ಸಲ್ಮಾನ್ ಖಾನ್ ಗೆ ಜಾಮೀನು : 2 ದಿನಗಳ ಜೈಲು ವಾಸ ಅಂತ್ಯ
Team Udayavani, Apr 7, 2018, 3:07 PM IST
ಜೋಧ್ಪುರ: ಕೃಷ್ಣ ಮೃಗ ಬೇಟೆಪ್ರಕರಣದಲ್ಲಿ 5 ವರ್ಷಗಳ ಶಿಕ್ಷೆಗೊಳಗಾಗಿ ಜೈಲು ಪಾಲಾಗಿದ್ದ ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಶನಿವಾರ ಜಾಮೀನು ದೊರಕಿದ್ದು ಜೈಲಿನಿಂದ ಬಿಡುಗಡೆಯಾಗವು ಭಾಗ್ಯ ದೊರಕಿದೆ.
ಜಾಮೀನು ಅರ್ಜಿ ಪುರಸ್ಕರಿಸಿದ ನ್ಯಾಯಮೂರ್ತಿಗಳು ಜಾಮೀನು ಮಂಜೂರು ಮಾಡಿದರು. ಜಾಮೀನು ದೊರಕುತ್ತಿದ್ದಂತೆ ಸಲ್ಮಾನ್ ಅಭಿಮಾನಿಗಳು ಕೇಕೆ ಹಾಕಿ ಸಂಭ್ರಮಿಸಿದ್ದಾರೆ.
ಕೋರ್ಟ್ ತೀರ್ಪಿನಿಂದಾಗಿ ಅವರ ಚಿತ್ರಗಳಿಗೆ ಹಣ ಹೂಡಿದ್ದ ನಿರ್ಮಾಪಕರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
ಸ್ಥಳೀಯ ನ್ಯಾಯಾಲಯದಲ್ಲಿ ಶುಕ್ರವಾರ ಆರಂಭಗೊಂಡ ವಿಚಾರಣೆ ವೇಳೆ, ಭಾರೀ ವಾದ, ಪ್ರತಿವಾದಗಳು ನಡೆದು ಅಂತಿಮ ನಿರ್ಧಾರಕ್ಕೆ ಅವಕಾಶವಾಗದ ಕಾರಣ, ವಿಚಾರಣೆಯನ್ನು ನ್ಯಾಯಾಧೀಶರು ಶನಿವಾರ ಬೆಳಗ್ಗೆಗೆ ಮುಂದೂಡಿದ್ದರು.
1998ರಲ್ಲಿ ರಾಜಸ್ಥಾನದ ಜೋಧಪುರ ಬಳಿ ಕೃಷ್ಣ ಮೃಗಗಳ ಬೇಟೆ ಪ್ರಕರಣಕ್ಕೆ ಸಂಬಂಧಿಸಿ, ಜೋಧ್ಪುರ ನ್ಯಾಯಾಲಯ, ಗುರುವಾರ ಖಾನ್ಗೆ 5 ವರ್ಷಗಳ ಜೈಲು ಹಾಗೂ 10,000 ದಂಡ ವಿಧಿಸಿತ್ತು. ತೀರ್ಪಿನ ಬೆನ್ನಲ್ಲೇ ಅವರನ್ನು ಜೈಲಿಗೆ ರವಾನಿಸಲಾಗಿತ್ತು. ಶುಕ್ರವಾರದ ವಿಚಾರಣೆ ವೇಳೆ, ಸಲ್ಮಾನ್ ಪರ ವಕೀಲರು, 1998ರ ಪ್ರಕರಣದಲ್ಲಿಯೂ ಅವರು ಶಸ್ತ್ರಾಸ್ತ್ರ ಬಳಸಿದ್ದಕ್ಕೆ ಯಾವುದೇ ಪುರಾವೆಯಿಲ್ಲ. ತನಿಖೆಯಲ್ಲಿ ಸಾಕಷ್ಟು ಲೋಪಗಳಾಗಿವೆ. ಪ್ರತ್ಯಕ್ಷ ಸಾಕ್ಷಿಗಳ ಹೇಳಿಕೆಗಳು ನಂಬುವಂತೆ ಇಲ್ಲ ಎಂದು ವಾದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ