ಶಿವಸೇನೆ ಸೇರಿದ ಸಲ್ಮಾನ್ ಖಾನ್ ಬಾಡಿಗಾರ್ಡ್: ಯಾರು ಗೊತ್ತಾ ಈ ಶೇರಾ
Team Udayavani, Oct 19, 2019, 9:13 AM IST
ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವಂತೆ, ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅವರ ಅಂಗರಕ್ಷಕ ‘ಶೇರಾ’ ಶುಕ್ರವಾರ ಶಿವಸೇನಾ ಪಕ್ಷಕ್ಕೆ ಸೇರಿದರು.
ಶುಕ್ರವಾರ ಮುಂಬೈಯ ಠಾಕ್ರೆ ನಿವಾಸ ಮಾತೋಶ್ರೀಯಲ್ಲಿ ಶಿವಸೇನಾ ಮುಖಂಡ ಉದ್ಧವ್ ಠಾಕ್ರೆ ಮತ್ತು ಯುವ ಸೇನಾ ಮುಖಂಡ ಆದಿತ್ಯ ಠಾಕ್ರೆ ಸಮ್ಮುಖದಲ್ಲಿ ಶೇರಾ ತಮ್ಮ ರಾಜಕೀಯ ಜೀವನ ಆರಂಭಿಸಿದರು.
ಶಿವಸೇನಾ ಅಧಿಕೃತ ಟ್ವಿಟರ್ ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಲಾಗಿದೆ. ಶಿವಸೇನಾ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದು ಮತ್ತೊಮ್ಮೆ ಗದ್ದುಗೆಗೇರಲು ಪ್ರಯತ್ನ ನಡೆಸುತ್ತಿದೆ.
ಯಾರು ಈ ಶೇರಾ?
ಸೂಪರ್ ಸ್ಟಾರ್ ಸಲ್ಲು ನಂಬಿಕಸ್ಥ ಬಾಡಿಗಾರ್ಡ್ ಶೇರಾ ನಿಜವಾದ ಹೆಸರು ಗುರ್ಮೀತ್ ಸಿಂಗ್. ಸಲ್ಲು ಜೊತೆ ಕಳೆದ 20ಕ್ಕೂ ಹೆಚ್ಚು ವರ್ಷಗಳಿಂದ ಕೆಲಸ ಮಾಡಿಕೊಂಡಿರುವ ಶೇರಾ, ಸಲ್ಮಾನ್ ಖಾನ್ ನ ನಂಬಿಕಸ್ಥ.
ಮುಂಬೈನ ಅಂಧೇರಿಯ ಸಿಖ್ ಕುಟುಂಬದ ಗುರ್ಮೀತ್ ಸಿಂಗ್ ತಂದೆ ಆಟೋಮೊಬೈಲ್ ವರ್ಕ್ ಶಾಪ್ ನಡೆಸುತ್ತಿದ್ದರು. ತನ್ನ ದೇಹವನ್ನು ಹುರಿಗೊಳಿಸಿದ್ದ ಗುರ್ಮೀತ್ ಮಿಸ್ಟರ್ ಮುಂಬೈ, ಮಿಸ್ಟರ್ ಮಹಾರಾಷ್ಟ್ರ ಮುಂತಾದ ಸ್ಪರ್ಧೆಗಳಲ್ಲಿ ಮಿಂಚಿದ್ದರು.
ಸೆಕ್ಯುರಿಟಿ ಕಂಪೆನಿಯೊಂದಕ್ಕೆ ಕೆಲಸಕ್ಕೆ ಸೇರಿದ ಗುರ್ಮೀತ್ 1995ರಲ್ಲಿ ಮೊದಲ ಬಾರಿಗೆ ಸಲ್ಮಾನ್ ಖಾನ್ ಜೊತೆ ಸೇರಿದರು. ಸಲ್ಮಾನ್ ಸಹೋದರ ಸೊಹೈಲ್ ಖಾನ್ ಭೇಟಿಯಾಗಿ ”ನೀನು ನನ್ನ ಸಹೋದರನ ಜೊತೆ ಎಂದಿಗೂ ಇರುತ್ತೀಯ” ಎಂದು ಕೇಳಿದಾಗ ಗುರ್ಮೀತ್ ಹೌದು ಎಂದಿದ್ದರಂತೆ. ಹೀಗೆ ಸಲ್ಮಾನ್ ಜೊತೆ ಸೇರಿದ ಗುರ್ಮೀತ್ ‘’ಶೇರಾ’’ ಎಂದೇ ಪ್ರಸಿದ್ದಿಯಾಗಿದ್ದಾರೆ.
2011ರಲ್ಲಿ ತೆರೆಕಂಡಿದ್ದ ಬಾಡಿಗಾರ್ಡ್ ಸಿನಿಮಾವನ್ನು ಸಲ್ಮಾನ್ ಶೇರಾಗೆ ಅರ್ಪಿಸಿದ್ದರು. ಶೇರಾ ಮಗ ಟೈಗರ್ ನನ್ನು ಬಾಲಿವುಡ್ ಗೆ ಪರಿಚಯಿಸಲು ಸಲ್ಮಾನ್ ಸಿದ್ದರಾಗಿದ್ದಾರೆ ಎಂಬ ಮಾಹಿತಿಯೂ ಬಾಲಿವುಡ್ ವಲಯದಲ್ಲಿ ಕೇಳಿ ಬರುತ್ತಿದೆ.
ಎಷ್ಟು ಗೊತ್ತಾ ಸಂಬಳ
20ಕ್ಕೂ ಹೆಚ್ಚು ವರ್ಷಗಳಿಂದ ಸಲ್ಮಾನ್ ಖಾನ್ ಜೊತರೆಗಿರುವ ಶೇರಾ ಸಂಬಳ ಇಷ್ಟು ಇದೆ ಎಂಬ ಕುತೂಹಲ ಹಲವರಿಗಿದೆ. ಸಲ್ಮಾನ್ ತನ್ನ ಬಾಡಿಗಾರ್ಡ್ ಶೇರಾಗೆ ತಿಂಗಳಿಗೆ 15 ಲಕ್ಷ ವೇತನ ನೀಡುತ್ತಾರೆ ಎಂಬ ಮಾತುಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
MUST WATCH
ಹೊಸ ಸೇರ್ಪಡೆ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ