ವೀರಪ್ಪನ್ ಗ್ಯಾಂಗ್ ಮಣಿಸಿದ್ದ ಅರೋರಾ ದಿಲ್ಲಿ ಪೊಲೀಸ್ ಆಯುಕ್ತ
Team Udayavani, Aug 1, 2022, 7:05 AM IST
ನವದೆಹಲಿ: ಕಾಡುಗಳ್ಳ ವೀರಪ್ಪನ್ ಗ್ಯಾಂಗ್ ಅನ್ನು ಬಗ್ಗು ಬಡಿದಿದ್ದ ತಮಿಳುನಾಡು ಕೇಡರ್ನ 1988ನೇ ಬ್ಯಾಚ್ನ ಐಪಿಎಸ್ ಅಧಿಕಾರಿ ಸಂಜಯ ಅರೋರಾ ದೆಹಲಿಯ ನೂತನ ಪೊಲೀಸ್ ಆಯುಕ್ತರಾಗಲಿದ್ದಾರೆ. ಅವರು ಸೋಮವಾರ ಹಾಲಿ ಆಯುಕ್ತ ರಾಕೇಶ್ ಆಸ್ತಾನಾರಿಂದ ಅಧಿಕಾರ ಸ್ವೀಕರಿಸಲಿದ್ದಾರೆ. ಸದ್ಯ ಅರೋರಾ ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ನ (ಐಟಿಬಿಪಿ) ಮಹಾ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಇದೊಂದು “ಇಂಟರ್ ಕೇಡರ್ ಡೆಪ್ಯೂಟೇಶನ್’ ಮಾದರಿಯಡಿ ಆಗಿರುವ ವರ್ಗಾವಣೆ. ತಮಿಳುನಾಡು ಕೇಡರ್ನವರಾದ ಅವರನ್ನು ಅರುಣಾಚಲ ಪ್ರದೇಶ, ಗೋವಾ, ಮಿಜೋರಂ ಹಾಗೂ ಕೇಂದ್ರಾಡಳಿತ ಪ್ರದೇಶಗಳ (ಎಜಿಎಂಯುಟಿ) ಕೇಡರ್ಗೆ ವರ್ಗಾವಣೆ ಮಾಡಲು ಸಲ್ಲಿಸಲಾಗಿದ್ದ ಪ್ರಸ್ತಾವನೆಗೆ ಸ್ಪರ್ಧಾ ಪ್ರಾಧಿಕಾರ (ಕಾಂಪಿಟೆಂಟ್ ಅಥಾರಿಟಿ) ಒಪ್ಪಿಗೆ ನೀಡಿದೆ. ಅದರ ಪರಿಣಾಮವಾಗಿ, ಅರೋರಾ ಅವರು ದೆಹಲಿ ಆಯುಕ್ತರಾಗಿ ನೇಮಕಗೊಂಡಿದ್ದಾರೆ.
ಮೂರನೇ ಬಾರಿ: ಬೇರೊಂದು ಕೇಡರ್ನಲ್ಲಿರುವ ಐಪಿಎಸ್ ಅಧಿಕಾರಿಯೊಬ್ಬರನ್ನು ಎಜಿಎಂಯುಟಿ ಕೇಡರ್ಗೆ ವರ್ಗಾವಣೆ ಮಾಡಿ, ದೆಹಲಿ ಪೊಲೀಸ್ ಆಯುಕ್ತರಾನ್ನಾಗಿಸಿರುವುದು ಇದು ಮೂರನೇ ಬಾರಿ.
ವೀರಪ್ಪನ್ ಕಾರ್ಯಾಚರಣೆಯಲ್ಲಿ ಭಾಗಿ
80-90ರ ದಶಕದಲ್ಲಿ ಇಡೀ ದಕ್ಷಿಣ ಭಾರತದಲ್ಲಿ ತಲ್ಲಣ ಸೃಷ್ಟಿಸಿದ್ದ ಕಾಡುಗಳ್ಳ ವೀರಪ್ಪನ್ನನ್ನು ಹಿಡಿಯಲು ತಮಿಳುನಾಡು ಸರ್ಕಾರ ನೇಮಿಸಿದ್ದ ವಿಶೇಷ ಕಾರ್ಯಪಡೆಯ (ಎಸ್ಟಿಎಫ್) ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು. ಆ ಸಂದರ್ಭದಲ್ಲಿ ಉತ್ತಮ ಸೇವೆ ಸಲ್ಲಿಸಿದ್ದಕ್ಕಾಗಿ ಅವರಿಗೆ ತಮಿಳುನಾಡು ಮುಖ್ಯಮಂತ್ರಿಗಳ ಶೌರ್ಯ ಪದಕವೂ ಲಭಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ