ಲಾಕಪ್ಡೆತ್ : ವಜಾಗೊಂಡಿದ್ದ ಐಪಿಎಸ್ ಅಧಿಕಾರಿ ಸಂಜೀವ್ ಭಟ್ಗೆ ಜೀವಾವಧಿ
Team Udayavani, Jun 20, 2019, 3:06 PM IST
ಜಾಮ್ನಗರ್: 30 ವರ್ಷ ಹಿಂದಿನ ಕಸ್ಟಡಿ ಸಾವಿನ ಕೇಸ್ಗೆ ಸಂಬಂಧಿಸಿ ಜಾಮ್ನಗರ್ ಕೋರ್ಟ್ ಗುರುವಾರ ತೀರ್ಪು ನೀಡಿದ್ದು, ವಜಾಗೊಂಡಿದ್ದ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಇನ್ನೋರ್ವ ಪೊಲೀಸ ಅಧಿಕಾರಿ ಪ್ರವೀಣ್ ಸಿಂಗ್ ಝಾಲಾ ಅವರಿಗೂ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.
ಭಟ್ ಅವರು ಸಲ್ಲಿಸಿದ್ದ ಮೇಲ್ಮನವಿಯನ್ನು ಕಳೆದ ವಾರ ಸುಪ್ರೀಂ ಕೋರ್ಟ್ ತಳ್ಳಿ ಹಾಕಿತ್ತು. 11 ಹೆಚ್ಚುವರಿ ಸಾಕ್ಷಿಗಳನ್ನು ಪರಿಗಣಿಸಬೇಕು ಎಂದು ಭಟ್ ಮನವಿ ಮಾಡಿದ್ದರು.
ಭಟ್ ಅವರ ಮೇಲ್ಮನವಿಯನ್ನು ಗುಜರಾತ್ ಪೊಲೀಸರು ಬಲವಾಗಿ ವಿರೋಧಿಸಿದ್ದರು ಮತ್ತು ಇದು ಪ್ರಕರಣದ ತೀರ್ಪು ವಿಳಂಬಗೊಳಿಸಲು ಮಾಡಿರುವ ತಂತ್ರ ಎಂದಿದ್ದರು.
30 ವರ್ಷದ ಹಿಂದೆ ಜಾಮ್ನಗರ್ನಲ್ಲಿ ಎಸಿಪಿ ಆಗಿದ್ದ ಸಂಜೀವ್ ಭಟ್ , ಕೋಮುಗಲಭೆ ನಡೆದಾಗ ನೂರಕ್ಕು ಹೆಚ್ಚು ಜನರನ್ನು ಬಂಧಿಸಿದ್ದರು. ಆ ಪೈಕಿ ಓರ್ವ ಬಿಡುಗಡೆಯಾಗುವ ವೇಳೆಯಲ್ಲಿ ಗಂಭೀರ ಸ್ಥಿತಿಯಲ್ಲಿ ಕಂಡು ಬಂದು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದ.
2011 ರಲ್ಲಿ ಸಂಜೀವ್ ಭಟ್ ಅವರಿಗೆ ಕಡ್ಡಾಯ ರಜೆ ನೀಡಲಾಗಿತ್ತು, 2015 ರಲ್ಲಿ ಗುಜರಾತ್ ಸರ್ಕಾರ ಅಮಾನತು ಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್ನದ್ದು: ಮೀನಾಕ್ಷಿ ಲೇಖಿ
Lok Sabha Elections; ಕಾಂಗ್ರೆಸ್ಗೆ ಉತ್ತಮ ಅವಕಾಶ: ದಿನೇಶ್ ಗುಂಡೂರಾವ್
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್ಪಾಲ್
Lok Sabha Election ಫಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.