ಪ್ರಧಾನಿ ಪರಿಹಾರ ನಿಧಿಗೆ ವೇತ ನ ಕೊಟ್ಟ ಸಚಿನ್
Team Udayavani, Apr 2, 2018, 7:17 AM IST
ಮುಂಬಯಿ: ಇತ್ತೀಚೆಗಷ್ಟೇ ರಾಜ್ಯಸಭಾ ಸದಸ್ಯ ಸ್ಥಾನದಿಂದ ನಿವೃತ್ತರಾದ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರು ರಾಜ್ಯ ಸಭಾ ಸದಸ್ಯರಾಗಿ ತಾವು ಪಡೆದ ಸಂಪೂರ್ಣ ವೇತನ ಹಾಗೂ ಭತ್ಯೆಗಳ ಮೊತ್ತವನ್ನು ಪ್ರಧಾನ ಮಂತ್ರಿ ಪರಿಹಾರ ನಿಧಿಗೆ ದೇಣಿಗೆಯಾಗಿ ನೀಡಿದ್ದಾರೆ.
6 ವರ್ಷಗಳಲ್ಲಿ ತೆಂಡೂ ಲ್ಕರ್ 90 ಲಕ್ಷ ರೂ.ಗಳನ್ನು ವೇತನ ಹಾಗೂ ಇತರೆ ಭತ್ಯೆಯ ರೂಪದಲ್ಲಿ ಪಡೆದಿದ್ದಾರೆ. ಈ ಮೊತ್ತವನ್ನು ಅವರು ಪರಿಹಾರ ನಿಧಿಗೆ ಅರ್ಪಿಸಿದ್ದು, ತೆಂಡೂಲ್ಕರ್ರ ನಿರ್ಧಾರಕ್ಕೆ ಪಿಎಂಒ ಮೆಚ್ಚುಗೆ ವ್ಯಕ್ತಪಡಿಸಿದೆ.
ಕಲಾಪಗಳಿಗೆ ಗೈರಾಗುತ್ತಿದ್ದುದರ ಕುರಿತು ತೆಂಡೂಲ್ಕರ್ ವಿರುದ್ಧ ಟೀಕೆಗಳು ಕೇಳಿಬಂದಿದ್ದವು. ಆದರೆ, ಸಚಿನ್ ತಮ್ಮ “ಸಂಸದರ ಸ್ಥಳೀಯಾಭಿವೃದ್ಧಿ ನಿಧಿ’ಯನ್ನು ಸದ್ಬಳಕೆ ಮಾಡಿಕೊಂಡಿದ್ದರು. ಅಷ್ಟೇ ಅಲ್ಲದೆ, ಸಂಸದರ ಆದರ್ಶ ಗ್ರಾಮ ಯೋಜನೆಯಡಿ ಅವರು ಆಂಧ್ರಪ್ರದೇಶದ ಪುಟ್ಟಮ್ ರಾಜು ಮತ್ತು ಮಹಾ ರಾಷ್ಟ್ರದ ದೊಂಜಾ ಗ್ರಾಮಗಳನ್ನು ದತ್ತು ಪಡೆದು, ಅವುಗಳನ್ನು ಅಭಿವೃದ್ಧಿಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!