ಮುಚ್ಚಿತು ದೇಗುಲದ ಬಾಗಿಲು


Team Udayavani, Oct 23, 2018, 6:00 AM IST

37.jpg

ಪಂಪಾ/ಹೊಸದಿಲ್ಲಿ: ಐದು ದಿನಗಳ ಕಾಲ ತೆರೆದಿದ್ದ ಶಬರಿಮಲೆಯಲ್ಲಿರುವ ಅಯ್ಯಪ್ಪ ದೇಗುಲದ ಬಾಗಿಲನ್ನು ಸೋಮವಾರ ರಾತ್ರಿಯ ಪೂಜೆಯ ಬಳಿಕ ಮುಚ್ಚಲಾಗಿದೆ. ಬೆಳಗ್ಗೆ ದೇಗುಲ ಪ್ರವೇಶ ಮಾಡಲು ಮುಂದಾ ಗಿದ್ದ ಇಬ್ಬರು ಮಹಿಳೆಯರ ಪ್ರಯತ್ನ  ವಿಫ‌ಲಗೊಳಿಸಲಾಗಿದೆ. ಇದೇ ವೇಳೆ ಸೆ.28ರಂದು ನೀಡಿದ್ದ ತೀರ್ಪಿನ ಪುನರ್‌ ಪರಿಶೀಲನೆ ಕೋರಿ ಸಲ್ಲಿಕೆಯಾಗಿರುವ 19 ಅರ್ಜಿಗಳನ್ನು ಮಂಗಳವಾರ ಪರಿಶೀಲಿಸಿ, ವಿಚಾರಣೆ ದಿನಾಂಕ ನಿಗದಿ ಪಡಿಸುವುದಾಗಿ ಸುಪ್ರೀಂಕೋರ್ಟ್‌ ಹೇಳಿದೆ. 

5 ದಿನಗಳ ಪೂಜೆಯ ಬಳಿಕ ಸೋಮವಾರ ರಾತ್ರಿ 10 ಗಂಟೆಗೆ ದೇಗುಲ ಬಾಗಿಲು ಹಾಕಿದೆ. ನವೆಂಬರ್‌ 14ರಂದು ಮತ್ತೆ ಬಾಗಿಲು ತೆರೆಯಲಾಗುತ್ತದೆ. ಬೆಳಗ್ಗೆ ನಡೆದಿದ್ದ ಬೆಳವಣಿಗೆಯಲ್ಲಿ ಪಂಪಾ ತೀರಕ್ಕೆ ತೆರಳುವ ವೆಟ್ಟುಪ್ಪಾರ ಎಂಬಲ್ಲಿ ಅಯ್ಯಪ್ಪ ದೇಗುಲಕ್ಕೆ ತೆರಳಲು ಉದ್ದೇಶಿಸಿದ್ದ ಕೇರಳದ ಮಹಿಳೆಯನ್ನು ಭಕ್ತರು ತಡೆದಿದ್ದಾರೆ. ಮತ್ತೂಂದು ಬೆಳವಣಿಗೆಯಲ್ಲಿ ಕೊಟ್ಟಾಯಂನ ದಲಿತ ಹೋರಾಟಗಾರ್ತಿ ಬಿಂದು ಎಂಬುವರು ಸುಪ್ರೀಂಕೋರ್ಟ್‌ ಆದೇಶದ ಪ್ರತಿ ಜತೆಗೆ ದೇಗುಲ ಪ್ರವೇಶಕ್ಕೆ ತೆರಳುತ್ತಿದ್ದೇನೆ. ರಕ್ಷಣೆ ನೀಡಬೇಕು ಎಂದು ಪೊಲೀಸರ ಬಳಿ ಮನವಿ ಮಾಡಿಕೊಂಡಿ ದ್ದರು. ಅವರು ಬಸ್‌ನಲ್ಲಿ ಪ್ರಯಾಣ ಆರಂಭಿಸಬೇಕು ಎನ್ನುವಷ್ಟರಲ್ಲಿ ಬಿಜೆಪಿ ಕಾರ್ಯಕರ್ತರು ತಡೆದರು. ಬಳಿಕ ಪೊಲೀಸ್‌ ರಕ್ಷಣೆಯಲ್ಲಿ ಅವರನ್ನು ಮುಂಡಕಾಯಂ ಠಾಣೆಗೆ ಕರೆದೊಯ್ಯ ಲಾಯಿತು. ಅಲ್ಲಿಯೂ ಬಿಜೆಪಿ ಕಾರ್ಯಕರ್ತರು ಮತ್ತು ಭಕ್ತರು ಪ್ರತಿಭಟನೆ ನಡೆಸಿದರು. ಕೊಟ್ಟಾಯಂನಲ್ಲಿರುವ ಬಿಂದು ಅವರ ಮನೆ ಎದುರೂ ನೂರಾರು ಮಂದಿ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲಿಗೆ ತೆರಳಿದ ಪೊಲೀಸರು ಬಂದೋಬಸ್ತ್ ಮಾಡಿದರು. ಅದಕ್ಕೆ ಪೂರಕವಾಗಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಹಿಂಪಡೆದರು.  ಭಾನುವಾರ ಒಂದೇ ದಿನ ಆರು ಮಂದಿ ಮಹಿಳೆಯರು ದೇಗುಲ ಪ್ರವೇಶಕ್ಕೆ ಮುಂದಾಗಿದ್ದರು. ಸೆ.28ರಂದು ಎಲ್ಲಾ ವಯೋಮಿತಿಯ ಮಹಿಳೆಯರು ದೇಗುಲ ಪ್ರವೇಶ ಮಾಡ ಬಹುದು ಎಂದು ತೀರ್ಪು ನೀಡಿದ ಬಳಿಕ ಅ.17ರಂದು ದೇಗುಲ ಬಾಗಿಲು ತೆರೆದಿತ್ತು.

ಮೂವರ ಬಂಧನ: ನಿಳಕ್ಕಲ್‌ನಲ್ಲಿ ಸೆಕ್ಷನ್‌ 144 ಉಲ್ಲಂ ಸಿದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ನಾಯಕ ಪಿ.ಕೆ.ಕೃಷ್ಣದಾಸ್‌ ಮತ್ತು ಇತರ ಇಬ್ಬರನ್ನು ಬಂಧಿಸಲಾಗಿದೆ. 

ರಾಹುಲ್‌ಗೆ ಜಾಮೀನು: ಶಬರಿಮಲೆ ದೇಗುಲದ ಮುಖ್ಯ ಅರ್ಚಕರ ಕುಟುಂಬ ಸದಸ್ಯ, ಧರ್ಮ ಜನ ಸೇನಾ ಸಂಘಟನೆ ಮುಖ್ಯಸ್ಥ ರಾಹುಲ್‌ ಈಶ್ವರ್‌ಗೆ ಪಟ್ಟಣಂತಿಟ್ಟ ಮುನ್ಸಿಫ್ ಕೋರ್ಟ್‌ ಸೋಮವಾರ ಜಾಮೀನು ನೀಡಿದೆ. ಅವರನ್ನು ಅ.19 ರಂದು ಮಹಿಳೆಯರ ಪ್ರವೇಶ ವಿರೋಧಿಸಿ ಪ್ರತಿಭಟನೆ ನಡೆಸಿದ್ದಕ್ಕಾಗಿ ಬಂಧಿಸಲಾಗಿತ್ತು. 

ಫಾತಿಮಾಗೆ ವರ್ಗ: ಅಯ್ಯಪ್ಪ ದೇಗುಲ ಪ್ರವೇಶ ಮಾಡಲು ಯತ್ನಿಸಿದ ಸರಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್‌ ಉದ್ಯೋಗಿ ರೆಹಾನಾ ಫಾತಿಮಾರನ್ನು ವರ್ಗಾಯಿಸ ಲಾಗಿದೆ. ಜತೆಗೆ ಅವರ ವಿರುದ್ಧ ಆಂತರಿಕ ತನಿಖೆ ನಡೆಸಲೂ ತೀರ್ಮಾನಿಸಲಾಗಿದೆ. ವರ್ಗಾ ವಣೆಗೆ ಪ್ರತಿಕ್ರಿಯೆ ನೀಡಿರುವ ರೆಹಾನಾ “ಇದು ನನಗೆ ಅಯ್ಯಪ್ಪ ಸ್ವಾಮಿಯ ಆಶೀರ್ವಾದ’ ಎಂದಿದ್ದಾರೆ. ಶಬರಿಮಲೆ ದೇಗುಲ ಪರಿಸರದ ಸ್ಥಿತಿಗತಿ ಬಗ್ಗೆ ಸುಪ್ರೀಂಕೋರ್ಟ್‌ಗೆ ಮಾಹಿತಿ ನೀಡುವ ನಿರ್ಧಾರದ ಕುರಿತು ಕೇರಳದ ಮುಜರಾಯಿ ಸಚಿವ ಕಡಕಂಪಳ್ಳಿ ಸುರೇಂದ್ರನ್‌ ಸ್ವಾಗತಿಸಿದ್ದಾರೆ. 

ಇಂದು ತೀರ್ಮಾನ: ಸೆ.28ರಂದು ದೇಗುಲ ಪ್ರವೇಶಕ್ಕೆ ಸಂಬಂಧಿಸಿ ನೀಡಲಾಗಿ ರುವ ತೀರ್ಪಿನ ಮರು ಪರಿಶೀಲನೆ ಕೋರಿ ಸಲ್ಲಿಸಲಾಗಿರುವ 19 ಅರ್ಜಿಗಳ ಬಗ್ಗೆ ಮಂಗಳ ವಾರ ಪರಿಶೀಲನೆ ನಡೆಸಿ ತೀರ್ಮಾನಿಸುವುದಾಗಿ ಸುಪ್ರೀಂಕೋರ್ಟ್‌ ಹೇಳಿದೆ. ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೋಯ್‌ ನೇತೃತ್ವದ ಪೀಠ “19 ಮೇಲ್ಮನವಿ ಅರ್ಜಿಗಳಿರುವುದು ನಮ್ಮ ಗಮನಕ್ಕೆ ಬಂದಿದೆ. ಅವುಗಳ ಬಗ್ಗೆ ಮಂಗಳವಾರ ತೀರ್ಮಾನ ಕೈಗೊಳ್ಳಲಾಗುತ್ತದೆ’ ಎಂದು ಹೇಳಿದೆ.

ಎರ್ನಾಕುಳಂನಲ್ಲಿರುವ ಬೋಟ್‌ಜೆಟ್ಟಿ ಶಾಖೆಗೆ ವರ್ಗಾವಣೆ ಬೇಕೆಂದು ಐದು ವರ್ಷಗಳ ಹಿಂದೆಯೇ ಪ್ರಯತ್ನ ಮಾಡಿದ್ದೆ. ಇದೀಗ ಸ್ವಾಮಿ ಅಯ್ಯಪ್ಪನ ದಯೆಯಿಂದ ಅದು ಆಗಿದೆ.
ರೆಹಾನಾ ಫಾತಿಮಾ, ಬಿಎಸ್‌ಎನ್‌ಎಲ್‌ ಉದ್ಯೋಗಿ

ತೀರ್ಪಿನ ಬಗ್ಗೆ ಮೇಲ್ಮನವಿ ಸಲ್ಲಿಸಬೇಕೋ ಬೇಡವೋ ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಈ ಬಗ್ಗೆ ಮಂಗಳವಾರ ತೀರ್ಮಾನಿಸಲಾಗುತ್ತದೆ.
ಎ.ಪದ್ಮಕುಮಾರ್‌, ಟಿಡಿಬಿ ಅಧ್ಯಕ್ಷ

ಒಂದೆಡೆ ದೊಡ್ಡ ಭೂತವಿದೆ, ಮತ್ತೂಂದೆಡೆ ಸಮುದ್ರವಿದೆ. ಇಂಥ ಸ್ಥಿತಿಯಲ್ಲಿ ಕೇರಳ ಸರಕಾರ ಇದೆ. ಸುಪ್ರೀಂಕೋರ್ಟ್‌ ಆದೇಶ ಪಾಲನೆಗೆ ಮುಂದಾಗುತ್ತಿದ್ದರೂ, ಬಿಜೆಪಿ ತಂಟೆ ಮಾಡಿ ಪರಿಸ್ಥಿತಿ ಹದಗೆಡಿಸಲು ಮುಂದಾಗುತ್ತಿದೆ. ಮುಂದಿನ ಲೋಕಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಅವರು ಈ ಕೆಲಸ ಮಾಡುತ್ತಿದ್ದಾರೆ.
ಕಡಕಂಪಳ್ಳಿ ಸುರೇಂದ್ರನ್‌  ಕೇರಳ ಮುಜರಾಯಿ ಸಚಿವ

ಟಾಪ್ ನ್ಯೂಸ್

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

rain

IMD; ದೇಶದಲ್ಲಿ ಈ ಬಾರಿ ಮುಂಗಾರಿನಲ್ಲಿ ಹೆಚ್ಚು ಮಳೆ: ಹವಾಮಾನ ಇಲಾಖೆ

amarnath

150 Rs.ನೀಡಿ ಪವಿತ್ರ ಅಮರನಾಥ ಯಾತ್ರೆಗೆ ನೋಂದಣಿ ಮಾಡಿಸಿ!

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

4-health

Nutritional Foods: ಹದಿಹರಯದಲ್ಲಿ ಪೌಷ್ಟಿಕಾಂಶ ಅಗತ್ಯಗಳು

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.