ಕೇರಳ: ಹಿಂಸೆ, ಸ್ತಬ್ಧ


Team Udayavani, Jan 4, 2019, 12:30 AM IST

x-103.jpg

ತಿರುವನಂತಪುರ: ಇಬ್ಬರು ಮಹಿಳೆಯರು ಶಬರಿಮಲೆಯ ಅಯ್ಯಪ್ಪ ದೇಗುಲ ಪ್ರವೇಶಿಸಿದ್ದನ್ನು ಖಂಡಿಸಿ ಶಬರಿಮಲೆ ಕರ್ಮ ಸಮಿತಿ ಮತ್ತು ಬಿಜೆಪಿ ಕರೆ ನೀಡಿದ್ದ ಹರತಾಳ ಹಿಂಸೆಗೆ ತಿರುಗಿದ್ದು, ದೇವರ ನಾಡಿನ ಅಲ್ಲಲ್ಲಿ ಬೀದಿ ಕಾಳಗ ನಡೆದಿದೆ. ಹರತಾಳಕ್ಕೆ ಹೈರಾಣಾದ ಕೇರಳದಲ್ಲಿ ಇಬ್ಬರು ಅಸುನೀಗಿದ್ದಾರೆ. ದಾಂಧಲೆಗೆ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ 99 ಬಸ್‌ಗಳು ಹಾನಿಗೀಡಾಗಿವೆ. 

ಅಲ್ಲಲ್ಲಿ ಪ್ರತಿಭಟನೆ, ಧರಣಿ, ಕಲ್ಲು ತೂರಾಟ ನಡೆಸಲಾಗಿದೆ. ಇದರ ಜತೆಗೆ ತಮಿಳುನಾಡಿನಲ್ಲಿ ಕೂಡ ಪ್ರತಿಭಟನೆ ನಡೆದಿದೆ. ಅಂಗಡಿ ಮುಂಗಟ್ಟುಗಳಿಗೆ, ಸಾರ್ವಜನಿಕ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಹಲವೆಡೆ ಮಾಧ್ಯಮ ಸಿಬಂದಿ ಮೇಲೆ ಕೂಡ ಹಲ್ಲೆ ನಡೆದಿದೆ. ಈ ನಡುವೆ ಬುಧವಾರ ಗಾಯ ಗೊಂಡಿದ್ದ ಶಬರಿಮಲೆ ಕರ್ಮ ಸಮಿತಿಯ ಕಾರ್ಯಕರ್ತ ಚಂದ್ರ ಉಣ್ಣಿತ್ತಾನ್‌ ಅವರು ಗುರು ವಾರ ಅಸುನೀಗಿದ್ದಾರೆ. ಕೇರಳದಾ ದ್ಯಂತ 745 ಮಂದಿಯನ್ನು ಬಂಧಿಸ ಲಾಗಿದ್ದು, 628 ಮಂದಿಯನ್ನು ಮುನ್ನೆಚ್ಚರಿಕಾ ಕ್ರಮವಾಗಿ ವಶಕ್ಕೆ ಪಡೆಯಲಾಗಿದೆ. 559 ಪ್ರಕರಣ ಗಳು ದಾಖಲಾಗಿದೆ.

ಹಿಂಸಾತ್ಮಕ ಹರತಾಳ
ಹರತಾಳದಿಂದಾಗಿ ಇಡೀ ಕೇರಳ ಅಕ್ಷರಶಃ ಸ್ಥಬ್ಧವಾಗಿತ್ತು. ಕೇರಳದ ಬಹುತೇಕ ಕಡೆಗಳಲ್ಲಿ ಪ್ರತಿ ಭಟನೆ, ಮೆರವಣಿಗೆ ನಡೆಸ ಲಾಗಿದೆ. ಅಲ್ಲದೆ ಉದ್ರಿಕ್ತರು ವಾಹನ ಗಳ ಮೇಲೆ ದಾಳಿ, ಹಲ್ಲೆ ನಡೆಸಿ ದ್ದಾರೆ. ತಿರುವನಂತಪುರದ ನಡು ಮಾಂಗಾಡ್‌ ಠಾಣೆ ಮೇಲೆ ಬಾಂಬ್‌ ದಾಳಿ ನಡೆಸಲಾಗಿದೆ. ಬ್ಯಾಂಕ್‌ ಒಂದನ್ನು ಮುಚ್ಚಿಸುವ ನಿಟ್ಟಿನಲ್ಲಿ ನಡೆದ ವಾಗ್ವಾದ ಹಿಂಸಾತ್ಮಕವಾದ ಬಳಿಕ ಈ ಘಟನೆ ನಡೆದಿದೆ. ತ್ರಿಶ್ಶೂರ್‌ನಲ್ಲಿ ಎನ್‌ಡಿಎಫ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾರಾ ಮಾರಿ ನಡೆದಿದ್ದು, ಮೂವರು ಬಿಜೆಪಿ ಕಾರ್ಯಕರ್ತರಿಗೆ ಇರಿಯ ಲಾಗಿದೆ. ಪಾಲಕ್ಕಾಡ್‌ನ‌ಲ್ಲಿ ಬಿಜೆಪಿ ಮತ್ತು ಸಿಪಿಎಂ ಕಾರ್ಯಕರ್ತರ ನಡುವೆ ರಸ್ತೆಯಲ್ಲಿ ಕಾಳಗ ನಡೆದಿದೆ. ಪೊಲೀಸರು ಅವರನ್ನು ಚದುರಿಸಲು ಅಶ್ರುವಾಯು ಸಿಡಿಸಿದ್ದಾರೆ. ಕೆಲವೆಡೆ ಮಾಧ್ಯಮ ಸಿಬಂದಿ ಮೇಲೂ ಹಲ್ಲೆ ನಡೆಸಲಾಗಿದೆ.     

ಕಾಸರಗೋಡು ಜಿಲ್ಲೆಯಲ್ಲಿ ಗಲಭೆ
ಕಾಸರಗೋಡು ಜಿಲ್ಲೆಯ ಉಪ್ಪಳ, ಮಂಜೇಶ್ವರ, ಬಂದ್ಯೋಡು, ಬದಿಯಡ್ಕಗಳಲ್ಲಿ ಭಾರಿ ಪ್ರಮಾಣದ ಗಲಾಟೆ ನಡೆದಿದೆ. ಹಲವರು ಗಾಯಗೊಂಡಿದ್ದಾರೆ. ಮೀಪುಗುರಿ ನಿವಾಸಿ ಬಿಜೆಪಿ ನಾಯಕ ಗಣೇಶ್‌ ಎಂಬುವರಿಗೆ ಅಪರಿಚಿತರು ಚೂರಿಯಿಂದ ಇರಿದಿದ್ದಾರೆ. ಹಲವು ಭಾಗಗಳಲ್ಲಿ ಸಿಪಿಎಂ, ಸಿಪಿಐ ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ. 

ವಿಶೇಷ ಸೌಲಭ್ಯಕ್ಕೆ ಸಮಿತಿ ಆಕ್ಷೇಪ
ದೇಗುಲ ಪ್ರವೇಶಕ್ಕೆ ಯತ್ನಿಸಿದ್ದ ಮಹಿಳೆಯರಿಗೆ ವಿಶೇಷ ರಕ್ಷಣಾ ವ್ಯವಸ್ಥೆ ಕಲ್ಪಿಸಿಕೊಟ್ಟಿರುವುದಕ್ಕೆ ಹೈಕೋರ್ಟ್‌ ನೇಮಕ ಮಾಡಿದ್ದ ಮೂವರು ಸದಸ್ಯರ ಸಮಿತಿ ಆಕ್ಷೇಪ ವ್ಯಕ್ತಪಡಿಸಿದೆ. ಇದರಿಂದಾಗಿ ಭಕ್ತರ ಹಕ್ಕುಗಳಿಗೆ ಭಂಗ ತಂದಂತಾಗಿದೆ ಎಂದು ಹೇಳಿದೆ. ಗುರುವಾರವಷ್ಟೇ ಕೇರಳ ಹೈಕೋರ್ಟ್‌ಗೆ ವರದಿ ಸಲ್ಲಿಸಿದೆ. 

ಕರ್ನಾಟಕ ಬಸ್‌ಗಳ ಮೇಲೆ ಕಲ್ಲು
ಕೇರಳದ ವಿವಿಧೆಡೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವಿವಿಧ ಡಿಪೋಗಳಿಗೆ ಸೇರಿದ ಬಸ್‌ಗಳ ಕಲ್ಲು ತೂರಾಟ ನಡೆಸಲಾಗಿದೆ. ಹೀಗಾಗಿ, ರಾಜ್ಯ ಸಾರಿಗೆ ಸಂಸ್ಥೆ ತಾತ್ಕಾಲಿಕವಾಗಿ ಸಾರಿಗೆ ಸಂಸ್ಥೆ ಕೇರಳಕ್ಕೆ ತೆರಳುವ ಬಸ್‌ ಸೇವೆ ರದ್ದು ಮಾಡಿ, ರಾತ್ರಿ ವೇಳೆಗೆ ಮತ್ತೆ ಶುರು ಮಾಡಿದೆ. 

745 ಬಂಧಿತರ ಸಂಖ್ಯೆ
628 ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ
99 ಬಸ್‌ಗಳಿಗೆ ಹಾನಿ
31 ಗಾಯಗೊಂಡ ಪೊಲೀಸರು
03 ಬಿಜೆಪಿ ಕಾರ್ಯಕರ್ತರಿಗೆ ಇರಿತ

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.