ಶಬರಿಮಲೆ: 20 ದಿನಗಳಲ್ಲಿ 69.39 ಕೋಟಿ ರೂ. ಆದಾಯ
Team Udayavani, Dec 8, 2019, 9:36 PM IST
ಶಬರಿಮಲೆ: ಇಲ್ಲಿನ ಅಯ್ಯಪ್ಪ ಸ್ವಾಮಿ ದೇವಾಲಯವು ಯಾತ್ರೆ ಆರಂಭವಾದ ಕೇವಲ 20 ದಿನಗಳಲ್ಲಿ ಬರೋಬ್ಬರಿ 69.39 ಕೋಟಿ ರೂ. ಆದಾಯ ಗಳಿಸಿದೆ.
ಕಳೆದ ಸಾಲಿನ ಈ ಅವಧಿಯಲ್ಲಿ 41.84 ಕೋಟಿ ರೂ. ಆದಾಯ ಸಂಗ್ರಹವಾಗಿದ್ದು, ಈ ಬಾರಿ ಆದಾಯದಲ್ಲಿ 27.55 ಕೋಟಿ ರೂ. ಹೆಚ್ಚಳವಾಗಿದೆ ಎಂದು ತಿರುವಾಂಕೂರು ದೇವಸ್ವಂ ಮಂಡಳಿ ಸದಸ್ಯ ವಿಜಯ್ಕುಮಾರ್ ಹೇಳಿದ್ದಾರೆ.
ಈ ಪೈಕಿ ಅರವಣ ಪ್ರಸಾದ ಮಾರಾಟದಿಂದ 28.26 ಕೋಟಿ ರೂ., ಅಪ್ಪಂ ಪ್ರಸಾದ ಮಾರಾಟದಿಂದ 4.2 ಕೋಟಿ ರೂ. ಆದಾಯ ಬಂದಿದೆ. ಡಿ.6ವರೆಗೆ ದೇಗುಲದ ಹುಂಡಿಯಲ್ಲಿ 23.58 ಕೋಟಿ ರೂ. ಸಂಗ್ರಹವಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಹುಂಡಿಯಲ್ಲಿ 16.21 ಕೋಟಿ ಸಂಗ್ರಹವಾಗಿತ್ತು. ಹಾಗೇ ಭಕ್ತರಿಗೆ ಕಲ್ಪಿಸಿರುವ ವಸತಿ ಸೌಲಭ್ಯದಿಂದ 20 ದಿನಗಳಲ್ಲಿ 1.4 ಕೋಟಿ ರೂ. ಆದಾಯ ಬಂದಿದೆ ಎಂದಿದ್ದಾರೆ.
ಹೃದಯಾಘಾತಕ್ಕೆ 8 ಬಲಿ:
ಈ ವರ್ಷ ಯಾತ್ರೆ ವೇಳೆ ಹೃದಯಾಘಾತದಿಂದ 8 ಭಕ್ತರು ಮೃತಪಟ್ಟಿದ್ದಾರೆ. ಒಟ್ಟು 75 ಹೃದಯಾಘಾತ ಪ್ರಕರಣ ನಡೆದಿದ್ದು, ಈ ಪೈಕಿ 67 ಭಕ್ತರಿಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ನೀಡಿ ರಕ್ಷಿಸಲಾಗಿದೆ ಎಂದು ಸಚಿವೆ ಕೆ.ಕೆ.ಶೈಲಜಾ ಮಾಹಿತಿ ನೀಡಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
ಕೋರ್ಟ್ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ
Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ
ನಟ, ಕಾಂಗ್ರೆಸ್ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ
MUST WATCH
ಹೊಸ ಸೇರ್ಪಡೆ
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ