
ಮಾಜಿ ಎನ್ ಸಿಬಿ ನಿರ್ದೇಶಕ ಸಮೀರ್ ವಾಂಖೆಡೆಗೆ ದಾವೂದ್ ಇಬ್ರಾಹಿಂನಿಂದ ಬೆದರಿಕೆ ಕರೆ
Team Udayavani, Jun 4, 2023, 11:58 AM IST

ಮುಂಬೈ: ಮಾಜಿ ಎನ್ ಸಿಬಿ ನಿರ್ದೇಶಕ ಸಮೀರ್ ವಾಂಖೆಡೆ ಅವರಿಗೆ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬೆದರಿಕೆ ಹಾಕುತ್ತಿದ್ದಾನೆ ಎನ್ನಲಾಗಿದೆ. ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಡ್ರಗ್ ಕೇಸ್ ಸಂಬಂಧ ಸಿಬಿಐ ವಿಚಾರಣೆ ಎದುರಿಸುತ್ತಿರುವ ಸಮೀರ್ ಅವರಿಗೆ ಮತ್ತು ಅವರ ಕುಟುಂಬಕ್ಕೆ ದಾವೂದ್ ಕಡೆಯಿಂದ ಬೆದರಿಕೆ ಬಂದಿದೆ ಎಂದು ಹೇಳಿದ್ದಾರೆ.
ನಕಲಿ ಟ್ವಿಟ್ಟರ್ ಖಾತೆಗಳಿಂದ ತನಗೆ ಬೆದರಿಕೆ ಬರುತ್ತಿದೆ ಎಂದು ಸಮೀರ್ ಪೊಲೀಸರಿಗೆ ತಿಳಿಸಿದ್ದಾರೆ. ತನ್ನ ಅಥವಾ ತನ್ನ ಕುಟುಂಬದ ಮೇಲೆ ದಾಳಿಯಾದರೆ ಯಾರು ಹೊಣೆ ಎಂದು ಅವರು ಪೊಲೀಸರಿಗೆ ಮಾಹಿತಿ ನೀಡಿದರು ಎಂದು ಮೂಲಗಳು ತಿಳಿಸಿವೆ.
ಕ್ರೂಸ್ ನಲ್ಲಿ ಡ್ರಗ್ಸ್ ಪ್ರಕರಣದಲ್ಲಿ ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಅವರನ್ನು ಬಂಧಿಸದಿರಲು 25 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪದ ಮೇಲೆ ಸಮೀರ್ ವಾಂಖೆಡೆ ಅವರನ್ನು ಸಿಬಿಐ ವಿಚಾರಣೆ ನಡೆಸುತ್ತಿದೆ.
ಈ ಪ್ರಕರಣದಲ್ಲಿ ಆರ್ಯನ್ ಖಾನ್ ಬಂಧನದ ಕುರಿತು ನಟ ಶಾರುಖ್ ಖಾನ್ ಅವರೊಂದಿಗೆ ಮಾತುಕತೆ ನಡೆಸಿ ಸಮೀರ್ ವಾಂಖೆಡೆ ಅವರು ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಎನ್ಸಿಬಿ ಮೂಲಗಳು ತಿಳಿಸಿವೆ.
ಸಿಬಿಐ ಕ್ರಮದ ವಿರುದ್ಧ ಸಮೀರ್ ವಾಂಖೆಡೆ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದು, ಮೇ 22ರವರೆಗೆ ಅವರಿಗೆ ಬಂಧನದಿಂದ ರಕ್ಷಣೆ ನೀಡಲಾಗಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

India-Canada ಸಂಬಂಧ ಹದಗೆಡಿಸಲು ನಿಜ್ಜರ್ ಪ್ರಕರಣದಲ್ಲಿ ಪಾಕಿಸ್ಥಾನದ ISI ಸಂಚು

Manipur ; ಇಡೀ ರಾಜ್ಯವನ್ನು ‘ಪ್ರಕ್ಷುಬ್ಧ ಪ್ರದೇಶ’ ಎಂದು ಘೋಷಿಸಿದ ಸರಕಾರ

Damadan Purva: ಈ ಗ್ರಾಮದ ಯುವತಿಯರನ್ನು ಮದುವೆಯಾದರೆ ಸಿಗುತ್ತೆ ಮನೆ, ಜಮೀನು, ಆಸ್ತಿ.!

Delhi: ದೇವಸ್ಥಾನದಲ್ಲಿ ಪ್ರಸಾದ ಸೇವಿಸಿದ್ದ ವಿಕಲಚೇತನ ಮುಸ್ಲಿಂ ವ್ಯಕ್ತಿಗೆ ಥಳಿತ; ಮೃತ್ಯು

ISKCON: ಗೋರಕ್ಷಣೆ ಹೆಸರಲ್ಲಿ ಇಸ್ಕಾನ್ ಗೋವುಗಳನ್ನು ಕಟುಕರಿಗೆ ಮಾರುತ್ತಿದೆ… ಮನೇಕಾ ಗಾಂಧಿ
MUST WATCH
ಹೊಸ ಸೇರ್ಪಡೆ

BYJU’s Lay Off: ಆತಂಕದಲ್ಲಿ ಬೈಜೂಸ್ ಉದ್ಯೋಗಿಗಳು…3,500 ನೌಕರರ ಕಡಿತಕ್ಕೆ ಸಿದ್ಧತೆ

India-Canada ಸಂಬಂಧ ಹದಗೆಡಿಸಲು ನಿಜ್ಜರ್ ಪ್ರಕರಣದಲ್ಲಿ ಪಾಕಿಸ್ಥಾನದ ISI ಸಂಚು

Thirthahalli ಮೀನು ಹಿಡಿಯಲು ಹೋದ ಯುವಕ ತುಂಗಾ ನದಿಗೆ ಬಿದ್ದು ಸಾವು !

Manipur ; ಇಡೀ ರಾಜ್ಯವನ್ನು ‘ಪ್ರಕ್ಷುಬ್ಧ ಪ್ರದೇಶ’ ಎಂದು ಘೋಷಿಸಿದ ಸರಕಾರ

Sandalwood: ‘ಟಿಆರ್ಪಿ ರಾಮ’ನಿಗಾಗಿ ಮತ್ತೇ ಬಂದ್ರು ಮಹಾಲಕ್ಷ್ಮೀ