ಮಾಜಿ ಪ್ರಧಾನಿ ಚಂದ್ರಶೇಖರ್ ಪುತ್ರ, ಸಮಾಜವಾದಿ ಪಕ್ಷದ ನಾಯಕ ನೀರಜ್ ರಾಜ್ಯಸಭೆಗೆ ಗುಡ್ ಬೈ
Team Udayavani, Jul 15, 2019, 7:01 PM IST
ನವದೆಹಲಿ: ಮಾಜಿ ಪ್ರಧಾನಿ ಚಂದ್ರಶೇಖರ್ ಪುತ್ರ, ಸಮಾಜವಾದಿ ಪಕ್ಷದ ರಾಜ್ಯಸಭಾ ಸದಸ್ಯ ನೀರಜ್ ಶೇಖರ್ ಸೋಮವಾರ ತಮ್ಮ ಸ್ಥಾನಕ್ಕೆ ಹಾಗೂ ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ನೀರಜ್ ಭಾರತೀಯ ಜನತಾ ಪಕ್ಷ ಸೇರ್ಪಡೆಗೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಸಮಾಜವಾದಿ ಪಕ್ಷದ ಮುಖಂಡ, ರಾಜ್ಯಸಭಾ ಸದಸ್ಯ ನೀರಜ್ ಶೇಖರ್ (50ವರ್ಷ) ಅವರ ಅವಧಿ ಮುಂದಿನ ವರ್ಷ ಅಂತ್ಯಗೊಳ್ಳಲಿದೆ. ಮೂಲಗಳ ಪ್ರಕಾರ, ನೀರಜ್ ಅವರನ್ನು ಬಿಜೆಪಿ ಉತ್ತರಪ್ರದೇಶದಿಂದ ರಾಜ್ಯಸಭೆಗೆ ಆಯ್ಕೆ ಮಾಡುವ ಸಾಧ್ಯತೆ ಇದೆ ಎಂದು ವರದಿ ವಿವರಿಸಿದೆ.
2007ರಲ್ಲಿ ನೀರಜ್ ಶೇಖರ್ ತಮ್ಮ ತಂದೆ ಚಂದ್ರಶೇಖರ್ ಅವರ ಕ್ಷೇತ್ರವಾದ ಬಲ್ಲಿಯಾದಲ್ಲಿ ಸಮಾಜವಾದಿ ಪಕ್ಷದಿಂದ ಸ್ಪರ್ಧಿಸಿ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು. 2009ರಲ್ಲಿಯೂ ಪುನರಾಯ್ಕೆಗೊಂಡಿದ್ದರು.