![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-415x229.jpg)
ಜೈಲಿಗೆ ಹೋಗೊ ಮುನ್ನ ಶಶಿಕಲಾ ರಣತಂತ್ರ, ಜಯಾ ಹಾದಿ ಹಿಡಿದ ಚಿನ್ನಮ್ಮ!
Team Udayavani, Feb 14, 2017, 12:31 PM IST
![Ranathanathra.jpg](https://www.udayavani.com/wp-content/uploads/2017/02/14/Ranathanathra.jpg)
ಚೆನ್ನೈ: ಅಕ್ರಮ ಆಸ್ತಿ ಪ್ರಕರಣದಲ್ಲಿ ವಿಕೆ ಶಶಿಕಲಾ ನಟರಾಜನ್ ದೋಷಿ ಎಂದು ಹೇಳಿರುವ ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಬೆಂಗಳೂರಿನ ವಿಶೇಷ ಕೋರ್ಟ್ ಗೆ ಶರಣಾಗುವ ಮುನ್ನ ಶಶಿಕಲಾ ಶತಾಯಗತಾಯ ಹಂಗಾಮಿ ಸಿಎಂ ಪನ್ನೀರ್ ಸೆಲ್ವಂ ಯಾವುದೇ ಕಾರಣಕ್ಕೂ ಸಿಎಂ ಪಟ್ಟ ಅಲಂಕರಿಸಬಾರದೆಂಬ ಹಠಕ್ಕೆ ಬಿದ್ದಿದ್ದಾರೆ. ಆ ನಿಟ್ಟಿನಲ್ಲಿ ಶಶಿಕಲಾ ಜೆ.ಜಯಲಲಿತಾ ಅವರ ಹಾದಿಯನ್ನೇ ಅನುಸರಿಸುವ ಮೂಲಕ ರಣತಂತ್ರ ಹೆಣೆಯುವ ಮೂಲಕ ಕ್ಷಿಪ್ರ ರಾಜಕೀಯ ಬೆಳವಣಿಗೆ ನಡೆಯುತ್ತಿದೆ ಎಂದು ಮಾಧ್ಯಮಗಳ ವರದಿ ತಿಳಿಸಿದೆ.
ಈ ಹಿಂದೆಯೂ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಅಂದು ಸಿಎಂ ಆಗಿದ್ದ ಜಯಲಲಿತಾ ಜೈಲುಪಾಲಾದಾಗ, ಬಲಗೈ ಬಂಟ ಪನ್ನೀರ್ ಸೆಲ್ವಂ ಅವರನ್ನೇ 2 ಬಾರಿ ಹಂಗಾಮಿ ಸಿಎಂ ಆಗಿ ಮಾಡಿದ್ದರು.
ಇದೀಗ ಜಯಲಲಿತಾ ನಿಧನ ನಂತರ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿಕೆ ಶಶಿಕಲಾ ವಿರುದ್ಧವೇ ಪನ್ನೀರ್ ಸೆಲ್ವಂ ಸೆಡ್ಡು ಹೊಡೆಯುವ ಮೂಲಕ ಇಬ್ಬರ ನಡುವೆಯೂ ರಾಜಕೀಯ ಜಂಗೀಕುಸ್ತಿ ನಡೆಯುವ ಮೂಲಕ ತಮಿಳುನಾಡಿನ ರಾಜಕೀಯ ಬಿಕ್ಕಟ್ಟು ತೀವ್ರಗೊಂಡಿತ್ತು.
ಆ ನಿಟ್ಟಿನಲ್ಲಿ ತಮ್ಮ ಆಪ್ತರನ್ನೇ ಸಿಎಂ ಪಟ್ಟದಲ್ಲಿ ಕೂರಿಸುವ ಬಗ್ಗೆ ಶಶಿಕಲಾ ಗೋಲ್ಡನ್ ಬೇ ರೆಸಾರ್ಟ್ ನಲ್ಲಿ ಶಾಸಕರು ಹಾಗೂ ಸಂಸದರ ಜೊತೆ ಚರ್ಚೆ ನಡೆಸಿದ್ದಾರೆ. ವಿಕೆ ಶಶಿಕಲಾ ಕುಟುಂಬದವರೇ ಸಿಎಂ(ಶಿಶಿಕಲಾ ಪತಿ ನಟರಾಜನ್ ಅಥವಾ ಅಣ್ಣ ದಿನಕರನ್) ಪಟ್ಟ ಏರಬೇಕೆಂದು ಗೋಲ್ಡನ್ ಬೇ ರೆಸಾರ್ಟ್ ನಲ್ಲಿ ಶಶಿಕಲಾ ಪರ ಕೆಲವು ಶಾಸಕರು ಒತ್ತಡ ಹೇರಿದ್ದಾರೆ ಎಂದು ವರದಿ ವಿವರಿಸಿದೆ.
ಜೈಲು ಸೇರುವ ಮುನ್ನ ಎಐಎಡಿಎಂಕೆಗೆ ಪ್ರಧಾನ ಕಾರ್ಯದರ್ಶಿ ಹಾಗೂ ತನ್ನ ಆಪ್ತರನ್ನು ಸಿಎಂ ಪಟ್ಟದಲ್ಲಿ ಕೂರಿಸುವುದು ಶಶಿಕಲಾ ಹೆಣೆದಿರುವ ಹೊಸ ತಂತ್ರವಾಗಿದೆ.
ಯಾರಿಗೆ ಸಿಎಂ ಪಟ್ಟ ದಿಂಡಿಗಲ್ ಶ್ರೀನಿವಾಸ್, ದೀಪಕ್?
ಜಯಲಲಿತಾ ಸಹೋದರ ಜಯಕುಮಾರ್ ಪುತ್ರ ದೀಪಕ್ ಗೆ ಮುಖ್ಯಮಂತ್ರಿ ಸ್ಥಾನ ಕಲ್ಪಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಹೇಳಲಾಗಿದೆ. ಎಐಎಡಿಎಂಕೆಯ ಸೆಂಗೋಟ್ಟೆಯನ್ ಅಥವಾ ಅರಣ್ಯ ಸಚಿವ ದಿಂಡಿಗಲ್ ಗೆ ಸಿಎಂ ಪಟ್ಟ ಕಟ್ಟುವ ಬಗ್ಗೆ ಚರ್ಚೆ ನಡೆದಿದೆ ಎಂದು ವರದಿ ವಿವರಿಸಿದೆ. ಒಟ್ಟಾರೆ ಪನ್ನೀರ್ ಸೆಲ್ವಂ ಯಾವುದೇ ಕಾರಣಕ್ಕೂ ಸಿಎಂ ಸ್ಥಾನದಲ್ಲಿ ಮುಂದುವರಿಯಬಾರದು ಎಂದು ಶಶಿಕಲಾ ರಣತಂತ್ರ ರೂಪಿಸಿರುವುದಾಗಿ ವರದಿ ಹೇಳಿದೆ.
ಟಾಪ್ ನ್ಯೂಸ್
![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
MUST WATCH
ಹೊಸ ಸೇರ್ಪಡೆ
![Screenshot (2)](https://www.udayavani.com/wp-content/uploads/2024/07/Screenshot-2-150x83.png)
Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್. ರೈ
![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-150x83.jpg)
Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.