![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ದುಬಾರಿ ಮದುವೆಗೆ ಈಗ ಸಂಸತ್ತಿನಿಂದಲೇ ಬ್ರೇಕ್?
Team Udayavani, Feb 16, 2017, 3:45 AM IST
![wedding.jpg](https://www.udayavani.com/wp-content/uploads/2017/02/15/wedding-620x361.jpg)
ನವದೆಹಲಿ: ದುಬಾರಿ ಮದುವೆಗಳ ವಿರುದ್ಧ ಕಾಯ್ದೆ ತರಲು ಈ ಹಿಂದೆ ಕರ್ನಾಟಕ ಸರ್ಕಾರ ಪ್ರಯತ್ನ ಮಾಡಿತ್ತು. ಇದೀಗ ಸಂಸತ್ತಲ್ಲೇ ಇಂತಹುದೇ ಪ್ರಯತ್ನ ನಡೆದಿದ್ದು, ಮಸೂದೆ ಮಂಡಿಸುವ ಪ್ರಯತ್ನ ನಡೆಸಲಾಗುತ್ತಿದೆ. ಒಂದು ವೇಳೆ ಇದು ಕಾರ್ಯರೂಪಕ್ಕೆ ಬಂದಿದ್ದೇ ಅದ್ಧೂರಿ ಮದುವೆಗಳಿಗೆ ಬ್ರೇಕ್ ಬೀಳಲಿದೆ. ಸರ್ಕಾರ ನಿರ್ದೇಶನದನ್ವಯವೇ ಮದುವೆಗಳು ನಡೆಯಲಿವೆ! ಸಂಸದ ಪಪ್ಪು ಯಾದವ್ ಅವರ ಪತ್ನಿ, ಸಂಸದೆ ರಂಜೀತ್ ರಂಜನ್ ಅವರು ದುಬಾರಿ ವಿವಾಹ ವಿರುದ್ಧ ಖಾಸಗಿ ಮಸೂದೆಯನ್ನು ಮಂಡಿಸಿದ್ದಾರೆ. ಮುಂದಿನ ಲೋಕಸಭೆ ಕಲಾಪದ ವೇಳೆಗೆ ವಿವಾಹ (ಕಡ್ಡಾಯ ನೋಂದಣಿ ಮತ್ತು ದುಂದುವೆಚ್ಚ ನಿಯಂತ್ರಣ )ಮಸೂದೆ 2016 ಮಂಡನೆಯಾಗುವ ನಿರೀಕ್ಷೆ ಇದೆ.
“ಬಡವರ ಮೇಲೆ ಒತ್ತಡ’: ವಿವಾಹದ ಹೆಸರಲ್ಲಿ ಅನಗತ್ಯ ದುಂದುವೆಚ್ಚವನ್ನು ತಡೆಯಲು ಈ ಮಸೂದೆ ನೆರವಾಗಲಿದೆ ಎಂದು ರಂಜೀತ್ ಹೇಳಿದ್ದಾರೆ. “ವಿವಾಹ ಇಬ್ಬರನ್ನೂ ಒಂದು ಸೇರಿಸುವ ಒಂದು ಮಹತ್ವದ ಕಾರ್ಯಕ್ರಮ. ಆದರೆ ಇಂದಿನ ದಿನಗಳಲ್ಲಿ ವಿವಾಹ ತಮ್ಮ ಸಂಪತ್ತನ್ನು, ಅದ್ಧೂರಿತನವನ್ನು ಸಮಾಜದೆದುರು ಪ್ರದರ್ಶಿಸಲು ಇರಲು ಒಂದು ಕಾರಣವಾಗುತ್ತಿದೆ ಎಂದು ಅವರು ಹೇಳಿದ್ದಾರೆ. “ವಿವಾಹಗಳು ಸಂಪತ್ತಿನ ಪ್ರದರ್ಶನದ ಕಾರ್ಯಕ್ರಮಗಳಾಗುತ್ತಿರುವುದರಿಂದ ಬಡ ಕುಟುಂಬಗಳು ವಿಪರೀತ ಖರ್ಚು ಮಾಡುವಂತೆ ಒತ್ತಡ ಬೀಳುತ್ತಿದೆ.
ಆದ್ದರಿಂದ 5 ಲಕ್ಷ ರೂ. ಖರ್ಚು ಮಾಡುವವರು ಮೊತ್ತದ ಶೇ.10ರಷ್ಟನ್ನು ಬಡ ಕುಟುಂಬದ ಹೆಣ್ಮಕ್ಕಳ ವಿವಾಹಕ್ಕೆ ಉಪಯೋಗಿಸುವಂತೆ ಮಾಡಬೇಕು. ಇದಕ್ಕಾಗಿ ಸರ್ಕಾರ ಪ್ರತ್ಯೇಕ ನಿಧಿಯೊಂದನ್ನು ಸ್ಥಾಪಿಸಿ ಕ್ರಮಕೈಗೊಳ್ಳಬೇಕು’ ಎಂದು ರಂಜೀತ್ ಹೇಳಿದ್ದಾರೆ.
ಮಸೂದೆಯಲ್ಲಿ ಏನಿದೆ?: ಮಸೂದೆ ಪ್ರಕಾರ, 5 ಲಕ್ಷ ರೂ. ಮೀರಿ ವಿವಾಹಕ್ಕೆ ಖರ್ಚು ಮಾಡಿದರೆ, ಅದರ ಶೇ.10ರಷ್ಟು ಹವನ್ನು ಬಡ ಕುಟುಂಬದ ಹೆಣ್ಣುಮಕ್ಕಳ ವಿವಾಹಕ್ಕೆ ದೇಣಿಗೆಯಾಗಿ ನೀಡಬೇಕು. ಜೊತೆಗೆ ವಿವಾಹವಾದ 60 ದಿನಗಳ ಒಳಗೆ ಕಡ್ಡಾಯ ನೋಂದಣಿ ಅಗತ್ಯ. ಇದರೊಂದಿಗೆ ಅತಿಥಿಗಳ ಸಂಖ್ಯೆ, ಮದುವೆ ಭೋಜನದ ಕುರಿತಾಗಿ ಸರ್ಕಾರ ನಿರ್ದೇಶನ ನೀಡುವ ಬಗ್ಗೆ ಹೇಳಲಾಗಿದೆ.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.