ಗೋವಾದ ಕಲಾವಿದ ಸಾಗರ್ ಸುರೇಶ್ ನಾಯ್ಕ್ ಚಿತ್ರಕಲೆಯನ್ನು ಹೊಗಳಿದ ಪ್ರಧಾನಿ ಮೋದಿ
Team Udayavani, Dec 28, 2021, 12:46 PM IST
ಪಣಜಿ: ಗೋವಾದ ಪೊಂಡಾ ಅಡಪೈ ನಿವಾಸಿ ಚಿತ್ರ ಕಲಾವಿದ ಸಾಗರ್ ಸುರೇಶ್ ನಾಯ್ಕ್ ರವರು ಕಣ್ಮರೆಯಾಗುತ್ತಿರುವ ಅಪರೂಪದ ಚಿತ್ರ ಕಲೆ ಪ್ರಕಾರವನ್ನು ಜೀವಂತವಾಗಿಡಲು ಪ್ರಯತ್ನಿಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಮನ್ಕಿ ಬಾತ್ ಕಾರ್ಯಕ್ರಮದಲ್ಲಿ ಪ್ರಸ್ತಾಪಿಸಿರುವುದು ರಾಜ್ಯಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿದೆ.
ಗೋವಾ ಕಾಲೇಜ್ ಆಪ್ ಆಟ್ರ್ಸನಿಂದ ಬ್ಯಾಚುಲರ್ ಆಫ್ ಪೈನ್ ಆರ್ಟ್ಸ್ ಪದವಿ ಪಡೆದು, ಹೈದರಾಬಾದ್ನಲ್ಲಿ ಉನ್ನತ ಶಿಕ್ಷಣ ಪಡೆದು ಗೋವಾಕ್ಕೆ ಮರಳಿ ಗೋವಾದಲ್ಲಿ ಚಿತ್ರಕಲೆ ಮತ್ತು ಛಾಯಾಗ್ರಹಣ ಆರಂಭಿಸಿ ಇದುವರೆಗೂ ಇವರು 5 ಗೋವಾ ರಾಜ್ಯ ಮಟ್ಟದ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.
ಇವರ ಚಿತ್ರಗಳು ಹಳ್ಳಿಗಳ ಸೌಂದರ್ಯ ವಿವರಿಸುತ್ತವೆ. ಇವರು ಬಿಡಿಸಿದ ವರ್ಣ ಚಿತ್ರಗಳು ಮತ್ತು ಗೋವಾ ಸ್ವಾತಂತ್ರ್ಯ ಹೋರಾಟದಲ್ಲಿ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರ ಚಿತ್ರಗಳು ಹೆಚ್ಚಿನ ಪ್ರಸಿದ್ಧಿ ಪಡೆದಿವೆ. ಕಣ್ಮರೆಯಾಗುತ್ತಿರುವ ಇಂತಹ ಕಲಾ ಪ್ರಕಾರವನ್ನು ಜೀವಂತವಾಗಿರಿಸಲು ಸಾಗರ್ ರವರು ಪ್ರಯತ್ನಿಸುತ್ತಿದ್ದಾರೆ ಎಂದು ಪ್ರಧಾನಿ ಮನ್ಕಿ ಬಾತ್ನಲ್ಲಿ ಪ್ರಸ್ತಾಪಿಸಿರುವುದು ರಾಜ್ಯಾದ್ಯಂತ ಸಾಗರ್ ರವರ ಕಲೆಯ ಬಗ್ಗೆ ಇನ್ನಷ್ಟು ಪ್ರಶಂಸೆ ವ್ಯಕ್ತವಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ