Sanatan Dharma ; ಬಿಜೆಪಿಗೆ ಹೊಸ ಅಸ್ತ್ರವಾದ ಉದಯನಿಧಿ ಸ್ಟಾಲಿನ್ ಹೇಳಿಕೆ
'ಕ್ರಿಶ್ಚಿಯನ್ ಮಿಷನರಿಗಳಿಂದ ಖರೀದಿಸಿದ ಕಲ್ಪನೆ' ಎಂದು ಕಿಡಿ ಕಾರಿದ ಅಣ್ಣಾಮಲೈ ..
Team Udayavani, Sep 3, 2023, 4:39 PM IST
ಹೊಸದಿಲ್ಲಿ: ಇಂಡಿಯಾ ಮೈತ್ರಿ ಕೂಟದ ಭಾಗವಾಗಿರುವ ಪಕ್ಷ, ತಮಿಳುನಾಡಿನ ಆಡಳಿತಾರೂಢ ಡಿಎಂಕೆಯ ಸಚಿವ ಉದಯನಿಧಿ ಸ್ಟಾಲಿನ್ ಸನಾತನ ಧರ್ಮದ ಕುರಿತು ನೀಡಿರುವ ಹೇಳಿಕೆ ಬಿಜೆಪಿಗೆ ಹೊಸ ಅಸ್ತ್ರವಾಗಿ ಪರಿಣಮಿಸಿದೆ.
ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಹೇಳಿಕೆ ಖಂಡಿಸಿದ್ದು, ಮಧ್ಯಪ್ರದೇಶ ಚಿತ್ರಕೂಟದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿ ”ಸ್ಟಾಲಿನ್ ಪುತ್ರ ಉದಯನಿಧಿ ಸ್ಟಾಲಿನ್ ಅವರು ‘ಸನಾತನ ಧರ್ಮ’ ತೊಲಗಬೇಕು ಎಂದು ಹೇಳುತ್ತಾರೆ, ಅವರು ಡೆಂಗ್ಯೂ ಮತ್ತು ಮಲೇರಿಯಾದಂತೆ ‘ಸನಾತನ ಧರ್ಮ’ವನ್ನು ತೊಡೆದುಹಾಕಬೇಕು ಎಂದಿದ್ದಾರೆ. ಇಂತಹ ಹೇಳಿಕೆಗಳನ್ನು ನೀಡಲು ಅವರಿಗೆ ಯಾವುದೇ ಹಿಂಜರಿಕೆ ಇಲ್ಲ. ಈ ಹೇಳಿಕೆ ಇಂಡಿಯಾ ಮೈತ್ರಿಕೂಟದ ರಾಜಕೀಯ ತಂತ್ರದ ಭಾಗವೇ? ಮುಂಬರುವ ಚುನಾವಣೆಯಲ್ಲಿ ಈ ಹಿಂದೂ ವಿರೋಧಿ ತಂತ್ರವನ್ನು ಬಳಸುತ್ತೀರಾ? ನಮಗೆ ಸಂಬಂಧಿಸಿದ ಎಲ್ಲವನ್ನೂ ನೀವು ದ್ವೇಷಿಸುತ್ತೀರಿ ಎಂದು ಬಹು ಬಾರಿ ಸಾಬೀತುಪಡಿಸಿದ್ದೀರಿ. ದೇಶ ಮತ್ತು ನಿಮ್ಮ ‘ಮೊಹಬ್ಬತ್ ಕಿ ದುಕಾನ್’ ದ್ವೇಷವನ್ನು ಹರಡುತ್ತಿದೆ” ಎಂದು ಆಕ್ರೋಶ ಹೊರ ಹಾಕಿದ್ದಾರೆ.
ಇದನ್ನೂ ಓದಿ: INDIA ಒಕ್ಕೂಟ ಹಿಂದೂ ಧರ್ಮವನ್ನು ದ್ವೇಷಿಸುತ್ತದೆ…: ಉದಯನಿಧಿ ಹೇಳಿಕೆಗೆ ಅಮಿತ್ ಶಾ ಕಿಡಿ
ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಎಕ್ಸ್ ನಲ್ಲಿ ಪೋಸ್ಟ್ ಮಾಡಿ, ”ಗೋಪಾಲಪುರಂ ಕುಟುಂಬ ಹೊಂದಿರುವ ಏಕೈಕ ಸಂಕಲ್ಪವೆಂದರೆ ರಾಜ್ಯದ ಜಿಡಿಪಿಯನ್ನು ಮೀರಿ ಸಂಪತ್ತನ್ನು ಸಂಗ್ರಹಿಸುವುದು.ಉದಯ್ ಸ್ಟಾಲಿನ್ ನೀವು, ನಿಮ್ಮ ತಂದೆ, ಅಥವಾ ಅವರ ಅಥವಾ ನಿಮ್ಮ ಆದರ್ಶವಾದಿಗಳು ಕ್ರಿಶ್ಚಿಯನ್ ಮಿಷನರಿಗಳಿಂದ ಖರೀದಿಸಿದ ಕಲ್ಪನೆಯನ್ನು ಹೊಂದಿದ್ದಾರೆ. ಅವರ ದುರುದ್ದೇಶಪೂರಿತ ಸಿದ್ಧಾಂತವನ್ನು ಜಾರಿ ಮಾಡಲು ನಿಮ್ಮಂತಹ ಮಂದಬುದ್ಧಿಗಳನ್ನು ಬೆಳೆಸುವುದು ಆ ಮಿಷನರಿಗಳ ಆಲೋಚನೆಯಾಗಿದೆ. ತಮಿಳುನಾಡು ಆಧ್ಯಾತ್ಮಿಕತೆಯ ನಾಡು. ಈ ರೀತಿಯ ಈವೆಂಟ್ನಲ್ಲಿ ಮೈಕ್ ಹಿಡಿದಿಟ್ಟುಕೊಳ್ಳುವುದು ಮತ್ತು ನಿಮ್ಮ ಹತಾಶೆಯನ್ನು ಹೊರಹಾಕುವುದು ನೀವು ಮಾಡಬಹುದಾದ ಅತ್ಯುತ್ತಮ ಕೆಲಸ!” ಎಂದು ಆಕ್ರೋಶ ಹೊರ ಹಾಕಿದ್ದಾರೆ.
ಬಿಜೆಪಿ ಹಿರಿಯ ಹಿರಿಯ ರಾಷ್ಟ್ರೀಯ ವಕ್ತಾರ ಸುಧಾಂಶು ತ್ರಿವೇದಿ ಸುದ್ದಿಗೋಷ್ಠಿ ನಡೆಸಿ ಹೇಳಿಕೆಯನ್ನು ಖಂಡಿಸಿದ್ದು, ”ಇದು ಪ್ರತ್ಯೇಕವಾಗಿ ನೀಡಿದ ಹೇಳಿಕೆಯಲ್ಲ. ಆದರೆ, ಇದು ಸಂಪೂರ್ಣ ಪರಿಣಾಮದ ಅನುಕ್ರಮವನ್ನು ಹೊಂದಿದೆ.ಮುಂಬೈನಲ್ಲಿ ನಡೆದ ಇಂಡಿಯಾ ಮೈತ್ರಿಕೂಟದ ಸಭೆಯ ಕೇವಲ 24 ಗಂಟೆಗಳ ನಂತರ ಅವರು ಈ ಹೇಳಿಕೆ ನೀಡಿದ್ದಾರೆ. ಇದನ್ನು ಚೆನ್ನಾಗಿ ಯೋಚಿಸಿ, ಸರಿಯಾದ ವಿನ್ಯಾಸದೊಂದಿಗೆ, ಸರಿಯಾದ ತೀರ್ಮಾನದೊಂದಿಗೆ ಚೆನ್ನಾಗಿ ಬರೆಯಲಾಗಿದೆ. ಉದಯನಿಧಿಗೆ ಈ ಪತ್ರಿಕೆಯನ್ನು ಬರೆದು ಕೊಟ್ಟವರು ಯಾರು ಎಂದು ನಾನು ಕೇಳಲು ಬಯಸುತ್ತೇನೆ? ಇದರಲ್ಲಿ ಭಾರತ ಮೈತ್ರಿಕೂಟದ ಪಾತ್ರವೇನು? ಎಂದು ಪ್ರಶ್ನಿಸಿದ್ದಾರೆ.
ಹಿಂದೂ ಪರ ಸಂಘಟನೆಗಳು ಸೇರಿ ಸಾವಿರಾರು ಮುಖಂಡರು, ಧಾರ್ಮಿಕ ಪ್ರಮುಖರು ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದು, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಹೇಳಿಕೆ ಸಮರ್ಥಿಸಿ ಮತ್ತೆ ಪ್ರತಿಕ್ರಿಯೆ ನೀಡಿರುವ ಉದಯನಿಧಿ ಸ್ಟಾಲಿನ್, “ಸನಾತನ ಧರ್ಮ ಅನುಸರಿಸುವವರ ನರಮೇಧಕ್ಕೆ ನಾನು ಎಂದೂ ಕರೆ ನೀಡಲಿಲ್ಲ, ಸನಾತನ ಧರ್ಮವನ್ನು ಬೇರುಸಹಿತ ಕಿತ್ತುಹಾಕುವುದು ಮಾನವೀಯತೆ ಮತ್ತು ಮಾನವ ಸಮಾನತೆಯನ್ನು ಎತ್ತಿಹಿಡಿಯಲಿದೆ. ಸನಾತನ ಧರ್ಮದಿಂದ ಬಳಲುತ್ತಿರುವ ತುಳಿತಕ್ಕೊಳಗಾಗಿರುವ ಜನರ ಪರ ಧ್ವನಿಯಾಗಿ ಮಾತನಾಡಿದ್ದೇನೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!