್ತುಗಳ ನಿಷೇಧದ ಕುರಿತು ವಿವಿಧೆಡೆ ಬಹುಭಾಷಾ ಎಚ್ಚರಿಕೆ ಫಲಕಗಳನ್ನು ಅಳವಡಿಸಲಾಗಿದೆ.
ವಾರ್ಷಿಕ ಉತ್ಸವಕ್ಕೆ ಸಂಬಂಧಿಸಿದಂತೆ ಸನ್ನಿಧಾನಂ, ನಿಲಕ್ಕಲ್ ಮತ್ತು ಪಂಪಾದಲ್ಲಿ ತಾತ್ಕಾಲಿಕ ವ್ಯಾಪ್ತಿಯ ಕಚೇರಿಗಳನ್ನು ತೆರೆಯುವ ಮತ್ತೊಂದು ಸರ್ಕಾರಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಪಂಬಾ ಮೂಲದ ಅಬಕಾರಿ ನಿಯಂತ್ರಣ ಕೊಠಡಿಯು ನವೆಂಬರ್ 14 ರಿಂದ ಸಹಾಯಕ ಅಬಕಾರಿ ಆಯುಕ್ತರ ಅಧೀನದಲ್ಲಿ ಕಾರ್ಯನಿರ್ವಹಿಸಲು ಪ್ರಾರಂಭಿಸಲಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.
ನಿಷೇಧಾಜ್ಞೆಯ ಕಟ್ಟುನಿಟ್ಟಿನ ಅನುಷ್ಠಾನಕ್ಕಾಗಿ ಪೊಲೀಸ್, ಅಬಕಾರಿ ಮತ್ತು ಅರಣ್ಯ ಅಧಿಕಾರಿಗಳ ಜಂಟಿ ತಂಡ ಕಾರ್ಯಾಚರಣೆ ನಡೆಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
MUST WATCH
ಹೊಸ ಸೇರ್ಪಡೆ
ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ
Road Mishap; ಬೈಕ್-ಪಿಕ್ ಅಪ್ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ