Sadhguru: ಸದ್ಗುರು ಜಗ್ಗಿ ವಾಸುದೇವ್ ಆರೋಗ್ಯದಲ್ಲಿ ಚೇತರಿಕೆ… ಆಸ್ಪತ್ರೆಯಿಂದ ಡಿಸ್ಚಾರ್ಜ್
Team Udayavani, Mar 27, 2024, 5:15 PM IST
ನವದೆಹಲಿ: ಆಧ್ಯಾತ್ಮಿಕ ನಾಯಕ ಸದ್ಗುರು ಜಗ್ಗಿ ವಾಸುದೇವ್ ಅವರು ತುರ್ತು ಮಿದುಳಿನ ಶಸ್ತ್ರಚಿಕಿತ್ಸೆಗೆ ಒಳಗಾಗಿ ದೆಹಲಿಯ ಇಂದ್ರಪ್ರಸ್ಥ ಅಪೋಲೋ ಆಸ್ಪತ್ರೆಯಿಂದ ಬುಧವಾರ ಡಿಸ್ಚಾರ್ಜ್ ಆಗಿದ್ದಾರೆ.
ಕಳೆದ ಕೆಲ ದಿನಗಳ ಹಿಂದೆ ತೀವ್ರ ತಲೆನೋವಿನಿಂದ ಬಳಲುತ್ತಿದ್ದ ಸದ್ಗುರು ಅವರು ಮಾರ್ಚ್ 17 ರಂದು ಆಸ್ಪತ್ರೆಗೆ ದಾಖಲಾಗಿ ತುರ್ತು ಮೆದುಳಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.
ಇದೀಗ ಆರೋಗ್ಯದಲ್ಲಿ ಚೇತರಿಯಾಗಿದ್ದು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಈ ಕುರಿತು ಮಾತನಾಡಿದ ಅಪೋಲೋ ಆಸ್ಪತ್ರೆಯ ಜಂಟಿ ವ್ಯವಸ್ಥಾಪಕ ನಿರ್ದೇಶಕಿ ಡಾ.ಸಂಗೀತಾ ರೆಡ್ಡಿ, ಸದ್ಗುರು ಜಗ್ಗಿ ವಾಸುದೇವ್ ಅವರು ಶಸ್ತ್ರ ಚಿಕಿತ್ಸೆಗೆ ಒಳಗಿದ್ದು ಇದೀಗ ಚೇತರಿಸಿಕೊಂಡಿದ್ದಾರೆ ಅಲ್ಲದೆ ವೈದ್ಯರು ಕೂಡ ಸದ್ಗುರು ಅವ್ರ ಆರೋಗ್ಯದ ಚೇತರಿಕೆ ಬಗ್ಗೆ ಹೇಳಿಕೊಂಡಿದ್ದಾರೆ. ಜೊತೆಗೆ ಸದ್ಗುರು ಅವರು ಚೇತರಿಸಿಕೊಳ್ಳುತ್ತಿರುವಾಗಲೂ ಹಿಂದಿನ ಅದೇ ಮನೋಭಾವವನ್ನು ಉಳಿಸಿಕೊಂಡಿದ್ದಾರೆ. ಜಾಗತಿಕ ಒಳಿತಿಗಾಗಿ ಅವರ ಬದ್ಧತೆ, ಅವರ ತೀಕ್ಷ್ಣ ಮನಸ್ಸು ಮತ್ತು ಅವರ ಹಾಸ್ಯಪ್ರಜ್ಞೆ ಎಲ್ಲವೂ ಅಖಂಡವಾಗಿವೆ ಎಂದು ಹೇಳಿದ್ದಾರೆ.
VIDEO | Isha Foundation founder Sadhguru Jaggi Vasudev (@SadhguruJV)discharged from Delhi’s Apollo Hospital. pic.twitter.com/bL1xEkhnT4
— Press Trust of India (@PTI_News) March 27, 2024