“ಸದೈವ್ ಅಟಲ್’ ಸ್ಮಾರಕ ಉದ್ಘಾಟನೆ
Team Udayavani, Dec 26, 2018, 10:05 AM IST
ಹೊಸದಿಲ್ಲಿ: ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ 94ನೇ ಜನ್ಮದಿನದಂದೇ ರಾಷ್ಟ್ರೀಯ ಸ್ಮತಿ ಸ್ಥಳದಲ್ಲಿ ಮಂಗಳವಾರ “ಸದೈವ್ ಅಟಲ್’ ಸ್ಮಾರಕವನ್ನು ಉದ್ಘಾಟಿಸಲಾಯಿತು. ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪರಾಷ್ಟ್ರಪತಿ ವೆಂಕಯ್ಯನಾಯ್ಡು, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಆಪ್ತ ಸ್ನೇಹಿತ ಎಲ್.ಕೆ. ಆಡ್ವಾಣಿ ಸೇರಿ ಅನೇಕ ಗಣ್ಯರು ಪಾಲ್ಗೊಂಡು, ಪುಷ್ಟನಮನ ಸಲ್ಲಿಸಿದರು. ಮಾಜಿ ಪ್ರಧಾನಿ ಡಾ| ಮನಮೋಹನ್ ಸಿಂಗ್, ವಾಜಪೇಯಿ ಅವರ ಕುಟುಂಬ ಸದಸ್ಯರೂ ಪಾಲ್ಗೊಂಡಿದ್ದರು. ಸ್ಮಾರಕದಲ್ಲಿ ಖ್ಯಾತ ಗಾಯಕ ಪಂಕಜ್ ಉದಾಸ್ ಅವರು ಭಕ್ತಿಗೀತೆಗಳನ್ನು ಹಾಡುವ ಮೂಲಕ ಅಟಲ್ಗೆ ಗೌರವ ಸಲ್ಲಿಸಿದರು.
25 ಅಡಿ ಎತ್ತರದ ಅಟಲ್ ಪ್ರತಿಮೆ: ಸಿಎಂ ಯೋಗಿ
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 25 ಅಡಿ ಎತ್ತರದ ಪ್ರತಿಮೆಯನ್ನು ಲಕ್ನೋದ ಲೋಕ ಭವನದ ಆವರಣದಲ್ಲಿ ಸ್ಥಾಪಿಸಲಾಗುವುದು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘೋಷಿಸಿದ್ದಾರೆ. ಅಟಲ್ರ 94ನೇ ಜನ್ಮದಿನದಂದೇ ಅವರು ಈ ಘೋಷಣೆ ಮಾಡಿದ್ದಾರೆ. ರಾಜ್ಯದ ಜನರ ಒತ್ತಾಸೆಯಂತೆ ಅಟಲ್ ಜೀ ಅವರಿಗೆ ವಿಶೇಷ ಗೌರವ ಸಲ್ಲಿಸುವ ಉದ್ದೇಶದಿಂದ ಈ ಪ್ರತಿಮೆ ನಿರ್ಮಿಸಲಾಗುತ್ತಿದೆ ಎಂದಿದ್ದಾರೆ ಆದಿತ್ಯನಾಥ್. ಇದಾದ ಬೆನ್ನಲ್ಲೇ ಬಿಹಾರ ಸಿಎಂ ನಿತೀಶ್ ಕುಮಾರ್ ಅವರೂ, ಬಿಹಾರದಲ್ಲಿ ಅಟಲ್ ಪ್ರತಿಮೆ ನಿರ್ಮಿಸ ಲಾಗುವುದು ಎಂದಿದ್ದಾರೆ.
ಸ್ಮಾರಕದ ಬಗ್ಗೆ
– 1.5 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗಿರುವ ಸ್ಮಾರಕ
– ಸ್ಮಾರಕದ 9 ಗೋಡೆಗಳಲ್ಲಿ ಅಟಲ್ ಅವರು ಬರೆದಿರುವ ಕವನಗಳನ್ನು ಕೆತ್ತಲಾಗಿದೆ
– 10.51 ಕೋಟಿ ರೂ. ವೆಚ್ಚದಲ್ಲಿ ಕೇಂದ್ರ ಲೋಕೋಪಯೋಗಿ ಇಲಾಖೆಯಿಂದ ನಿರ್ಮಾಣ
– ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ನೇತೃತ್ವದ ಅಟಲ್ ಸ್ಮತಿ ನ್ಯಾಸ್ ಸೊಸೈಟಿಯಿಂದ ಹಣಕಾಸು ನೆರವು ಮತ್ತು ನಿರ್ವಹಣೆ
– ಕರ್ನಾಟಕ ರಾಜ್ಯಪಾಲ ವಜುಭಾಯಿ ವಾಲಾ, ಗುಜರಾತ್ ರಾಜ್ಯಪಾಲ ಒ.ಪಿ.ಕೊಹ್ಲಿ, ಬಿಹಾರ ರಾಜ್ಯಪಾಲ ಲಾಲ್ಜೀ ಟಂಡನ್, ಬಿಜೆಪಿ ನಾಯಕರಾದ ವಿಜಯಕುಮಾರ್ ಮಲ್ಹೋತ್ರಾ, ರಾಮ್ ಲಾಲ್ ಮತ್ತಿತರರು ಈ ಸೊಸೈಟಿಯ ಸ್ಥಾಪಕ ಸದಸ್ಯರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್