ಮಕರ ವಿಳಕ್ಕುವಿಗಾಗಿ ತೆರೆದ ಶಬರಿಮಲೆ ದೇಗುಲ
Sabarimala temple to open on December 30 for Makaravilakku
Team Udayavani, Dec 31, 2020, 2:53 AM IST
ಶಬರಿಮಲೆ/ತಿರುವನಂತಪುರ: ಶಬರಿಮಲೆ ಅಯ್ಯಪ್ಪ ದೇಗುಲ ಬುಧವಾರ ಮತ್ತೆ ತೆರೆದುಕೊಂಡಿದೆ. ಜ.14ರಂದು ಮಕರ ಸಂಕ್ರಾಂತಿಯ ದಿನದಂದು ಮಕರ ವಿಳಕ್ಕು ಗೋಚರಿಸುವ ಹಿನ್ನೆಲೆಯಲ್ಲಿ ಎರಡನೇ ಬಾರಿಗೆ ದೇಗುಲ ತೆರೆಯಲಾಗಿದೆ. ಜ.20ರಂದು ಮತ್ತೆ ಪವಿತ್ರ ಕ್ಷೇತ್ರವನ್ನು ಮುಚ್ಚಲಾಗುತ್ತದೆ.
ಮುಖ್ಯ ಅರ್ಚಕ ವಿ.ಕೆ.ಜಯರಾಜ ಪೊಟ್ಟಿ ಜತೆ ಇದ್ದ ಮೂವರಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅವರು ಕ್ವಾರಂಟೈನ್ನಲ್ಲಿ ಇದ್ದಾರೆ. ಇದರಿಂದಾಗಿ ದೈನಂದಿನ ಧಾರ್ಮಿಕ ಕಾರ್ಯಕ್ರಮಗಳಿಗೆ ತೊಂದರೆಯಾಗುವುದಿಲ್ಲ. ಒಂದು ವೇಳೆ ಅವರಿಗೆ ಮುಂದಿನ ಐದು ದಿನಗಳ ಅವಧಿಯಲ್ಲಿ ಮತ್ತೆ ಸೋಂಕು ದೃಢಪಟ್ಟರೆ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸುವ ಬಗ್ಗೆ ನಿರ್ಧರಿಸಲಾಗುತ್ತದೆ ಎಂದಿದೆ ತಿರುವಾಂಕೂರು ದೇವಸ್ವಂ ಮಂಡಳಿ.
ಪ್ರಸಕ್ತ ಸಾಲಿನಲ್ಲಿ ಕೊರೊನಾ ಸೋಂಕು ಪರಿಸ್ಥಿತಿಯ ಹಿನ್ನೆಲೆಯಲ್ಲಿ ಪ್ರತಿ ದಿನ ಐದು ಸಾವಿರ ಭಕ್ತರ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ. ಜತೆಗೆ ಕೊರೊನಾ ನೆಗೆಟಿವ್ ಪ್ರಮಾಣಪತ್ರವನ್ನು ಕಡ್ಡಾಯವಾಗಿ ಹೊಂದಿರುವ ಬಗ್ಗೆ ಆದೇಶ ನೀಡಲಾಗಿದೆ. ಡಿ.26ರಂದು ಮೊದಲ ಹಂತದ ದೇಗುಲಕ್ಕೆ ಭೇಟಿ ನೀಡುವ ಕಾರ್ಯಕ್ರಮ ಮುಕ್ತಾ ಯವಾಗಿತ್ತು. ಇದೇ ವೇಳೆ ಕೇರಳದ ಎಲ್ಲ ದೇಗುಲಗಳಲ್ಲಿ ಸಾಂಪ್ರದಾ ಯಿಕ ಉತ್ಸವಗಳನ್ನು ನಡೆಸಲು ಸರಕಾರ ಅನುಮತಿ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು