ಹಿರಿಯ ಸಂಘ ಪರಿವಾರ ನಾಯಕಿ ಅರೆಸ್ಟ್: ಕೇರಳದಲ್ಲಿಂದು ಮುಷ್ಕರ
Team Udayavani, Nov 17, 2018, 11:09 AM IST
ಕೊಚ್ಚಿ : ಬಲಪಂಥೀಯ ಹಿಂದು ಸಂಘಟನೆಗಳು ಇಂದು ಶನಿವಾರ ಕೇರಳದಲ್ಲಿ ಬೆಳಗ್ಗಿನಿಂದ ಸಂಜೆಯ ತನಕದ ಅವಧಿಯ ಮುಷ್ಕರಕ್ಕೆ ಕರೆ ನೀಡಿವೆ. ಶಬರಿಮಲೆಯ ಅಯ್ಯಪ್ಪ ದೇವಸ್ಥಾನಕ್ಕೆ ಯಾತ್ರಾರ್ಥಿಯಾಗಿ ಹೋಗುತ್ತಿದ್ದ ಹಿರಿಯ ಸಂಘ ಪರಿವಾರ ನಾಯಕಿಯನ್ನು ಪೊಲೀಸರು ಬಂಧಿಸಿರುವುದನ್ನು ಅನುಸರಿಸಿ ಮುಷ್ಕರಕ್ಕೆ ಕರೆ ನೀಡಲಾಗಿದೆ.
ವಿಎಚ್ಪಿ ರಾಜ್ಯ ಘಟಕದ ಅಧ್ಯಕ್ಷ ಎಸ್ ಜೆ ಆರ್ ಕುಮಾರ್ ಅವರು “ಇಂದು ಶನಿವಾರ ನಸುಕಿನ 2.30ರ ವೇಳೆಗೆ ಶಬರಿಮಲೆ ಸಮೀಪದ ಮರಕ್ಕೂಟಂ ಎಂಬಲ್ಲಿ ಪೊಲೀಸರು ಹಿಂದೂ ಐಕ್ಯವೇದಿ ರಾಜ್ಯ ಘಟಕದ ಅಧ್ಯಕ್ಷೆಯಾಗಿರುವ ಕೆ ಪಿ ಶಶಿಕಲಾ ಅವರನ್ನು ಪೊಲೀಸರು ಬಂಧಿಸಿದ್ದಾರೆ” ಎಂದು ಆರೋಪಿಸಿದ್ದಾರೆ.
ಶಶಿಕಲಾ ಅವರು ಇರುಮುಡಿಕಟ್ಟನ್ನು ಶಬರಿಮಲೆಯ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಒಯ್ಯುತ್ತಿದ್ದ ವೇಳೆ ಪೊಲೀಸರು ಅವರನ್ನು ಬಂಧಿಸಿದರು. ಅವರ ಜತೆಗೆ ಇನ್ನೂ ಕೆಲವು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಕುಮಾರ್ ಸುದ್ದಿಗಾರರಿಗೆ ತಿಳಿಸಿದರು. ಕೇರಳ ಸರಕಾರ ಶಬರಿಮಲೆ ದೇವಸ್ಥಾನವನ್ನು ನಾಶ ಮಾಡಲು ಯತ್ನಿಸುತ್ತಿದೆ ಎಂದವರು ಆರೋಪಿಸಿದರು.
ಇಂದು ಬೆಳಗ್ಗಿನಿಂದ ಸಂಜೆಯ ತನಕ ನಡೆಯುವ ಮುಷ್ಕರದಿಂದ ಆವಶ್ಯಕ ಸೇವೆಗಳ ಮತ್ತು ಅಯ್ಯಪ್ಪ ಭಕ್ತರ ವಾಹನಗಳ ಸಂಚಾರಕ್ಕೆ ಯಾವುದೇ ಬಾಧೆ ಇರುವುದಿಲ್ಲ ಎಂದು ಕುಮಾರ್ ಹೇಳಿದರು.
ಇದೇ ವೇಳೆ ಎರಡು ತಿಂಗಳ ಯಾತ್ರಾವಧಿಗಾಗಿ ತೆರೆಯಲ್ಪಟ್ಟಿರುವ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಕೇರಳ ಸರಕಾರ ಅಭೂತಪೂರ್ವ ಭದ್ರತೆಯನ್ನು ಆಯೋಜಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ