ಶಬರಿಮಲೆ ಅಯ್ಯಪ್ಪ ದೇಗುಲ: ಕೈಪಿಡಿ ವಾಪಸ್ ಪಡೆದ ಕೇರಳ ಸರ್ಕಾರ
Team Udayavani, Nov 18, 2022, 6:40 AM IST
ಪತನಂತಿಟ್ಟ: ವಾರ್ಷಿಕ ಉತ್ಸವಕ್ಕಾಗಿ ಶಬರಿಮಲೆ ಅಯ್ಯಪ್ಪ ದೇಗುಲ ಗುರುವಾರ ಭಕ್ತರಿಗೆ ತೆರೆಯುತ್ತಿದ್ದಂತೆಯೇ ಕೇರಳ ಸರ್ಕಾರ ಎಡವಟ್ಟು ಮಾಡಿಕೊಂಡಿದೆ.
2018ರಲ್ಲಿ ಸುಪ್ರೀಂಕೋರ್ಟ್ ಎಲ್ಲಾ ವಯೋಮಿತಿಯ ಮಹಿಳೆಯರಿಗೆ ದೇಗುಲಕ್ಕೆ ಪ್ರವೇಶಾವಕಾಶ ಮಾಡಿಕೊಡಬೇಕು ಎಂಬ ತೀರ್ಪಿನ ಅಂಶ ಇರುವ ಕೈಪಿಡಿಯನ್ನು ಮುದ್ರಿಸಿ ಪೊಲೀಸ್ ಇಲಾಖೆಗೆ ನೀಡಲಾಗಿತ್ತು. ಈ ಬಗ್ಗೆ ಬಿಜೆಪಿ ಕಟುವಾಗಿ ಆಕ್ಷೇಪ ವ್ಯಕ್ತಪಡಿಸಿದ ಬಳಿಕ ಅದನ್ನು ವಾಪಸ್ ಪಡೆಯಲಾಗಿದೆ. ದುರುದ್ದೇಶದಿಂದಲೇ ಎಲ್ಡಿಎಫ್ ಸರ್ಕಾರ ಇಂಥ ಕ್ರಮ ಕೈಗೊಂಡಿದೆ ಎಂದು ಅದು ಹೇಳಿತ್ತು. ಆದರೆ, ಈ ಆರೋಪ ತಿರಸ್ಕರಿಸಿದ್ದ ಕೇರಳ ದೇವಸ್ವಂ ಸಚಿವ ಕೆ.ರಾಧಾಕೃಷ್ಣನ್ ಬಹಳ ಹಿಂದೆಯೇ ಈ ಕೈಪಿಡಿ ಮುದ್ರಿಸಲಾಗಿತ್ತು ಎಂದಿದ್ದರು.
ಈ ನಡುವೆ ದೇಶದ ವಿವಿಧ ಭಾಗಗಳಿಂದ ಧಾರಾಕಾರ ಮಳೆಯನ್ನೂ ಲೆಕ್ಕಿಸದೆ ಅಯ್ಯಪ್ಪನ ಸನ್ನಿಧಾನಕ್ಕೆ ಬಂದು ಸಾವಿರಾರು ಮಂದಿ ದರ್ಶನ ಪಡೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!