ಶಬರಿಮಲೆಗೆ ಪ್ರತೀ ದಿನ 90 ಸಾವಿರ ಭಕ್ತರ ಮಿತಿ; ಕೇರಳ ಸಿಎಂ ಪಿಣರಾಯಿ ನೇತೃತ್ವದ ಸಭೆ ತೀರ್ಮಾನ
Team Udayavani, Dec 13, 2022, 7:35 AM IST
ತಿರುವನಂತಪುರ/ಪತ್ತನಂತಿಟ್ಟ: ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಪ್ರತೀ ದಿನ 90 ಸಾವಿರ ಭಕ್ತರಿಗೆ ಮಾತ್ರ ಪ್ರವೇಶ ನೀಡಲು ಕೇರಳ ಸರಕಾರ ನಿರ್ಧರಿಸಿದೆ.
ಈ ಬಗ್ಗೆ ತಿರುವನಂತಪುರದಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಆನ್ಲೈನ್ನಲ್ಲಿ 1,07,260 ಮಂದಿ ದೇಗುಲಕ್ಕೆ ಭೇಟಿ ನೀಡಲು ನೋಂದಣಿ ಮಾಡಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಹೆಚ್ಚುವರಿ ಭದ್ರತೆ ಸೇರಿದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಪರಾಮರ್ಶೆ ನಡೆಸಲಾಯಿತು.
ಇದಲ್ಲದೆ ಈಗ ಇರುವ ಮುಂಜಾನೆ 3ರಿಂದ ರಾತ್ರಿ 11ರ ವರೆಗಿನ ದೇವರ ದರ್ಶನದ ಸಮಯವನ್ನು ರಾತ್ರಿ 12ರ ವರೆಗೆ ವಿಸ್ತರಿಸಲು ತೀರ್ಮಾನಿಸಲಾಗಿದೆ.
ನಿಳಕ್ಕಲ್ನಲ್ಲಿ ಇನ್ನೂ ಹೆಚ್ಚು ವಾಹನಗಳಿಗೆ ನಿಲುಗಡೆ ಕಲ್ಪಿಸಲು ಅವಕಾಶ ಕಲ್ಪಿಸುವ ನಿಟ್ಟಿನಲ್ಲಿಯೂ ಚರ್ಚೆ ನಡೆಸಲಾಗಿದೆ.
ರವಿವಾರ ಕೇರಳ ಹೈಕೋರ್ಟ್ ನಡೆಸಿದ್ದ ವಿಚಾರಣೆ ವೇಳೆ ವಾಹನಗಳ ಪಾರ್ಕಿಂಗ್ ಮತ್ತು ಜನರನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!