ಛಗನ್ ಅವರಂತೆ ನನಗೂ ಜಾಮೀನು ಕೊಡಿ: ಸಮೀರ್ ಭುಜಬಲ್
Team Udayavani, May 15, 2018, 5:00 PM IST
ಮುಂಬಯಿ : ಅಧಿಕಾರ ದುರುಪಯೋಗಿಸಿಕೊಂಡು ಹಣಕಾಸು ಅಕ್ರಮ ನಡೆಸಿದ ಆರೋಪದಲ್ಲಿ ಜೈಲುಪಾಲಾಗಿರುವ ಸಮೀರ್ ಭುಜಬಲ್, ತನ್ನಂತೆ ಜೈಲು ಪಾಲಾಗಿದ್ದ ಹಾಗೂ ಕಳೆದ ಮೇ 4ರಂದು ಜಾಮೀನು ಪಡೆದಿರುವ ತನ್ನ ಚಿಕ್ಕಪ್ಪ, ಹಿರಿಯ ಎನ್ಸಿಪಿ ನಾಯಕ ಛಗನ್ ಭುಜಬಲ್ ಅವರ ಪೂರ್ವ ನಿದರ್ಶನದಲ್ಲಿ ತನಗೂ ಮಧ್ಯಾವಧಿ ಜಾಮೀನು ಮಂಜೂರು ಮಾಡುವಂತೆ ಕೋರಿ ಬಾಂಬೆ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ.
ಛಗನ್ ಭುಜಬಲ್ ಮತ್ತು ಸಮೀರ್ ಭುಜಬಲ್ ಅವರು ತಮ್ಮ ಹುದ್ದೆಯನ್ನು ದುರುಪಯೋಗಿಸಿಕೊಂಡು ಹಣಕಾಸು ಅಕ್ರಮ ಎಸಗಿ ರಾಜ್ಯ ಸರಕಾರದ ಬೊಕ್ಕಸಕ್ಕೆ ಅಪಾರ ನಷ್ಟ ಉಂಟುಮಾಡಿರುವರೆಂಬ ಆರೋಪದಲ್ಲಿ ಜಾರಿ ನಿರ್ದೇಶನಲಾಯ ಅವರನ್ನು 2016ರಲ್ಲಿ ಬಂಧಿಸಿತ್ತು.
ಪ್ರಕರಣದ ಮುಖ್ಯ ಆರೋಪಿಯಾಗಿರುವ ತನ್ನ ಚಿಕ್ಕಪ್ಪ ಛಗನ್ ಭುಜಬಲ್ ಅವರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿರುವ ಪೂರ್ವ ನಿದರ್ಶನದಲ್ಲಿ ತನಗೂ ತಾತ್ಕಾಲಿಕ ಜಾಮೀನು ಮಂಜೂರು ಮಾಡುವಂತೆ ಕೋರಿರುವ ಸಮೀರ್ ಭುಜಬಲ್ ಅವರ ಅರ್ಜಿಯನ್ನು ಹೈಕೋರ್ಟಿನ ರಜಾಕಾಲದ ನ್ಯಾಯ ಪೀಠದ ಮುಂದೆ ಸಲ್ಲಿಸಲಾಗಿದೆ ಎಂದು ಸಮೀರ್ ಅವರ ವಕೀಲ ವಿಕ್ರಮ ಚೌಧರಿ ಮಾಧ್ಯಮಕ್ಕೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
Udupi: ರಮಾಬಾಯಿ ಕೊಚ್ಚಿಕಾರ್ ಪೈ ನಿಧನ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ