- Tuesday 10 Dec 2019
ಸೂಪರ್ ಕಾಪ್ ನೇಮಕ; RAWಗೆ ಗೋಯಲ್ ನೂತನ ಮುಖ್ಯಸ್ಥ, IBಗೆ ಅರವಿಂದ್ ಕುಮಾರ್
Team Udayavani, Jun 26, 2019, 2:47 PM IST
ನವದೆಹಲಿ: ದೇಶದ ಎರಡು ಪ್ರತಿಷ್ಠಿತ ಗುಪ್ತಚರ ಇಲಾಖೆಗೆ ಕೇಂದ್ರ ಸರ್ಕಾರ ಬುಧವಾರ ನೂತನ ನಿರ್ದೇಶಕರನ್ನು ನೇಮಕ ಮಾಡಿದೆ. 1984ರ ಬ್ಯಾಚ್ ನ ಐಪಿಎಸ್ ಅಧಿಕಾರಿ ಅರವಿಂದ್ ಕುಮಾರ್ ಐಬಿ(ಇಂಟೆಲಿಜೆನ್ಸ್ ಬ್ಯುರೋ)ಗೆ ನೂತನ ನಿರ್ದೇಶಕರಾಗಿದ್ದು, ಸಮಂತ್ ಗೋಯಲ್ ಅವರನ್ನು “ರಾ”(ರಿಸರ್ಚ್ ಅಂಡ್ ಅನಾಲಿಸೀಸ್ ವಿಂಗ್)ನ ಮುಖ್ಯಸ್ಥರಾಗಿ ನೇಮಕ ಮಾಡಲಾಗಿದೆ.
ಅಸ್ಸಾಂ-ಮೇಘಾಲಯ ಕೇಡರ್ ನ ಐಪಿಎಸ್ ಅಧಿಕಾರಿ ಅರವಿಂದ್ ಕುಮಾರ್ ಇಂಟೆಲಿಜೆನ್ಸ್ ಬ್ಯುರೋದ ಕಾಶ್ಮೀರ ಡೆಸ್ಕ್ ನಲ್ಲಿ ವಿಶೇಷ ನಿರ್ದೇಶಕರಾಗಿ ಕಾರ್ಯನಿರ್ವಹಿಸುವ ಮೂಲಕ ಕಾಶ್ಮೀರ್ ಎಕ್ಸ್ ಪರ್ಟ್ ಎಂದೇ ಹೆಸರುಗಳಿಸಿದ್ದಾರೆ. ಅಲ್ಲದೇ ಎಡಪಂಥೀಯ ಉಗ್ರವಾದವನ್ನು ಹತ್ತಿಕ್ಕುವಲ್ಲಿ ಪ್ರಮುಖ ಪಾತ್ರವಹಿಸಿದ್ದರು ಎಂದು ವರದಿ ತಿಳಿಸಿದೆ.
ಸಮಂತ್ ಗೋಯಲ್ 1990ರಲ್ಲಿ ಪಂಜಾಬ್ ನಲ್ಲಿ ಉಗ್ರಗಾಮಿ ಚಟುವಟಿಕೆ ತೀವ್ರವಾಗಿದ್ದ ಸಂದರ್ಭದಲ್ಲಿ ಉಗ್ರಗಾಮಿ ಚಟುವಟಿಕೆ ಹತ್ತಿಕ್ಕುವಲ್ಲಿ ಗೋಯಲ್ ಮುಖ್ಯಪಾತ್ರವಹಿಸಿದ್ದರು. ಅಲ್ಲದೇ ದುಬೈ, ಲಂಡನ್ ನಲ್ಲಿಯೂ ಕಾರ್ಯನಿರ್ವಹಿಸಿದ್ದರು.
ದೇಶದ ಎರಡು ಪ್ರಮುಖ ಗುಪ್ತಚರ ಏಜೆನ್ಸಿಗೆ ನೂತನ ಮುಖ್ಯಸ್ಥರನ್ನು ನೇಮಕವಾದ ಬಳಿಕ ಇದೀಗ ಎಲ್ಲರ ಕಣ್ಣು ಭಾರತದ ಸೇನೆಯ ನೂತನ ಮುಖ್ಯಸ್ಥರು ಯಾರಾಗಲಿದ್ದಾರೆ ಎಂಬ ಕುತೂಹಲ ಮೂಡಿದೆ. ಹಾಲಿ ಆರ್ಮಿ ವರಿಷ್ಠ ಜನರಲ್ ಬಿಪಿನ್ ರಾವತ್ 2019ರ ಡಿಸೆಂಬರ್ ನಲ್ಲಿ ನಿವೃತ್ತಿಯಾಗಲಿದ್ದಾರೆ ಎಂದು ವರದಿ ವಿವರಿಸಿದೆ.
ಈ ವಿಭಾಗದಿಂದ ಇನ್ನಷ್ಟು
-
ಗುಡಿವಾಡ: ಈರುಳ್ಳಿ ದರ ಗಗನಕ್ಕೇರಿರುವುದು ಬಳಕೆದಾರರ ಕಣ್ಣೀರಿಗೆ ಕಾರಣವಾಗಿದೆ. ಆದರೆ ಈರುಳ್ಳಿ ಕೊಳ್ಳಲು ಮಾರುಕಟ್ಟೆಗೆ ಹೋದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ...
-
ಹೊಸದಿಲ್ಲಿ: ಭಾರಿ ವಿವಾದಕ್ಕೆ ಕಾರಣವಾಗಿರುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಇಂದು ಈಶಾನ್ಯ ಭಾರತದ ರಾಜ್ಯಗಳಲ್ಲಿ ಬಂದ್ ಆಚರಿಸಲಾಗುತ್ತಿದೆ. ಈಶಾನ್ಯ...
-
ಹೊಸದಿಲ್ಲಿ: ಜನರ ಬ್ಯಾಂಕ್ ಖಾತೆಯಿಂದ ಕಳ್ಳದಾರಿಯಲ್ಲಿ ಹಣ ಕದಿಯುತ್ತಿದ್ದ ರೋಮಾನಿಯಾದ ಪ್ರಜೆಯೋರ್ವನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ರೋಮಾನಿಯಾ...
-
ಹೊಸದಿಲ್ಲಿ: ಐವತ್ತು ಮೈಕ್ರಾನ್ಗಳಿಗಿಂತ ಕಡಿಮೆ ಪ್ರಮಾಣದ ಪ್ಲಾಸ್ಟಿಕ್ ಬ್ಯಾಗ್ ಬಳಕೆಯಲ್ಲಿ ಬರದಂತೆ ನೋಡಿಕೊಳ್ಳಬೇಕು ಎಂದು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ...
-
ಹೊಸದಿಲ್ಲಿ: ಅಯೋಧ್ಯೆಯಲ್ಲಿ ಮುಸ್ಲಿಂ ಸಮುದಾಯಕ್ಕೆ ಮಸೀದಿ ನಿರ್ಮಾಣಕ್ಕೆಂದು ಐದು ಎಕರೆ ಜಮೀನು ನೀಡಬೇಕಾದ ಅಗತ್ಯ ಇಲ್ಲ ಎಂದು ಪ್ರತಿಪಾದಿಸಿ ಹಿಂದೂ ಮಹಾಸಭಾ...
ಹೊಸ ಸೇರ್ಪಡೆ
-
ದಾವಣಗೆರೆ: ಅಂಗವಿಕಲರು ಉತ್ತಮ ಸಾಧನೆಯ ಮೂಲಕ ಯಾರಿಗೇನು ಕಡಿಮೆ ಇಲ್ಲ ಎಂಬುದನ್ನು ತೋರಿಸಬೇಕು ಎಂದು ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎ. ರವೀಂದ್ರನಾಥ್...
-
ಬೆಂಗಳೂರು: ವಿವಾದಕ್ಕೆ ಕಾರಣವಾಗಿರುವ ಪೌರತ್ವ ತಿದ್ದುಪಡಿ ಮಸೂದೆಯನ್ನು ಕೇಂದ್ರ ಸರಕಾರ ಸೋಮವಾರ ಲೋಕಸಭೆಯಲ್ಲಿ ಮಂಡಿಸಿದ್ದು, ಭಾರಿ ಚರ್ಚೆಯ ನಂತರ ಮಧ್ಯರಾತ್ರಿ...
-
ದಾವಣಗೆರೆ: ರೈತರ ಕುಂದುಕೊರತೆ ಚರ್ಚಿಸಲು ಪ್ರತಿ 3 ತಿಂಗಳಿಗೊಮ್ಮೆ ಸಭೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಜಿ. ಬೀಳಗಿ ತಿಳಿಸಿದ್ದಾರೆ. ಸೋಮವಾರ...
-
ಬೆಂಗಳೂರು: 15 ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆ ಯಾಕೆ ಹಿನ್ನಡೆ ಆಗಿದೆಯೆಂದು ಸಂಪೂರ್ಣವಾಗಿ ಎಲ್ಲರೊಂದಿಗೆ ಹೇಳುತ್ತೇನೆ ಎಂದು ಕಾಂಗ್ರೆಸ್ ನಾಯಕ...
-
ನ್ಯೂಯಾರ್ಕ್: ಅಮೆರಿಕದ ಮಾಜಿ ಬೇಸ್ ಬಾಲ್ ಆಟಗಾರ, ಜಗತ್ತಿನಾದ್ಯಂತ “ಐಸ್ ಬಕೆಟ್ ಚಾಲೆಂಜ್” ಮೂಲಕ ದೇಣಿಗೆ ಸಂಗ್ರಹಿಸಲು ಸ್ಫೂರ್ತಿಯಾಗಿದ್ದ ಪೀಟ್ ಫ್ರೇಟ್ಸ್(34ವರ್ಷ)...