ಕ್ಷಮೆಯಾಚಿಸಿರುವ ಸಾಧ್ವಿ ಪ್ರಜ್ಞಾ ಸಿಂಗ್ ಆತ್ಮಾವಲೋಕನ, ಕಠಿನ ಮೌನ ವ್ರತ
Team Udayavani, May 20, 2019, 5:42 PM IST
ಭೋಪಾಲ್ : ತನ್ನ ಈಚಿನ ಕೆಲವು ವಿವಾದಾತ್ಮಕ ಹೇಳಿಕೆಗಳಿಗಾಗಿ ಕ್ಷಮೆಯಾಚಿಸಿರುವ ಬಿಜೆಪಿಯ ಭೋಪಾಲ್ ಅಭ್ಯರ್ಥಿ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರು “ಆತ್ಮಾವಲೋಕನಕ್ಕಾಗಿ ನಾನು 63 ತಾಸುಗಳ ಮೌನ ವ್ರತ ಆಚರಿಸುತ್ತಿದ್ದೇನೆ’ ಎಂದು ಹೇಳಿದ್ದಾರೆ.
2008ರ ಮಾಲೇಗಾಂವ್ ಬ್ಲಾಸ್ಟ್ ಆರೋಪಿಗಳಲ್ಲಿ ಒಬ್ಬರಾಗಿರುವ ಸಾಧ್ವಿ ಪ್ರಜ್ಞಾ ಅವರು “ನಾನು ನೀಡಿರುವ ಕೆಲವು ಹೇಳಿಕೆಗಳ ಬಗ್ಗೆ ನನಗೆ ಖೇದವಿದೆ; ಅದಕ್ಕಾಗಿ ಆತ್ಮಾವಲೋಕನ ಮಾಡುತ್ತಿದ್ದೇನೆ’ ಎಂದು ಟ್ವಿಟರ್ನಲ್ಲಿ ಬರೆದುಕೊಂಡಿದ್ದಾರೆ.
‘ಚುನಾವಣೆ ಪ್ರಕ್ರಿಯೆಗಳು ಮುಗಿದಿದ್ದು ಈಗ ಆತ್ಮಾವಲೋಕನ ಮಾಡಿಕೊಳ್ಳುವ ಕಾಲ ಒದಗಿದೆ. ದೇಶ ಪ್ರೇಮಿಗಳಿಗೆ ನನ್ನ ಹೇಳಿಕೆಯಿಂದ ನೋವಾಗಿದ್ದರೆ ನಾನು ಕ್ಷಮೆ ಕೋರುತ್ತೇನೆ; ಅದಕ್ಕಾಗಿ ನಾನು ಅತ್ಯಂತ ಕಠಿನ ಮೌನ ವ್ರತವನ್ನು ಆಚರಿಸುತ್ತಿದ್ದೇನೆ’ ಎಂದು ಸಾಧ್ವಿ ಹೇಳಿದ್ದಾರೆ.
‘ಮಹಾತ್ಮಾ ಗಾಂಧಿಯವರ ಹಂತಕ ನಾಥೂರಾಮ್ ಗೋಡ್ಸೆ ದೇಶಪ್ರೇಮಿ’ ಎಂದು ಸಾಧ್ವಿ ಹೇಳಿದ್ದ ಮಾತು ವ್ಯಾಪಕ ಟೀಕೆ, ಖಂಡನೆಗೆ ಗುರಿಯಾಗಿತ್ತು. ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ತಾನು ‘ಸಾಧ್ವಿ ಅವರನ್ನು ಕ್ಷಮಿಸಲಾರೆ’ ಎಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!