ಪ್ರತಿಭಟನೆ; ಶಬರಿಮಲೆ ದೇಗುಲ ಪ್ರವೇಶಿಸುವ ಮಹಿಳೆಯರ ಯತ್ನ ವಿಫಲ
Team Udayavani, Oct 17, 2018, 6:49 PM IST
ತಿರುವನಂತಪುರಂ:ಭಾರೀ ಪ್ರತಿಭಟನೆ, ಆತ್ಮಹತ್ಯೆ ಬೆದರಿಕೆ, ಕಲ್ಲುತೂರಾಟದಂತಹ ಘಟನೆ, ಬಿಗಿ ಪೊಲೀಸ್ ಸರ್ಪಗಾವಲಿನ ನಡುವೆಯೇ ಬುಧವಾರ ಸಂಜೆ ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದ ಬಾಗಿಲು ತೆರೆಯಲಾಯಿತು. ಆದರೆ ಪ್ರತಿವರ್ಷದಂತೆ ಈ ಬಾರಿಯೂ ಇರುಮುಡಿ ವೃತಧಾರಿ ಪುರುಷರು 18 ಮೆಟ್ಟಿಲು ಹತ್ತಿ ದೇವರ ದರ್ಶನ ಪಡೆದಿದ್ದು, ಸುಪ್ರೀಂಕೋರ್ಟ್ ತೀರ್ಪು ನೀಡಿದ್ದರೂ ಯಾವುದೇ ಮಹಿಳಾ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಕೊಡಲಿಲ್ಲ.
ಎಲ್ಲಾ ವಯೋಮಾನದ ಮಹಿಳೆಯರಿಗೆ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿತ್ತು. ಆದರೆ ಇದಕ್ಕೆ ಕೇರಳ ಸೇರಿದಂತೆ ವಿವಿಧೆಡೆ ಹಿಂದೂಪರ ಸಂಘಟನೆಗಳು, ಬುಡಕಟ್ಟು ಸಮುದಾಯ ತೀವ್ರ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದವು.
ಇಂದು ಸುಪ್ರೀಂಕೋರ್ಟ್ ತೀರ್ಪು ಪ್ರಕಟವಾದ ಬಳಿಕ ಮೊದಲ ಬಾರಿಗೆ ಶಬರಿಮಲೆ ದೇಗುಲದ ಬಾಗಿಲು ತೆರೆಯುವ ಹಿನ್ನೆಲೆಯಲ್ಲಿ ಮಹಿಳಾ ಭಕ್ತರು ಪ್ರವೇಶ ಪಡೆಯಲು ಸಜ್ಜಾಗಿದ್ದರು. ಆದರೆ ನೀಲಕ್ಕಲ್, ಪಂಪ ಪ್ರದೇಶದಲ್ಲಿಯೇ ಪ್ರತಿಭಟನಾಕಾರರು ಮಹಿಳಾ ಭಕ್ತರ ವಾಹನಗಳ ಮೇಲೆ ಕಲ್ಲುತೂರಾಟ ನಡೆಸಿ, ತಡೆದು ವಾಪಸ್ ಕಳುಹಿಸಿದ್ದರು.
ಪರಿಸ್ಥಿತಿಯ ನಿಯಂತ್ರಿಸುವ ನಿಟ್ಟಿನಲ್ಲಿ ಶಬರಿಮಲೆ, ಪಂಪಾ, ಸನ್ನಿಧಾನಂ ಹಾಗೂ ನೀಲಕ್ಕಲ್ ನಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿರುವುದಾಗಿ ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ