ಸೂಪರ್ ಕಾಪ್ ನೇಮಕ; RAWಗೆ ಗೋಯಲ್ ನೂತನ ಮುಖ್ಯಸ್ಥ, IBಗೆ ಅರವಿಂದ್ ಕುಮಾರ್
Team Udayavani, Jun 26, 2019, 2:47 PM IST
ನವದೆಹಲಿ: ದೇಶದ ಎರಡು ಪ್ರತಿಷ್ಠಿತ ಗುಪ್ತಚರ ಇಲಾಖೆಗೆ ಕೇಂದ್ರ ಸರ್ಕಾರ ಬುಧವಾರ ನೂತನ ನಿರ್ದೇಶಕರನ್ನು ನೇಮಕ ಮಾಡಿದೆ. 1984ರ ಬ್ಯಾಚ್ ನ ಐಪಿಎಸ್ ಅಧಿಕಾರಿ ಅರವಿಂದ್ ಕುಮಾರ್ ಐಬಿ(ಇಂಟೆಲಿಜೆನ್ಸ್ ಬ್ಯುರೋ)ಗೆ ನೂತನ ನಿರ್ದೇಶಕರಾಗಿದ್ದು, ಸಮಂತ್ ಗೋಯಲ್ ಅವರನ್ನು “ರಾ”(ರಿಸರ್ಚ್ ಅಂಡ್ ಅನಾಲಿಸೀಸ್ ವಿಂಗ್)ನ ಮುಖ್ಯಸ್ಥರಾಗಿ ನೇಮಕ ಮಾಡಲಾಗಿದೆ.
ಅಸ್ಸಾಂ-ಮೇಘಾಲಯ ಕೇಡರ್ ನ ಐಪಿಎಸ್ ಅಧಿಕಾರಿ ಅರವಿಂದ್ ಕುಮಾರ್ ಇಂಟೆಲಿಜೆನ್ಸ್ ಬ್ಯುರೋದ ಕಾಶ್ಮೀರ ಡೆಸ್ಕ್ ನಲ್ಲಿ ವಿಶೇಷ ನಿರ್ದೇಶಕರಾಗಿ ಕಾರ್ಯನಿರ್ವಹಿಸುವ ಮೂಲಕ ಕಾಶ್ಮೀರ್ ಎಕ್ಸ್ ಪರ್ಟ್ ಎಂದೇ ಹೆಸರುಗಳಿಸಿದ್ದಾರೆ. ಅಲ್ಲದೇ ಎಡಪಂಥೀಯ ಉಗ್ರವಾದವನ್ನು ಹತ್ತಿಕ್ಕುವಲ್ಲಿ ಪ್ರಮುಖ ಪಾತ್ರವಹಿಸಿದ್ದರು ಎಂದು ವರದಿ ತಿಳಿಸಿದೆ.
ಸಮಂತ್ ಗೋಯಲ್ 1990ರಲ್ಲಿ ಪಂಜಾಬ್ ನಲ್ಲಿ ಉಗ್ರಗಾಮಿ ಚಟುವಟಿಕೆ ತೀವ್ರವಾಗಿದ್ದ ಸಂದರ್ಭದಲ್ಲಿ ಉಗ್ರಗಾಮಿ ಚಟುವಟಿಕೆ ಹತ್ತಿಕ್ಕುವಲ್ಲಿ ಗೋಯಲ್ ಮುಖ್ಯಪಾತ್ರವಹಿಸಿದ್ದರು. ಅಲ್ಲದೇ ದುಬೈ, ಲಂಡನ್ ನಲ್ಲಿಯೂ ಕಾರ್ಯನಿರ್ವಹಿಸಿದ್ದರು.
ದೇಶದ ಎರಡು ಪ್ರಮುಖ ಗುಪ್ತಚರ ಏಜೆನ್ಸಿಗೆ ನೂತನ ಮುಖ್ಯಸ್ಥರನ್ನು ನೇಮಕವಾದ ಬಳಿಕ ಇದೀಗ ಎಲ್ಲರ ಕಣ್ಣು ಭಾರತದ ಸೇನೆಯ ನೂತನ ಮುಖ್ಯಸ್ಥರು ಯಾರಾಗಲಿದ್ದಾರೆ ಎಂಬ ಕುತೂಹಲ ಮೂಡಿದೆ. ಹಾಲಿ ಆರ್ಮಿ ವರಿಷ್ಠ ಜನರಲ್ ಬಿಪಿನ್ ರಾವತ್ 2019ರ ಡಿಸೆಂಬರ್ ನಲ್ಲಿ ನಿವೃತ್ತಿಯಾಗಲಿದ್ದಾರೆ ಎಂದು ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ