ಕೊಲೆ ಮಾಡಿದ ಬಳಿಕ ಡೇಟಾ ಡಿಲೀಟ್: ಸಾಹಿಲ್ನ ಮತ್ತೂಂದು ಕಿಡಿಗೇಡಿತನ ಬಯಲು
Team Udayavani, Feb 17, 2023, 6:40 AM IST
ನವದೆಹಲಿ: ಪ್ರೇಯಸಿ ನಿಕ್ಕಿ ಯಾದವ್ಳನ್ನು ಹತ್ಯೆ ಮಾಡಿದ ಬಳಿಕ ಆರೋಪಿ ಸಾಹಿಲ್ ಗೆಹ್ಲೋಟ್ ಇಬ್ಬರ ಮೊಬೈಲ್ಗಳಲ್ಲಿರುವ ಎಲ್ಲಾ ಡೇಟಾ ಅನ್ನು ಅಳಿಸಿ ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
“ಇಬ್ಬರ ನಡುವಿನ ಫೋನ್ ಕರೆಗಳು, ಮೆಸೇಜ್ಗಳು, ಫೋಟೋಗಳು ಸೇರಿದಂತೆ ಎಲ್ಲ ವಿವರಗಳನ್ನು ಮುಚ್ಚಿಡಲು ಆರೋಪಿ ಯತ್ನಿಸಿದ್ದಾನೆ. ನಾವು ಡೇಟಾ ರಿಕವರಿಗಾಗಿ ಮೊಬೈಲ್ಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸುತ್ತೇವೆ,’ ಎಂದು ಅಪರಾಧ ವಿಭಾಗದ ವಿಶೇಷ ಪೊಲೀಸ್ ಆಯುಕ್ತ ರವೀಂದ್ರ ಸಿಂಗ್ ಯಾದವ್ ಹೇಳಿದ್ದಾರೆ.
ವಿಚಾರಣೆ ವೇಳೆ, ಸಾಹಿಲ್ ನಿಕ್ಕಿಯನ್ನು ಮದುವೆಯಾಗಲು ಇಚ್ಛಿಸಿದ್ದ. ಆದರೆ, ಕುಟುಂಬ ಸದಸ್ಯರು ಬೇರೆ ಯುವತಿ ಜತೆಗೆ ನಿಶ್ಚಿತಾರ್ಥ ನಡೆಸಿ ಮದುವೆ ಗೊತ್ತು ಮಾಡಿದ್ದರು ಎಂದು ತಿಳಿಸಿದ್ದಾನೆ ಎಂದು ಯಾದವ್ ಹೇಳಿದ್ದಾರೆ. ಫೆ.9ರಂದು ನಡೆದಿದ್ದ ನಿಶ್ಚಿತಾರ್ಥದಲ್ಲಿ ಆತ ಸಂಬಂಧಿಕರೊಂದಿಗೆ ನೃತ್ಯ ಮಾಡಿದ್ದಾನೆ ಎಂದು ಗೊತ್ತಾಗಿದೆ. ಇದೇ ವೇಳೆ ಅವರಿಬ್ಬರು ನಾಲ್ಕು ವರ್ಷದಿಂದ ಪ್ರೀತಿಸುತ್ತಿದ್ದು, ಲಿವ್ ಇನ್ ರಿಲೇಷನ್ಶಿಪ್ನಲ್ಲಿ ಇದ್ದ ಅಂಶವೂ ಬೆಳಕಿಗೆ ಬಂದಿದೆ.
ಕಾಶ್ಮೀರಿ ಗೇಟ್ನಲ್ಲಿ ಪರಿಶೀಲನೆ:
ಈ ನಡುವೆ ಪೊಲೀಸರು ಕಾಶ್ಮೀರಿ ಗೇಟ್ನಲ್ಲಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಸಾಹಿಲ್ ಗೆಹೊÉàಟ್ನ ಸಹೋದರನನ್ನೂ ವಿಚಾರಣೆ ನಡೆಸಲಾಗಿದೆ. ನಿಜಾಮುದ್ದೀನ್ ಮತ್ತು ಆನಂದ ವಿಹಾರ್ ರೈಲ್ವೇ ನಿಲ್ದಾಣದಲ್ಲೂ ಪರಿಶೀಲನೆ ನಡೆಸಲಾಗಿದೆ. ನಿಕ್ಕಿ ಹತ್ಯೆಯ ವಿಚಾರಣೆಯನ್ನು ಫಾಸ್ಟ್ ಟ್ರ್ಯಾಕ್ ನ್ಯಾಯಾಲಯದಲ್ಲಿ ನಡೆಸಿ, ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಕೆಯ ಕುಟುಂಬಸ್ಥರು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ